LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಸಲ್ಲಿಕೆ

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ಇಂದು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು.

ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9 ರಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಧಿಯಲ್ಲಿ ಗ್ಯಾರಂಟಿ ಕಾರ್ಡ್ ಗಳನ್ನಿಟ್ಟು ಹರಕೆ ಕಟ್ಟಿದ್ದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಶಕ್ತಿ ನೀಡುವಂತೆ ತಾಯಿಯಲ್ಲಿ ಬೇಡಿಕೊಂಡಿದ್ದರು. ಅದರಂತೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಭೂತಪೂರ್ವ ಜಯಭೇರಿ ಬಾರಿಸಿ ಅಧಿಕಾರವನ್ನು ಹಿಡಿದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆಯುವುದರೊಳಗೆ ಭರವಸೆ ನೀಡಿದ್ದಂತೆ ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ.

ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಮೊದಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ನಾನು, ಶಾಸಕರಾದ ದಿನೇಶ್ ಗೂಳಿಗೌಡ ಇತರ ಪ್ರಮುಖರು ದೇವಿಯ ದರ್ಶನ ಮಾಡಿ ಹರಕೆ ತೀರಿಸಿದ್ದೆವು. ರಾಜ್ಯದ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು ಜಮಾ ಮಾಡುವ ತಲಾ 2 ಸಾವಿರ ರೂ.ಗಳ ಮೊದಲ ಕಂತನ್ನು ತಾಯಿ ಚಾಮುಂಡೇಶ್ವರಿ ದೇವಿಗೆ ಅಂದು ಸಮರ್ಪಣೆ ಮಾಡಿದ್ದೆವು ಎಂದು ಹೆಬಾಳ್ಕರ್ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಪ್ರತಿ ತಿಂಗಳು ತಾಯಿ ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಕಂತನ್ನು ನೀಡುವಂತೆ ಶಾಸಕ ದಿನೇಶ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ದರು. ಅವರು ತಕ್ಷಣ ಈ ಕುರಿತು ಕ್ರಮ ವಹಿಸುವಂತೆ ಸೂಚಿಸಿದ್ದರು. ಆ ಹಿನ್ನೆಲೆಯಲ್ಲಿ ಒಂದೇ ಸಲ ಎಲ್ಲಾ ಕಂತಿನ ಹಣವನ್ನು ನಾಡದೇವಿಗೆ ಅರ್ಪಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮೊದಲ ಕಂತನ್ನು ಸಿಎಂ, ಡಿಸಿಎಂ ಹಾಗೂ ನಾನು ತಾಯಿ ಚಾಮುಂಡೇಶ್ವರಿ ದೇವಿಗೆ ಅರ್ಪಿಸಿದ್ದೇವೆ. ಹಾಗಾಗಿ ಉಳಿದ 59 ತಿಂಗಳ ಹಣವನ್ನು ದೇವಿಗೆ ನಾನು ವೈಯಕ್ತಿಕವಾಗಿ ಸಲ್ಲಿಸುತ್ತಿದ್ದೇನೆ. ಈ ಮೊತ್ತವನ್ನು ಶಾಸಕರಾದ ದಿನೇಶ್ ಗೂಳಿಗೌಡ ಅವರ ಮೂಲಕ ಸಮರ್ಪಿಸುತ್ತಿದ್ದೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಗೃಹಲಕ್ಷ್ಮೀ ಯೋಜನೆಯು ದೇಶದಲ್ಲಿ, ಅಥವಾ ವಿಶ್ವದಲ್ಲಿ ಜಾರಿಯಾದ ಅತಿ ವಿಶಿಷ್ಟ ಹಾಗೂ ಜನಪ್ರಿಯ ಯೋಜನೆಯಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು