ಬೆಂಗಳೂರು: ಬಿಡದಿ ಟೌನ್ಶೀಪ್ ವಿರೋಧಿಸಿ ನಾಳೆಯಿಂದ ಜೆಡಿಎಸ್ ವತಿಯಿಂದ ನಡೆಯಲಿರುವ ಪಾದಯಾತ್ರೆಗೆ ಬೆಂಬಲಿಸಲು ಬಿಜೆಪಿ ನಿರ್ಧರಿಸಿದೆ
ಇಂದು ಬೆಳಿಗ್ಗೆ ನಗರದ ಖಾಸಗಿ ಹೋಟೆಲ್ನಲ್ಲಿ ಜಂಟಿ ಸಭೆ ನಡೆಸಿದ ಎರಡು ಪಕ್ಷದ ಮುಖಂಡರು ಈ ನಿರ್ಧಾರಕ್ಕೆ ಬಂದಿದ್ದಾರೆ.
ಈ ಸಭೆಯಲ್ಲಿ ಕೇಂದ್ರ ಸಚಿವ ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿ, ಸಂಸದ ಮಲ್ಲೇಶ್ಬಾಬು, ವಿಧಾನಪರಿಷತ್ ಸದಸ್ಯ ಬೋಜೇಗೌಡ ವಿಧಾನಸಭೆ ಜೆಡಿಎಲ್ಪಿ ನಾಯಕ ಸುರೇಶ್ಬಾಬು ಬಿಜೆಪಿಯ ಎರಡು ಸದನಗಳ ವಿಪಕ್ಷ ನಾಯಕರಾದ ಆರ್. ಅಶೋಕ್ ಛಲವಾದಿ ನಾರಾಯಣಸ್ವಾಮಿ ಶಾಸಕ ಸಿ.ಸಿ. ಪಾಟೀಲ್ ಪಾಲ್ಗೊಂಡಿದ್ದರು.
ಈ ಸಭೆಯಲ್ಲಿ ಎರಡು ಪಕ್ಷಗಳು ಮುಂದಿನ ದಿನಗಳಲ್ಲಿ ಒಟ್ಟಾಗಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲು ತೀರ್ಮಾನ ಕೈಗೊಂಡಿದ್ದಾರೆ.