LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

77ನೇ ಗಣರಾಜ್ಯೋತ್ಸವ: ಗಮನ ಸೆಳೆದ ಪ್ರಧಾನಿ ಮೋದಿ ಪೇಟ

ನವದೆಹಲಿ: 77ನೇ ಗಣರಾಜ್ಯೋತ್ಸವದ ನಿಮಿತ್ತ ನವದೆಹಲಿಯ ಕರ್ತವ್ಯಪಥಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉಡುಗೆಯ ಶೈಲಿ ಎಲ್ಲರನ್ನು ಆಕರ್ಷಿಸಿತು. ಅವರು ಧರಿಸಿದ್ದ ಪೇಟ ವಿಶೇಷವಾಗಿತ್ತು.

ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸೋಮವಾರ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸಿದ ಮೋದಿ ಅವರು. ಪ್ರತಿ ವರ್ಷದಂತೆ ಈ ವರ್ಷವೂ ವಿಶಿಷ್ಟ ಪೇಟ ಧರಿಸಿ ಜನತೆಯ ಗಮನಸೆಳೆದಿದ್ದಾರೆ.

ಪ್ರಧಾನಿಯವರು ಈ ಬಾರಿ ಕೆಂಪು ಹಾಗೂ ಹಳದಿ ಬಣ್ಣದ ರೇಷ್ಮೆ ಜರಿ ಇರುವ ರಾಜಸ್ಥಾನ ರಾಜ್ಯದ ಸಾಂಪ್ರದಾಯಿಕ ಪೇಟವನ್ನು ಧರಿಸಿದ್ದಾರೆ. ಈ ವರ್ಷ ಮೋದಿ ಅವರು ನೀಲಿ ಕುರ್ತಾವನ್ನು ಧರಿಸಿದ್ದಾರೆ. ಜೊತೆಗೆ ತಿಳಿ ನೀಲಿ ಬಣ್ಣದ ಜಾಕೆಟ್ ಮತ್ತು ಕಪ್ಪು ಬೂಟುಗಳನ್ನು ಧರಿಸಿದ್ದಾರೆ.

ಪ್ರತಿ ಬಾರಿಯೂ ಪ್ರಧಾನಿಯವರ ಪೇಟ ಆಕರ್ಷಕವಾಗಿರುತ್ತದೆ. ಈ ಬಾರಿ ಪ್ರಧಾನಿಯವರು ಯಾವ ಬಣ್ಣದ ಪೇಟ ತೊಡುತ್ತಾರೆ ಎಂಬ ಕುತೂಹಲ ಜನರಲ್ಲಿ ಇತ್ತು. ಅಂತೆಯೇ ಇಂದು ಗಣರಾಜ್ಯೋತ್ಸವ ಪರೇಡ್‌ಗೂ ಮುನ್ನ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸುತ್ತಿದ್ದಂತೆಯೇ ಅವರು ಧರಿಸಿರುವ ಉಡುಪಿನ ಫಸ್ಟ್ ಲುಕ್ ಬಹಿರಂಗವಾಯಿತು.

ಸ್ವಾತಂತ್ರ್ಯ ದಿನ ಮತ್ತು ಗಣರಾಜ್ಯೋತ್ಸವದ ಎರಡು ಸಂದರ್ಭಗಳಲ್ಲಿ ಪ್ರಧಾನಿಯವರ ಉಡುಗೆಯ ಆಯ್ಕೆಯು ಹೆಚ್ಚಿನ ಗಮನವನ್ನು ಸೆಳೆಯುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಪ್ರಧಾನಿಯವರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸುತ್ತಾರೆ. ವಾಸ್ತವವಾಗಿ ಪ್ರಧಾನಿಯವರು ದೇಶದ ವಿವಿಧ ಭಾಗಗಳಿಗೆ ಭೇಟಿ ನೀಡಿದಾಗ ಅಲ್ಲಿನ ಸಂಸ್ಕೃತಿಯ ಬಗ್ಗೆ ಗೌರವವನ್ನು ತೋರಿಸುವ ಪ್ರಯತ್ನ ಮಾಡುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು