LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ನಕಲಿ ಔಷಧ ಜಾಲಕ್ಕೆ ಕಡಿವಾಣಕ್ಕೆ ಕ್ರಮ 

ಸುಳಿವು ನೀಡಿದವರಿಗೆ 50 ಸಾವಿರ ಬಹುಮಾನ!



ಬೆಂಗಳೂರು: ದೇಶಾದ್ಯಂತ ನಕಲಿ ಔಷಧ ಜಾಲದ ಸಂಪರ್ಕದ ಬಗ್ಗೆ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಕರ್ನಾಟಕ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ನಕಲಿ ಔಷಧಗಳ ತಯಾರಿಕೆ, ದಾಸ್ತಾನು, ಮಾರಾಟ ಮತ್ತು ಪೂರೈಕೆಯ ಬಗ್ಗೆ ಮಾಹಿತಿ ನೀಡುವ ಸಾರ್ವಜನಿಕರಿಗೆ 10 ಸಾವಿರ ರೂ.ನಿಂದ 50 ಸಾವಿರ ರೂ.ವರೆಗೆ ನಗದು ಬಹುಮಾನ ನೀಡಲು ಇಲಾಖೆ ಮುಂದಾಗಿದೆ.ನಕಲಿ ಔಷಧಗಳ ಜಾಲದ ಬಗ್ಗೆ ಸಾರ್ವಜನಿಕರಿಂದಲೇ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆಗೆ ಮತ್ತಷ್ಟು ಬಲ ನೀಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಅನುಮಾನಾಸ್ಪದ ಔಷಧಗಳು, ಮೆಡಿಕಲ್ ಸ್ಟೋರ್‌ಗಳು ಅಥವಾ ನಕಲಿ ಔಷಧ ದಂಧೆಯ ಬಗ್ಗೆ ಮಾಹಿತಿ ಇದ್ದರೆ ಔಷಧ ನಿಯಂತ್ರಣ ಮಂಡಳಿ ಸಹಾಯವಾಣಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.
ಸಾರ್ವಜನಿಕರಿಂದ ಲಭ್ಯವಾಗುವ ಮಾಹಿತಿಯನ್ನು ಆಧರಿಸಿ ಔಷಧ ನಿಯಂತ್ರಣ ಅಧಿಕಾರಿಗಳು ಪರಿಶೀಲನೆ ಹಾಗೂ ತನಿಖೆ ನಡೆಸಲಿದ್ದಾರೆ. ನಕಲಿ ಔಷಧ ತಯಾರಿಕೆ ಅಥವಾ ಮಾರಾಟದ ಬಗ್ಗೆ ಖಚಿತ ಸುಳಿವು ದೊರೆತರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಇಲಾಖೆ ಮುಂದಾಗಿದೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಪತ್ತೆಯಾದ ನಕಲಿ ಔಷಧ ತಯಾರಿಕಾ ಜಾಲದ ತನಿಖೆ ದೇಶದ ಹಲವು ರಾಜ್ಯಗಳಿಗೆ ವಿಸ್ತರಿಸಿರುವ ಸಾಧ್ಯತೆ ಬೆಳಕಿಗೆ ಬಂದಿತ್ತು. ಬೆಂಗಳೂರಿನಿAದ ಮುಂಬೈವರೆಗೆ ಸಂಪರ್ಕ ಹೊಂದಿರುವ ಅಂತರರಾಜ್ಯ ಜಾಲದ ಬಗ್ಗೆ ದೇಶದ ವಿವಿಧ ರಾಜ್ಯಗಳ ಆಡಿ Controllers ಮತ್ತು State Licensing Authorities ಎಚ್ಚರಿಕೆ ನೀಡಲಾಗಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST