LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಸ್ಮೃತಿ-ದೀಪ್ತಿ ಸಾಹಸಕ್ಕೆ ಚೆಲ್ಲಾಪಿಲ್ಲಿಯಾದ ಪಾಕ್: ಶುಭಾರಂಭ

ಸ್ಮೃತಿ ಮಂದಾನ ಅವರ ಆಕರ್ಷಕ ಅರ್ಧಶತಕ ಮತ್ತು ದೀಪ್ತಿ ಶರ್ಮಾ ಅವರ ಮಾಂತ್ರಿಕ ಬೌಲಿಂಗ್ ನ ನೆರವಿನಿಂದ ಪಾಕಿಸ್ತಾನವನ್ನು 64 ರನ್ ಗಳಿಂದ ಸೋಲಿಸಿದ ಭಾರತ ತಂಡ ಐಸಿಸಿ ಮಹಿಳಾ ಟಿ20 ವಿಶ್ವಕಪ್ ನಲ್ಲಿ ಭರ್ಜರಿ ಶುಭಾರಂಭ ಮಾಡಿದೆ. ಕಳೆದ ವರ್ಷವಷ್ಟೇ ಏಕದಿನ ವಿಶ್ವಕಪ್ ನಲ್ಲಿ ಚಾಂಪಿಯನ್ ಆಗಿದ್ದ ಹರ್ಮನ್ ಪ್ರೀತ್ ಕೌರ್ ಪಡೆಗೆ ಈ ಮಹತ್ವದ ಟೂರ್ನಿಯಲ್ಲಿ ಮುಂದುವರಿಯಲು ಬಹಳ ದೊಡ್ಡ ಆತ್ಮವಿಶ್ವಾಸವನ್ನು ತಂದಿತ್ತಿದೆ.ಬರ್ಮಿಂಗ್ ಹ್ಯಾಂನಲ್ಲಿ ಜೂನ್ 14ರ ಭಾನುವಾರದಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 170 ರನ್ ಪೇರಿಸಿತು. ಇದಕ್ಕುತ್ತರವಾಗಿ ಪಾಕಿಸ್ತಾನ ತಂಡ 17 ಓವರ್ ಗಳಲ್ಲಿ 106 ರನ್ ಗಳಿಗೆ ಸರ್ವಪತನ ಕಂಡಿತು. 5 ವಿಕೆಟ್ ಕಬಳಿಸಿದ ದೀಪ್ತಿ ಶರ್ಮಾ ಅವರು ಅರ್ಹವಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಪಂದ್ಯದಲ್ಲಿ ಭಾರತದ ಆಟಗಾರ್ತಿಯರು ಪಾಕಿಸ್ತಾನದ ಆಟಗಾರ್ತಿಯರೊಂದಿಗೆ ಹಸ್ತಲಾಘವ ನಿರಾಕರಣೆ ಅಭಿಯಾನವನ್ನು ಈ ಪಂದ್ಯದಲ್ಲೂ ಮುಂದುವರಿಸಿದರು.ಸವಾಲಿನ ಮೊತ್ತ ಬೆಂಬತ್ತಿ ಹೊರಟ ಪಾಕಿಸ್ತಾನ ತಂಡಕ್ಕೆ ಸ್ಪಿನ್ನರ್ ಗಳಾದ ದೀಪ್ತಿ ಶರ್ಮಾ ಮತ್ತು ಶ್ರೀಚರಣಿ ಕಬ್ಬಿಣದ ಕಡಲೆಯಾದರು. ದೀಪ್ತಿ ಶರ್ಮಾ ಅವರು 5 ವಿಕೆಟ್ ಕಬಳಿಸಿದರೆ, ಶ್ರೀ ಚರಣಿ 3 ವಿಕೆಟ್ ತಮ್ಮದಾಗಿಸಿಕೊಂಡರು. ಆರಂಭಿಕ ಆಟಗಾರ್ತಿ ಮುನೀಬಾ ಅಲಿ(35 ಎಸೆತದಲ್ಲಿ 41) ಅವರನ್ನು ಹೊರತುಪಡಿಸಿದರೆ ಬೇರಾವ ಬ್ಯಾಟರ್ ಸಹ ಭಾರತದ ದಾಳಿಯನ್ನು ಎದುರಿಸುವಲ್ಲಿ ವಿಫಲರಾದರು.ಸ್ಮೃತಿ- ಕೌರ್ ಜೊತೆಯಾಟ ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿಕೊಂಡಿದ್ದ ಭಾರತದ ಮೊತ್ತ 18 ಆಗುವಷ್ಟರಲ್ಲಿ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಮತ್ತು 3ನೇ ಕ್ರಮಾಂಕದ ಬ್ಯಾಟರ್ ಜೆಮಿಮಾ ರೊಡ್ರಿಗಸ್ ಅವರ ವಿಕೆಟ್ ಪಡೆಯುವಲ್ಲಿ ಪಾಕ್ ಬೌಲರ್ ಗಳು ಸಫಲರಾದರು. ಈ ಹಂತದಲ್ಲಿ ಒಂದಾದ ಉಪನಾಯಕಿ ಮತ್ತು ಸ್ಮೃತಿ ಮಂದಾನ ಮತ್ತು ನಾಯಕಿ ಹರ್ಮನ್ ಪ್ರೀತ್ ಕೌರ್ ಕುಸಿತವನ್ನು ತಡೆದುದ್ದಲ್ಲದೆ ತಂಡದ ರನ್ ಗಳಿಕೆಗೂ ವೇಗವನ್ನು ತಂದಿತ್ತರು. ಹೀಗಾಗಿ 12.4 ಓವರ್ ಗಳಲ್ಲಿ ತಂಡ 100ರ ಗಡಿಯನ್ನು ದಾಟಿತು.ಈ ವೇಳೆ ಅರ್ಧಶತಕ ಗಳಿಸಿ ಉತ್ತಮವಾಗಿ ಆಡುತ್ತಿದ್ದ ಸ್ಮೃತಿ ಮಂದಾನ ಅವರು ರಮೀನ್ ಶಮೀಮ್ ಎಸೆತದಲ್ಲಿ ಫಾತಿಮಾ ಸನಾಗೆ ಕ್ಯಾಚಿತ್ತು ಔಟಾದರು. 44 ಎಸೆತಗಳನ್ನು ಎದುರಿಸಿದ್ದ ಅವರು 9 ಬೌಂಡರಿ ಮತ್ತು 2 ಸಿಕ್ಸರ್ ಗಳಿದ್ದ 68 ರನ್ ಗಳಿಸಿದರು. ಅವರೊಂದಿಗೆ 91 ರನ್ ಗಳ ಜೊತೆಯಾಟವಾಡಿದ ಹರ್ಮನ್ ಪ್ರೀತ್ ಕೌರ್ ಅವರು 35 ಎಸೆತದಲ್ಲಿ 4 ಬೌಂಡರಿಗಳಿದ್ದ 36 ರನ್ ಗಳಿಸಿ ಫಾತಿಮಾ ಸನಾಗೆ ವಿಕೆಟ್ ಒಪ್ಪಿಸಿದರು. ಪಂದ್ಯದಲ್ಲಿ 1 ರನ್ ಗಳಿಸುತ್ತಲೇ ಅವರು ಮಹಿಳಾ ಟಿ20 ವಿಶ್ವಕಪ್ ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಮಿಥಾಲ್ ರಾಜ್ ಅವರ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಂಡರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು