LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಸೀಸನ್ ಓಪನರ್‌ನಲ್ಲಿ ಸೋತವರ ಸಮರ

ಐಪಿಎಲ್ 2026ರ ಸೀಸನ್ ಓಪನರ್ ಗಳಲ್ಲಿ ಸೋಲಿನ ಕಹಿಯುಂಡಿರುವ ಕೋಲ್ಕತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಇದೀಗ ಮುಖಾಮುಖಿಯಾಗುತ್ತಿವೆ. ಸೋತವರ ನಡುವಿನ ಪಂದ್ಯ ಯಾವತ್ತೂ ತೀವ್ರ ಪೈಪೋಟಿಯಿಂದ ಕೂಡಿರುತ್ತವೆ. ಹೀಗಾಗಿ ಏಪ್ರಿಲ್ 2ರ ಗುರುವಾರದಂದು ಕೋಲ್ಕತಾದ ಈಡನ್ ಗಾರ್ಡನ್ ನಲ್ಲಿ ನಡೆಯಲಿರುವ ಪಂದ್ಯ ಹೇಗಿರಬಹುದು ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಕಳೆದ ಪಂದ್ಯದಲ್ಲಿ ವಿಫಲರಾಗಿದ್ದ ಅಭಿಷೇಕ್ ಶರ್ಮಾ ಇದೀಗ ಬ್ಯಾಟರ್ ಗಳ ಸ್ವರ್ಗವಾಗಿರುವ ಈಡನ್ ಗಾರ್ಡನ್ ನಲ್ಲಿ ರನ್ ಹೊಳೆ ಹರಿಸುವುದನ್ನು ಅವರ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.ವಿಶೇಷವೆಂದರೆ ಆರ್ ಸಿಬಿ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ಹೈದರಾಬಾದ್ ತಂಡದ ನಾಯಕ ಇಶಾನ್ ಕಿಶನ್ ಮತ್ತು ಮುಂಬೈ ವಿರುದ್ಧ ಪಂದ್ಯದಲ್ಲಿ ಕೋಲ್ಕತಾ ನಾಯಕ ಅಜಿಂಕ್ಯ ರೆಹಾನಿ ಅರ್ಧಶತಕ ಹೊಡೆದು ಮಿಂಚಿದ್ದರು. ಆದರೆ ಉಳಿದವರು ವಿಫಲರಾಗಿದ್ದರಿಂದ ತಂಡಗಳು ಸೋಲು ಕಾಣಬೇಕಾಯಿತು. ಎರಡೂ ತಂಡಗಳು ಇದೀಗ ತಮ್ಮ ಹಿಂದಿನ ಪಂದ್ಯದ ವೈಫಲ್ಯವನ್ನು ಮೆಟ್ಟಿ ನಿಂತು ಜಯಕ್ಕಾಗಿ ಹಂಬಲಿಸುತ್ತಿವೆ.
ಕೋಲ್ಕತಾ ತಂಡಕ್ಕೆ ತವರಿನ ಮೈದಾನದಲ್ಲಿ ಆಡುವ ಅವಕಾಶ ಸಹಜವಾಗಿಯೇ ಹೆಚ್ಚಿನ ಬಲ ತುಂಬಲಿದೆ. ತಂಡ ಆರಂಭಿಕರಾದ ಅಜಿಂಕ್ಯ ರಹಾನೆ ಮತ್ತು ಫಿನ್ ಅಲೆನ್ ಅವರ ಮೇಲೆ ಹೆಚ್ಚು ಅವಲಂಬಿತವಾಗಿದೆ. ಬ್ಯಾಟಿಂಗ್ ಗೆ ಮಾತ್ರ ಲಭ್ಯವಿರುವ ಕ್ಯಾಮರೂನ್ ಗ್ರೀನ್ ಕಳೆದ ಪಂದ್ಯದಲ್ಲಿ ದೊಡ್ಡ ಯಶಸ್ಸು ಕಂಡಿರಲಿಲ್ಲ. ಹೀಗಾಗಿ ಈ ಬಾರಿ ತಂಡ ಅವರಿಂದ ದೊಡ್ಡ ಇನ್ನಿಂಗ್ಸ್ ಅನ್ನು ಎದುರು ನೋಡುತ್ತಿದೆ. ಮಧ್ಯಮ ಕ್ರಮಾಂಕದಲ್ಲಿ ರಿಂಕು ಸಿಂಗ್ ಅವರು ರನ್ ರೇಟ್ ಗೆ ವೇಗ ನೀಡಬೇಕಾದ ಅಗತ್ಯವಿದೆ. ಕೋಲ್ಕತಾ ತಂಡದ ಬೌಲಿಂಗ್ ವಿಭಾಗ ಬಲಿಷ್ಠವಾಗಿ ಕಂಡರೂ ಸೆಟ್ ಆದಂತೆ ಕಾಣುತ್ತಿಲ್ಲ. ಆಧರೆ ರಶೀದ್ ಖಾನ್, ವರುಣ್ ಚಕ್ರವರ್ತಿ ಮತ್ತು ಬ್ಲೆಸ್ಸಿಂಗ್ ಮುಝರಬಾನಿ ಅವರು ಲಯ ಕಂಡುಕೊAಡಲ್ಲಿ ಸನ್ ರೈಸರ್ಸ್ ಬ್ಯಾಟಿಂಗ್ ಪಡೆ ಮುಳುಗುವುದು ಖಚಿತ.ಈಡನ್ ಗಾರ್ಡನ್ಸ್, ಪಿಚ್ ವರದಿ 90ರ ದಶಕದಲ್ಲಿ ಈಡನ್ ಗಾರ್ಡನ್ಸ್ನ ಪಿಚ್ ಬೌಲರ್ ಗಳ ಸ್ವರ್ಗವಾಗಿತ್ತು. ಆದರೆ ಈಗ ಕಾಲ ಬದಲಾಗಿದೆ. ಚುಟುಕು ಕ್ರಿಕೆಟ್ ಯುಗದಲ್ಲಿ ಇಲ್ಲಿನ ಪಿಚ್ ನ ಸ್ವರೂಪ ಸಂಪೂರ್ಣ ಬದಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು