LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್

ವಾಷಿಂಗ್ಟನ್: ವಿಚ್ಛೇದನ ಪ್ರಕರಣದ ವಿಚಾರವಾಗಿ ವರ್ಜೀನಿಯಾ ಮಾಜಿ ಗವರ್ನರ್‌ವೊಬ್ಬರು ಪತ್ನಿಯನ್ನು ಗುಂಡಿಕ್ಕಿ ಕೊಂದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ವರ್ಜೀನಿಯಾದ ಮಾಜಿ ಲೆಫ್ಟಿನೆಂಟ್ ಗವರ್ನರ್ ಜಸ್ಟಿನ್ ಫೇರ್‌ಫ್ಯಾಕ್ಸ್, ಡೆಮಾಕ್ರಟಿಕ್ ಪಕ್ಷದಲ್ಲಿ ಉದಯೋನ್ಮುಖ ತಾರೆಯಾಗಿದ್ದರು. ಆದರೆ, ಲೈಂಗಿಕ ದೌರ್ಜನ್ಯದ ಆರೋಪಗಳು ಅವರ ರಾಜಕೀಯ ಭವಿಷ್ಯವನ್ನು ಹಾಳುಮಾಡಿತು. ಗಂಭೀರ ಆರೋಪಗಳನ್ನು ಹೊತ್ತ ಫೇರ್‌ಫ್ಯಾಕ್ಸ್ರನ್ನು ಮನೆಯಿಂದ ಹೊರಹಾಕಲಾಯಿತು. ಈ ಘಟನೆಗಳ ಬಳಿಕ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಫೇರ್‌ಫ್ಯಾಕ್ಸ್ (47) ಮತ್ತು ಅವರ ಪತ್ನಿ ಡಾ. ಸೆರಿನಾ ಫೇರ್‌ಫ್ಯಾಕ್ಸ್ (49) ಅವರ ಶವಗಳು ಮನೆಯಲ್ಲಿ ಪತ್ತೆಯಾಗಿವೆ ಎಂದು ಫೇರ್‌ಫ್ಯಾಕ್ಸ್ ಕೌಂಟಿ ಪೊಲೀಸ್ ಮುಖ್ಯಸ್ಥ ಕೆವಿನ್ ಡೇವಿಸ್ ತಿಳಿಸಿದ್ದಾರೆ. ಜಸ್ಟಿನ್ ಫೇರ್‌ಫ್ಯಾಕ್ಸ್ ಯಶಸ್ವಿ ದಂತವೈದ್ಯೆಯಾಗಿದ್ದ ತನ್ನ ಪತ್ನಿಯನ್ನು ನೆಲಮಾಳಿಗೆಯಲ್ಲಿ ಗುಂಡು ಹಾರಿಸಿ ಕೊಂದಿದ್ದಾರೆ. ನಂತರ ಮೇಲಿನ ಮಹಡಿಯ ಮಲಗುವ ಕೋಣೆಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪತ್ನಿ ಕಳೆದ ವರ್ಷ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದಾಗ ಫೇರ್‌ಫ್ಯಾಕ್ಸ್ ಹತಾಷೆಗೊಂಡಿದ್ದರು ಎಂದು ಅವರ ಸ್ನೇಹಿತ ತಿಳಿಸಿದ್ದಾರೆ. ಒಂದು ದಶಕದ ಹಿಂದೆ, ಜಸ್ಟಿನ್ ಫೇರ್‌ಫ್ಯಾಕ್ಸ್ ಅವರ ರಾಜಕೀಯ ಜೀವನವು ಉತ್ತುಂಗಕ್ಕೇರಿತ್ತು. ಅವರು 2017 ರಲ್ಲಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಸ್ಪರ್ಧಿಸಿ ಗೆದ್ದರು. ಎರಡು ವರ್ಷಗಳ ನಂತರ ಡೆಮಾಕ್ರಟಿಕ್ ಗವರ್ನರ್ ರಾಲ್ಫ್ ನಾರ್ಥಮ್ ಅವರ ವೈದ್ಯಕೀಯ ಶಾಲೆಯ ವಾರ್ಷಿಕ ಪುಸ್ತಕದಲ್ಲಿ ಜನಾಂಗೀಯ ಫೋಟೋ ಇರುವುದರಿಂದ ರಾಜೀನಾಮೆ ನೀಡುವಂತೆ ವ್ಯಾಪಕ ಕರೆಗಳು ಬಂದವು. ಇದೇ ಹೊತ್ತಿನಲ್ಲಿ ಅವರ ಮೇಲೆ ಇಬ್ಬರು ಮಹಿಳೆಯಿಂದ ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿ ಬಂದಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು