LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

23 ವರ್ಷ ಕಾನೂನು ಹೋರಾಟದ ಬಳಿಕ ದಾವೂದ್ ಇಬ್ರಾಹಿಂನ ಮುಂಬೈ ಆಸ್ತಿ ಖರೀದಿಸಿದ ಉತ್ತರ ಪ್ರದೇಶ ವ್ಯಕ್ತಿ!

ಫಿರೋಜಾಬಾದ್: ಉತ್ತರ ಪ್ರದೇಶದ ಫಿರೋಜಾಬಾದ್ ಮೂಲದ ವ್ಯಕ್ತಿಯೊಬ್ಬರು ಮಾಫಿಯಾ ಡಾನ್ ದಾವೂದ್ ಇಬ್ರಾಹಿಂಗೆ ಸೇರಿದ ಮುಂಬೈ ಅಂಗಡಿಯನ್ನು ಖರೀದಿಸಿದ್ದಾರೆ. ಆದರೆ ಹೇಮಂತ್ ಜೈನ್(57) ಅವರು ಈ ಆಸ್ತಿಯನ್ನು ಹೊಂದಲು 23 ವರ್ಷಗಳ ಕಾನೂನು ಮತ್ತು ಅಧಿಕಾರಶಾಹಿ ಅಡೆತಡೆಗಳ ವಿರುದ್ಧ ಹೋರಾಟ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಆದಾಯ ತೆರಿಗೆ ಇಲಾಖೆ ನಡೆಸಿದ ಹರಾಜಿನಲ್ಲಿ ದಾವೂದ್‌ನ ಆಸ್ತಿಗಳನ್ನು ಖರೀದಿಸಲು ಜನ ಮುಂದೆ ಬರುತ್ತಿಲ್ಲ ಎಂದು ಪತ್ರಿಕೆಯಲ್ಲಿ ಓದಿದ ಜೈನ್, 2001ರ ಸೆಪ್ಟೆಂಬರ್‌ನಲ್ಲಿ ನಾಗ್ಪಾಡಾ ಪ್ರದೇಶದ ಜಯರಾಜ್ ಭಾಯ್ ಬೀದಿಯಲ್ಲಿರುವ 144 ಚದರ ಅಡಿ ಅಂಗಡಿಗೆ 2 ಲಕ್ಷ ರೂಪಾಯಿ ಪಾವತಿಸಿ ಆಸ್ತಿ ಖರೀದಿಸಿದ್ದಾರೆ.

ಅವರ ಪ್ರಕಾರ, ಈ ಆಸ್ತಿಯ ಪ್ರಸ್ತುತ ಮಾರುಕಟ್ಟೆ ಮೌಲ್ಯ 23 ಲಕ್ಷ ರೂ. ಆಗಿದೆ.

ಜೈನ್ ಅವರು ಆಸ್ತಿಯನ್ನು ಖರೀದಿಸಿದ ನಂತರ, ಕೇಂದ್ರ ಸರ್ಕಾರಿ ಒಡೆತನದ ಆಸ್ತಿಯ ವರ್ಗಾವಣೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿ ಅವರನ್ನು ದಾರಿ ತಪ್ಪಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆದರೆ ಅಂತಹ ಯಾವುದೇ ನಿಷೇಧ ಅಸ್ತಿತ್ವದಲ್ಲಿಲ್ಲ ಎಂದು ಅವರು ಅರ್ಥಮಾಡಿಕೊಳ್ಳಲು ಸ್ವಲ್ಪ ಸಮಯ ಹಿಡಿಯಿತು.

“ನಾನು ಪ್ರಧಾನಿ ಕಚೇರಿಗೆ ಹತ್ತಾರು ಪತ್ರಗಳನ್ನು ಬರೆದಿದ್ದೇನೆ ಮತ್ತು ಸಾಂದರ್ಭಿಕ ಉತ್ತರಗಳನ್ನು ಸ್ವೀಕರಿಸಿದ್ದೇನೆ. ಆದರೆ ನೋಂದಣಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಆದಾಯ ತೆರಿಗೆ ಇಲಾಖೆಯಿಂದ ಮೂಲ ಕಡತಗಳು ನಾಪತ್ತೆಯಾಗಿರುವುದು ವಿಳಂಬಕ್ಕೆ ಪ್ರಮುಖ ಕಾರಣ' ಎಂದು ಜೈನ್ ವಿವರಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಈ ಸಂಬಂಧ ಜೈನ್ ಅವರು ಮುಂಬೈ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಬೇಕಾಯಿತು ಮತ್ತು ಹರಾಜಿನಲ್ಲಿ ಆಸ್ತಿಯನ್ನು ಖರೀದಿಸಿದ್ದರಿಂದ ಕಾನೂನು ಹೋರಾಟ ನಡೆಸಬೇಕಾಯಿತು. ನ್ಯಾಯಾಲಯದ ಸೂಚನೆಗಳನ್ನು ಅನುಸರಿಸಿ, ಅಂತಿಮವಾಗಿ ಡಿಸೆಂಬರ್ 19, 2024 ರಂದು 1.5 ಲಕ್ಷ ರೂಪಾಯಿ ಮುದ್ರಾಂಕ ಶುಲ್ಕ ಮತ್ತು ದಂಡವನ್ನು ಪಾವತಿಸಿದ ನಂತರ ಆಸ್ತಿಯನ್ನು ಅವರ ಹೆಸರಿಗೆ ನೋಂದಣಿ ಮಾಡಲಾಗಿದೆ.

ಈ ಕಾನೂನು ವಿಜಯದ ಹೊರತಾಗಿಯೂ, ಜೈನ್‌ ಅವರು ಇನ್ನೂ ಹಲವು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅಂಗಡಿಯನ್ನು ದಾವೂದ್‌ನ ಹಿಂಬಾಲಕರು ಹಲವು ವರ್ಷಗಳಿಂದ ಆಕ್ರಮಿಸಿಕೊಂಡಿದ್ದಾರೆ ಮತ್ತು ಅವರು ಖಾಲಿ ಮಾಡಲು ಸಿದ್ಧರಿಲ್ಲ. ಹೇಮಂತ್ ಈಗ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು