LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ನ್ಯೂ ಸೆಂಚುರಿ ಶಾಲೆಯ 24ನೇ ಶಾಲಾ ವಾರ್ಷಿಕೋತ್ಸವ

ನೆಲಮಂಗಲ : ವಿದ್ಯಾರ್ಥಿಗಳಲ್ಲಿ ಸಂಕುಚಿತ ಮನೋಭಾವನೆ ಹೋಗಲಾಡಿಸಲು ಶಾಲಾ ವಾರ್ಷಿಕೋತ್ಸವ ಉತ್ತಮವಾದ ವೇದಿಕೆಯಾಗಿದೆ ಎಂದು ನಗರಸಭೆ ಉಪಾಧ್ಯಕ್ಷೆ ಸುಜಾತ ಮುನಿಯಪ್ಪ ಅವರು ನುಡಿದರು.

ನೆಲಮಂಗಲ ನಗರಸಭೆ ವ್ಯಾಪ್ತಿಯ ಶ್ರೀ ಲಕ್ಷ್ಮೀನಾರಾಯಣ ಪಾಟೀದಾರ್ ಕಲ್ಯಾಣ ಮಂಟಪದಲ್ಲಿ ನ್ಯೂ ಸೆಂಚುರಿ ಶಾಲೆಯ 24ನೇ ಶಾಲಾ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕೆಲವು ಮಕ್ಕಳು ಕೇವಲ ಒಂದೇ ವಿಷಯಕ್ಕೆ ಸೀಮಿತವಾಗಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಾರೆ.

ಓದು ಬರಹದ ಜೊತೆಗೆ ಉತ್ತಮವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹವ್ಯಾಸವನ್ನು ಸಹ ರೂಡಿಸಿಕೊಳ್ಳುವುದು ಒಳ್ಳೆಯ ಬೆಳವಣಿಗೆಯಾಗಿದೆ. ಹಲವಾರು ವಿದ್ಯಾರ್ಥಿಗಳು ಕೇವಲ ಮೊಬೈಲ್. ಟಿವಿಗೆ ಅಂಟಿಕೊಂಡಿರುತ್ತಾರೆ ಮತ್ತೆ ಕೆಲವರು ಯಾರೊಂದಿಗೂ ಬೆರೆಯದೆ ಒಬ್ಬಂಟಿಯಾಗಿರಲು ಬಯಸುತ್ತಾರೆ ಆದರೆ ಓದು ಬರಹದ ಜೊತೆಗೆ ಉತ್ತಮವಾದ ಕಾರ್ಯಕ್ರಮಗಳಲ್ಲಿ ಭಾಗವಿಸುವ ಹವ್ಯಾಸವನ್ನು ಸಹ ರೂಡಿಸಿಕೊಳ್ಳಬೇಕು.

ಚಿಕ್ಕಂದಿನಿಂದಲೇ ವೇದಿಕೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಬುದ್ಧಿಶಕ್ತಿ ಧೈರ್ಯ ಹೆಚ್ಚಿ ಭಯ ಹೋಗಲಾಡಿಸಬಹುದು ವರ್ಷದ ಶಾಲಾ ವಾರ್ಷಿ ಕೋತ್ಸವದಲ್ಲಿ ಮಕ್ಕಳು ಮನರಂಜನೆಗಳಲ್ಲಿ ಭಾಗವಹಿಸುವುದರಿಂದ ನಷ್ಟವಾಗುವುದಿಲ್ಲ ಇದಕ್ಕೆ ಪೋಷಕರ ಸಹಮತವೂ ಇರಬೇಕಿದೆ ಎಂದು ಹೇಳಿದರು.

ನ್ಯೂ ಸೆಂಚುರಿ ಶಾಲೆಯ 24ನೇ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ. ವೇಷಭೂಷಣ ಸ್ಪರ್ಧೆಯಲ್ಲಿ 4ನೇ ತರಗತಿ ವಿದ್ಯಾರ್ಥಿ ಮಾನ್ಯ.ಜಿ ಪ್ರಥಮ ಬಹುಮಾನವನ್ನು ಪಡೆದರು.ಬಳಿಕ ಶಾಲಾ ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ಮೂಡಿಬಂದವು. ಕಾರ್ಯಕ್ರಮದಲ್ಲಿ ವಿಪಿ ಮ್ಯಾಗ್ನೆಸ್ ಆಸ್ಪತ್ರೆ ಮುಖ್ಯಸ್ಥ ಡಾ.ವಿಕಾಸ್.ಎಂ. ನಗರಸಭೆ ಸದಸ್ಯರಾದ ಕೆ ಬಿ ಶಿವಕುಮಾರ್. ಅಂಜನಾ ಮೂರ್ತಿ. ಲೋಲಾಕ್ಷಿ ಗಂಗಾಧರ್. ನ್ಯೂ ಸೆಂಚುರಿ ಶಾಲಾ ಮುಖ್ಯಸ್ಥೆ ಮಮತ.ಎಂ. ಕಾರ್ಯದರ್ಶಿ ಕಾರ್ಣಿಕ್ ಗಂಗಪ್ಪ. ಮುಖ್ಯ ಶಿಕ್ಷಕಿ ಅಕ್ಷತಾ.ಎನ್. ಹಾಗೂ ಶಾಲಾ ಸಿಬ್ಬಂದಿ ವರ್ಗ ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು