LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bellary

ಕನಕದಾಸ ಜಯಂತಿ ಪ್ರಯುಕ್ತ ಹಳೇಬೀಡಿನಲ್ಲಿ ವೈಭವದ ಮೆರವಣಿಗೆ

ಹಳೇಬೀಡು: ಕನಕದಾಸ ಜಯಂತಿ ಪ್ರಯುಕ್ತ ಹಳೇಬೀಡಿನಲ್ಲಿ ಬುಧವಾರ ವೈಭವದ ಮೆರವಣಿಗೆ ನಡೆಯಿತು.ಕನಕದಾಸರ ಚಿತ್ರವನ್ನು ಹೂವಿನಿಂದ ಅಲಂಕರಿಸಿದ್ದ ಮಂಟಪದಲ್ಲಿ ಆರೋಹಣ ಮಾಡಲಾಯಿತು. ನಂತರ ಚಿತ್ರಕ್ಕೆ ಪೂಜೆ ನೆರವೇರಿಸಲಾಯಿತು. ಅತಿಥಿಗಣ್ಯರು ಪೂಜೆ ನೆರವೇರಿಸಿಲ ನಂತರ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಕಲಾತಂಡಗಳೊಂದಿಗೆ ಹೊಯ್ಸಳ ವೃತ್ತದಿಂದ ಹೊರಟ ಮೆರವಣಿಗೆ ದೇವಾಲಯ ರಸ್ತೆ, ಬೇಲೂರು ರಸ್ತೆಯಲ್ಲಿ ರಾಜನಶಿರಿಯೂರು ವೃತ್ತದವರೆಗೆ ಚಲಿಸಿ, ಪುನಃ ಹೊಯ್ಸಳ ವೃತ್ತಕ್ಕೆ ಬಂದು ಸಮಾಪ್ತಿಗೊಂಡಿತು. ಅರಕಲಗೂಡುಮಾರುತಿ ವೀರಗಾಸೆ ಕಲಾ ತಂಡ ವೀರಗಾಸೆ ಪ್ರಸ್ತುತ ಪಡಿಸಿತು.

ತಗ್ಗಿನಹಳ್ಳಿ ಅಜ್ಜಂಪುರದ ಡೊಳ್ಳು ಕುಣಿತ ಜನರ ಮನಸೂರೆಗೊಂಡಿತು.ಮಲ್ಲಾಪುರದ ಬಸವ ಹಾಗೂ ಆಕರ್ಷಕ ಕೊಂಬಿನ ದಷ್ಟಪುಷ್ಟ ಟಗರು ಮೆರವಣಿಗೆಗೆ ಆಕರ್ಷಣಿ ನೀಡಿತು. ಮೆರವಣಿಗೆಗೂ ಮೊದಲು ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಹೇಮಾವತಿ ಮಂಜುನಾಥ್ ಮಾತನಾಡಿ, ಕುರುಬ ಸಮಾಜ ಒಗ್ಗಟ್ಟಿನಿಂದ ಸಾಗಬೇಕು.

ಸಮಾಜದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಿಸಬೇಕು. ಸಮಾಜದ ಪ್ರಗತಿಗಾಗಿ ಒಬ್ಬರಿಗೊಬ್ಬರು ಸಹಕಾರದಿಂದ ಜೀವಿಸಬೇಕು ಎಂದರು. ಜಿಲ್ಲಾ ಕುರುಬ ಸಮಾಜ ಪ್ರಧಾನ ಕಾರ್ಯದರ್ಶಿ ರಂಗನಾಥ, ನಿರ್ದೇಶಕ ಸಂತೋಷ್, ತಾಲ್ಲೂಕು ಕಾರ್ಯದರ್ಶಿ ವೀರಣ್ಣ.ಕೆ.ಎಂ ಮೊದಲಾದ ಗಣ್ಯರು ಭಾಗವಹಿಸಿದ್ದರು. ಕನಕ ನೌಕರ ಬಳಗ, ಕನಕ ಯುವಕರ ಬಳಗ, ಸಂಗೊಳ್ಳಿ ರಾಯಣ್ಣ ಯುವ ಬ್ರಿಗೇಡ್ ಹಾಗೂ ಸ್ಥಳೀಯ ಕುರಬ ಸಮಾಜ ಆಶ್ರಯದಲ್ಲಿ ಕನಕ ಜಯಂತಿ ನಡೆಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು