LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

28ನೇ ವರ್ಷದ ಆರಾಧನಾ ಮಹೋತ್ಸವ

ಗುಂಡ್ಲುಪೇಟೆ: ತಾಲ್ಲೂಕಿನ ಬೆರಟಹಳ್ಳಿ ಗ್ರಾಮದಲ್ಲಿ ಅಕ್ಷಯ ಮಹದೇಶ್ವರ ಸ್ವಾಮಿಯ 28ನೇ ವರ್ಷದ ಆರಾಧನಾ ಮಹೋತ್ಸವ ಬುಧವಾರ ವಿಜೃಂಭಣೆಯಿಂದ ನಡೆಯಿತು.ಸಾವಿರಾರು ಜನರು ದೇವರ ದರ್ಶನ ಪಡೆದರು ಹೊಸ ವರ್ಷಕ್ಕೆ ಮಲೆಮಹದೇಶ್ವರ ಬೆಟ್ಟಕ್ಕೆ ಹೋಗುತ್ತಿದ್ದ ಗ್ರಾಮಸ್ಥರು ತಮ್ಮ ಗ್ರಾಮದ ಅಕ್ಷಯ ಮಹದೇಶ್ವರ ದೇವಾಲಯದಲ್ಲಿಯೇ ಆರಾಧನೆ ನಡೆಸುವ ಬಗ್ಗೆ ನಿರ್ಧರಿಸಿ ಕಳೆದ 28 ವರ್ಷಗಳಿಂದ ನೂತನ ವರ್ಷಾರಂಭದಂದು ಆರಾಧನಾ ಮಹೋತ್ಸವ ನಡೆಸುತ್ತಾ ಬಂದಿದ್ದಾರೆ.

ಮಹದೇಶ್ವರ ಸ್ವಾಮಿಯ ಉದ್ಭವ ಲಿಂಗಕ್ಕೆ ಎಣ್ಣೆ ಮಜ್ಜನ ಮಾಡಿ ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು.ಬಳಿಕ ಪಂಚಲೋಹದ ಕೊಳಗ ಧಾರಣೆ ಮಾಡಿ, ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಿ ಮಂಗಳಾರತಿ ನಡೆಯಿತು. ಸೋಮಹಳ್ಳಿ ಶಿಲಾಮಠದ ಸಿದ್ದಮಲ್ಲಪ್ಪ ಸ್ವಾಮೀಜಿಯವರ ಅಧ್ಯಕ್ಷತೆಯಲ್ಲಿ ಬಲಚವಾಡಿ ಭಿಕ್ಷದ ಮಠಾಧ್ಯಕ್ಷ ರಾಜೇಂದ್ರ ಸ್ವಾಮೀಜಿ ಪೂಜಾ ಕಾರ್ಯ ನೆರವೇರಿಸಿದರು.

ಗ್ರಾಮದ ಬಸವೇಶ್ವರ ದೇವಸ್ಥಾನದ ಆವರಣದಿಂದ ಪ್ರಮುಖ ಬೀದಿಗಳಲ್ಲಿ ಸಾಗಿದ ಮಹದೇಶ್ವರ ಹುಲಿವಾಹನ, ಅಶ್ವ ವಾಹನ ಉತ್ಸವ ಹಾಗೂ ಹಾಲರವಿ ಮೆರವಣಿಗೆಗೆ ಗ್ರಾಮದ ಜನತೆ ಪೂಜೆ ಸಲ್ಲಿಸಿ ತಮ್ಮ ಭಕ್ತಿ ಭಾವ ಮೆರೆದರು. ದೇವಸ್ಥಾನಕ್ಕೆ ಆಗಮಿಸಿದ್ದ ಹತ್ತು ಸಾವಿರಕ್ಕೂ ಹೆಚ್ಚನ ಭಕ್ತರಿಗೆ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು