ಹಾಸನ: ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಯುವತಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದೆ.ನಗರದ ಸಾಕಮ್ಮ-ಮಂಜಶೆಟ್ಟಿ ದಂಪತಿ ಪುತ್ರಿ ರಚಿತಾ(19) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವತಿ.
ಈಕೆ ಮೊದಲ ವರ್ಷದ ಬಿಎ ಓದುತ್ತಿದ್ದಳು. ಆ.21 ರ ರಾತ್ರಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಪೋಷಕರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.