LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕಾನೂನು ರೂಪಿಸುವುದರಲ್ಲಿ ಜನಪ್ರತಿನಿಧಿಗಳ ಸಕ್ರಿಯ ಪಾತ್ರ: ಸಭಾಧ್ಯಕ್ಷ ಯು.ಟಿ.ಖಾದರ್

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಅಂದರೆ ಸಮಯಕ್ಕೆ ಸರಿಯಾಗಿ ಕೇವಲ ಚುನಾವಣೆಗಳನ್ನು ನಡೆಸುವುದಷ್ಟೇ ಅಲ್ಲ. ಚುನಾವಣೆಯ ಮೂಲಕ ಆಯ್ಕೆಯಾಗುವ ಜನಪ್ರತಿನಿಧಿಗಳು ತಮ್ಮ ಪ್ರಾಮಾಣಿಕತೆ, ಬದ್ಧತೆ ಮತ್ತು ಜನಪರ ಕಾಳಜಿಯೊಂದಿಗೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಿ, ಜನರ ಆಶಯಗಳನ್ನು ಪ್ರತಿಬಿಂಬಿಸುವ ಕಾನೂನುಗಳನ್ನು ರೂಪಿಸುವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕಾಗಿರುವುದೇ ಪ್ರಜಾಪ್ರಭುತ್ವವನ್ನು ಬಲಿಷ್ಠಗೊಳಿಸುವ ಮೂಲ ಆಧಾರವಾಗಿದೆ ಎಂದು ಕರ್ನಾಟಕ ವಿಧಾನ ಸಭೆಯನ್ನು ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಹೇಳಿದ್ದಾರೆ.
ಉತ್ತರ ಪ್ರದೇಶ ವಿಧಾನ ಮಂಡಲದಲ್ಲಿ ನಡೆದ, ಸ್ಪೀಕರ್ ಗಳ ಸಮ್ಮೇಳನದಲ್ಲಿ ಮಾತನಾಡಿದ ಅವರು ವಿಧಾನಮಂಡಲವು ಪ್ರಜಾಪ್ರಭುತ್ವದ ಹೃದಯವಾಗಿದ್ದು, ಶಾಸಕರು ಮತ್ತು ಜನಪ್ರತಿನಿಧಿಗಳು ಅದರ ಪ್ರಮುಖ ಅಂಗಗಳಾಗಿದ್ದಾರೆ. ಜನರ ಆಶಯಗಳನ್ನು ಧ್ವನಿಯಾಗಿ ಪರಿವರ್ತಿಸಿ, ಸಮಾಜಕ್ಕೆ ಅಗತ್ಯವಾದ ಕಾನೂನುಗಳನ್ನು ರೂಪಿಸುವ ಮಹತ್ತರ ಹೊಣೆಗಾರಿಕೆ ಇವರ ಮೇಲಿದೆ. ಆದ್ದರಿಂದ, ಶಾಸಕರ ಹಾಗೂ ಜನಪ್ರತಿನಿಧಿಗಳ ಸಾಮರ್ಥ್ಯವರ್ಧನೆ ಇಂದಿನ ತುರ್ತು ಅಗತ್ಯವಾಗಿದ್ದು, ಈ ದಿಕ್ಕಿನಲ್ಲಿ ನಡೆಯುತ್ತಿರುವ ಚರ್ಚೆಗಳು ಅತ್ಯಂತ ಸ್ವಾಗತಾರ್ಹ ಹಾಗೂ ಸಂತೋಷಕರ ಸಂಗತಿಯಾಗಿವೆ ಎಂದರು.
ಓರ್ವ ಜನಪ್ರತಿನಿಧಿಯ ಕರ್ತವ್ಯವು ಕೇವಲ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರುವುದಕ್ಕೆ ಮಾತ್ರ ಸೀಮಿತವಾಗಿರದೆ, ವಿಧಾನಸಭೆಯ ಅಧಿವೇಶನಗಳು ಹಾಗೂ ಕಾನೂನು ರೂಪಣೆಗೆ ಸಂಬAಧಿಸಿದ ಮಹತ್ವದ ಸಭೆಗಳಲ್ಲಿ ಸಮಾಜದ ವಿವಿಧ ವರ್ಗಗಳ ಆಶಯಗಳನ್ನು ಸಮರ್ಥವಾಗಿ ಪ್ರತಿಬಿಂಬಿಸುವ ಜವಾಬ್ದಾರಿಯನ್ನೂ ಒಳಗೊಂಡಿರುತ್ತದೆ. ಈ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯವಾದ ಜ್ಞಾನ, ಅಧ್ಯಯನ ಮತ್ತು ಸಮಗ್ರ ಮಾಹಿತಿಯನ್ನು ಹೊಂದಿರುವುದು ಅತ್ಯಂತ ಅವಶ್ಯಕ. ಆದ್ದರಿಂದ, ಜನಪ್ರತಿನಿಧಿಗಳಿಗೆ ಕಾಲಕಾಲಕ್ಕೆ ಮಾಹಿತಿಯನ್ನೊಳಗೊಂಡ ಕಾರ್ಯಾಗಾರಗಳು ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಅತ್ಯಂತ ಉಪಯುಕ್ತವಾಗಿದೆ ಎಂದು ತಿಳಿಸಿದರು.
ಒಬ್ಬ ವ್ಯಕ್ತಿ ಶಾಸಕನಾಗುವ ಮೊದಲು ಅಧಿವೇಶನಗಳನ್ನು ವೀಕ್ಷಿಸಿ, `ನಾನೂ ಜನಪ್ರತಿನಿಧಿಯಾಗಿ ಭಾಗವಹಿಸಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು’ ಎಂಬ ಆಸೆ ಹೊಂದಿರುವುದು ಸಾಮಾನ್ಯ. ಆದರೆ, ಶಾಸಕನಾದ ನಂತರ ಅಧಿವೇಶನಗಳಲ್ಲಿ ಭಾಗವಹಿಸಲು ಅನಾಸಕ್ತಿ ತೋರಿಸುವುದು ಗಂಭೀರ ಚಿಂತನೆಯ ವಿಷಯವಾಗಿದೆ. ಈ ಕುರಿತು ಶಾಸಕರು ಅಧಿವೇಶನಗಳಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ರಾಷ್ಟçಮಟ್ಟದಲ್ಲಿ ಸ್ಪಷ್ಟ ನಿಯಮಗಳನ್ನು ರೂಪಿಸುವ ಅಗತ್ಯವಿದೆ ಎಂಬ ವಿಚಾರದ ಮೇಲೂ ಚರ್ಚೆ ನಡೆಯಬೇಕು ಎಂದು ಹೇಳಿದರು.
ಸಾರ್ವಜನಿಕ ಟೀಕೆ-ಟಿಪ್ಪಣಿಗಳು ಎಷ್ಟೇ ಇದ್ದರೂ, ಜನಪ್ರತಿನಿಧಿಗಳು ಮತ್ತು ಶಾಸಕರು ತಮ್ಮ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವಲ್ಲಿ ಸ್ಪೀಕರ್‌ಗಳು ಸಕ್ರಿಯವಾಗಿ ಮುಂದಾಗಬೇಕು. ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಶಾಸಕರಿಗೆ ಅಗತ್ಯವಿರುವ ಕೆಲವು ಪ್ರಮುಖ ಸೌಲಭ್ಯಗಳನ್ನು ಈಗಾಗಲೇ ಒದಗಿಸಲಾಗಿದೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು