LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

220 ಕೆವಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಭೂಮಿ ಪೂಜೆ ಮುಂದಿನ 30 ವರ್ಷದವರೆಗೂ ಕ್ಷೇತ್ರಕ್ಕೆ ವಿದ್ಯುತ್ ಪೂರೈಕೆ ಕೊರತೆ ಇಲ್ಲ: ಕೆ.ಜೆ. ಜಾರ್ಜ್

ನೆಲಮಂಗಲ: ನಗರದ ಬಸವನಹಳ್ಳಿಯಲ್ಲಿ ಸುಮಾರು 300 ಕೋಟಿ ರೂಗಳ ವೆಚ್ಚದಲ್ಲಿ 220ಕೆವಿ ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರು ಭೂಮಿ ಪೂಜೆ ನೆರವೇರಿಸಿದರು.ನಂತರ ಮಾತನಾಡಿ ನೆಲಮಂಗಲ ತಾಲ್ಲೂಕಿನಲ್ಲಿ ಗೃಹ ಬಳಕೆಗೆ, ಕೃಷಿ, ಕೈಗಾರಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದೆ ಸಮಸ್ಯೆ ಎದುರಾಗಿತ್ತು. ನೆಲಮಂಗಲ ತಾಲ್ಲೂಕಿ ಜನತೆಯ ಬಹುದಿನಗಳ ಬೇಡಿಕೆಯು ಇದಾಗಿದ್ದು ಇದನ್ನು ಬಗೆಹರಿಸಲು ಸುಗಮ ವಿದ್ಯುತ್ ಪೂರೈಕೆಗಾಗಿ ಇಂದು ನಾವು 220ಕೆವಿ ವಿದ್ಯುತ್ ಸ್ಥಾವರವನು ನಿರ್ಮಾಣ ಮಾಡಲು ಗುದ್ದಲಿಪೂಜೆ ನೆರವೇರಿಸಿದ್ದೇವೆ.

ಅದಕ್ಕಾಗಿ ಫೀಡರ್ ಗಳು, ಟ್ರಾನ್ಸ್ ಫಾರ್ಮರ್ ಗಳನ್ನು ನೀಡಲಾಗುತ್ತಿದೆ. ಫೀಡರ್ ಮಟ್ಟದ ಸೌರೀಕರಣದ ಮೂಲಕ ರೈತ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ಕುಸುಮ್- ಸಿ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಅನುಷ್ಠಾನಗೊಳಿಸಲಾಗುತ್ತಿದೆ.ಕೃಷಿ ಪಂಪ್ ಸೆಟ್ಗಳಿಗೆ ಸಂಬಂಧಿಸಿದ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು, ಸರ್ಕಾರ ರೈತರಿಗೆ ಸೌರಶಕ್ತಿ ಚಾಲಿತ ಪಂಪ್ ಸೆಟ್ಗಳನ್ನು ಒದಗಿಸುವ ಕುಸುಮ್-ಬಿ ಯೋಜನೆಗೆ ಆದ್ಯತೆ ನೀಡುತ್ತಿದೆ.

ರಾಜ್ಯ ಸರ್ಕಾರ ತನ್ನ ಸಬ್ಸಿಡಿ ಪಾಲನ್ನು ಶೇಕಡಾ 50 ಕ್ಕೆ ಹೆಚ್ಚಿಸಿದೆ, ಆದರೆ ಕೇಂದ್ರ ಸರ್ಕಾರವು ಶೇಕಡಾ 30 ರಷ್ಟು ಸಬ್ಸಿಡಿ ನೀಡುತ್ತದೆ. ರೈತರು ಸೌರ ಪಂಪ್ ಸೆಟ್ ಪಡೆಯಲು ವೆಚ್ಚದ ಶೇಕಡಾ 20 ರಷ್ಟು ಮಾತ್ರ ಪಾವತಿಸಬೇಕಾಗುತ್ತದೆ. ಈ ಯೋಜನೆಯು ರೈತರಿಗೆ ಗಮನಾರ್ಹವಾಗಿ ಪ್ರಯೋಜನವನ್ನು ನೀಡುತ್ತದೆ ರಾಜ್ಯಾದ್ಯಂತ ಮುಂದಿನ ಆರ್ಥಿಕ ವರ್ಷದಲ್ಲಿ 100 ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸುವ ಗುರಿ ಇದೆ ಎಂದು ಹೇಳಿದರು.

ನೆಲಮಂಗಲ ಶಾಸಕ ಶ್ರೀನಿವಾಸ ಅವರು ಮಾತನಾಡಿ ನೆಲಮಂಗಲ ತಾಲೂಕಿನಲ್ಲಿ ?300 ಕೋಟಿ ವೆಚ್ಚದ 220 ಕೆ.ವಿ ವಿದ್ಯುತ್ ಸ್ಥಾವರ ನಿರ್ಮಾಣದಿಂದ ಭವಿಷ್ಯದ ವಿದ್ಯುತ್ ಹೊರೆಯನ್ನು ನೀಗಿಸಬಹುದು ಜೊತೆಗೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಬಹುದು. ತಾಲೂಕಿಗೆ ನೆಲದಡಿ(ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್) ಅಳವಡಿಕೆಗೆ ಮಂಜೂರು ಸಿಕ್ಕಿದ್ದು ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ ನಾಲ್ಕು ವಿದ್ಯುತ್ ಉಪಕೇಂದ್ರಗಳು ಸ್ಥಾಪನೆಗೆ ಕೂಡ ಅನುಮೋದನೆ ನೀಡಿದ್ದಾರೆ ಎಂದರು.

ವಿಧಾನಪರಿಷತ್ ಸದಸ್ಯ ಎಸ್. ರವಿ ಅವರು ಮಾತನಾಡಿ ಕೈಗಾರಿಕಾ ಮತ್ತು ವಾಣಿಜ್ಯ ಸ್ಥಾವರಗಳು ಹೊಸದಾಗಿ ಸ್ಥಾಪನೆಗೊಳ್ಳುತ್ತಿದ್ದು, ವಿದ್ಯುತ್ ಹೊರೆಯು ದಿನೇ ದಿನೇ ಹೆಚ್ಚಾಗುತ್ತಿದ್ದು ವಿದ್ಯುತ್ ಪೂರೈಸಲು ಸಹಕಾರಿಯಾಗಲಿದೆ. ಜೊತೆಗೆ ಬೇಸಿಗೆ ಸಮಯದಲ್ಲಿ ರೈತರಿಗೆ ಅನುಕೂಲವಾಗುವಂತೆ ಕೃಷಿ ಪಂಪ್ ಸೆಟ್ ಗಳಿಗೆ ಹೆಚ್ಚುವರಿ ವಿದ್ಯುತ್ ಪೂರೈಸಲು ಹೆಚ್ಚು ಅನೂಕುಲವಾಯಿತು ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ, ನೆಲಮಂಗಲ ನಗರ ಸಭೆ ಅಧ್ಯಕ್ಷರಾದ ಎನ್. ಗಣೇಶ್, ಉಪಾಧ್ಯಕ್ಷರಾದ ಜಿ. ಆನಂದ್, ನೆಲಮಂಗಲ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ನಾರಯಣ ಗೌಡ, ಮಾಜಿ ಅಧ್ಯಕ್ಷರಾದ ಹೇಮಂತ್ ಕುಮಾರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು