LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಕೆ.ಸುಧಾಕರ್ ವಿರುದ್ಧ ಕಾರ್ಯಕರ್ತರ ಅಸಮಾಧಾನ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕ ಸಭಾ ಕ್ಷೇತ್ರದ ಅಧಿಕೃತ ಬಿಜೆಪಿ ಅಭ್ಯರ್ಥಿಯಾಗಿ ಡಾ. ಕೆ ಸುಧಾಕರ್ ಹೆಸರು ಘೋಷಣೆಯಾಗುತ್ತಿದ್ದಂತೆ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದೆ.ಅಲೋಕ್ ವಿಶ್ವನಾಥ್ ಅವರಿಗೆ ಟಿಕೆಟ್ ಕೈತಪ್ಪಿದ್ದರಿಂದ ಪಕ್ಷದ ಕಾರ್ಯಕರ್ತರು ಸೋಮವಾರವಷ್ಟರ ಗೋ ಬ್ಯಾಕ್ ಸುಧಾಕರ್ ಅಭಿಯಾನ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಮಂಗಳವಾರ ದೊಡ್ಡಬಳ್ಳಾಪುರದಲ್ಲೂ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಡಾ.ಕೆ.ಸುಧಾಕರ್ ಸ್ಪರ್ಧೆ ವಿರೋಧಿಸಿ ಅವರ ಎದುರಲ್ಲೇ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತ- ಮುಖಂಡರನ್ನು ವಿಶ್ವಾಸಕ್ಕೆ ಪಡೆಯುವ ಸಲುವಾಗಿ ಸ್ಥಳೀಯ ಶಾಸಕರ ಸಮ್ಮುಖದಲ್ಲಿ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಡಾ.ಕೆ.ಸುಧಾಕರ್ ಮಾತನಾಡಲು ಎದ್ದುನಿಲ್ಲುತ್ತಿದ್ದಂತೆ ತಾಲೂಕಿನ ವಿವಿಧೆಡೆಯಿಂದ ಬಂದಿದ್ದ ಮುಖಂಡರು ಹಾಗೂ ಕಾರ್ಯಕರ್ತರು ತೀವ್ರ ತರಾಟೆಗೆ ತೆಗೆದುಕೊಂಡರು ಎಂದು ಮೂಲಗಳು ತಿಳಿಸಿವೆ.

2023 ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ವೇಳೆ ಕ್ಷೇತ್ರದಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು, ಅಧಿಕಾರಾವಧಿ ಯಲ್ಲಿ ಕ್ಷೇತ್ರದ ಅಭಿವೃದ್ಧಿ, ಮತದಾರರನ್ನು ಮರೆತಿದ್ದ ನಿಮಗೆ ಈಗ ನಮ್ಮ ನೆನಪಾಯಿತೇ ಎಂದು ಸಾಲಿ ಸಾಲು ಪ್ರಶ್ನೆಗಳ ಮೂಲಕ ತರಾಟೆಗೆ ತೆಗೆದುಕೊಂಡರು ಎನ್ನಲಾಗಿದೆ.
ದೊಡ್ಡಬೆಳವಂಗಲದಲ್ಲಿ ಕ್ರಿಕೆಟ್ ಟೂರ್ನಿ ವೇಳೆ ಬಿಜೆಪಿ ಕಾರ್ಯಕರ್ತನ ಕೊಲೆಯಾದಾಗ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಬರಲಿಲ್ಲವೇಕೆ?, ಜಿಲ್ಲಾಸ್ಫತ್ರೆಗೆ ಹಣ ಬಿಡುಗಡೆ ಮಾಡಿಸಲಿಲ್ಲ ಏಕೆ? ಗ್ರಾಮಾಂತರ ಜಿಲ್ಲೆಗೆ ಮಂಜುರಾಗಬೇಕಿದ್ದ ಮೆಡಿಕಲ್ ಕಾಲೇಜನ್ನು ನಿಮ್ಮ ಜಿಲ್ಲೆಗೆ ತೆಗೆದುಕೊಂಡು ಹೋಗಿದ್ದು ದೊಡ್ಡಬಳ್ಳಾಪುರ ಕ್ಷೇತ್ರಕ್ಕೆ ಮಾಡಿದ ಅನ್ಯಾಯವಲ್ಲವೇ? ಎಂದು ಪ್ರಶ್ನಿಸಿದರು.

ನೀವು ಸಚಿವರಾಗಿದ್ದಾಗ ಸಾಮಾನ್ಯ ಕಾರ್ಯ ಕರ್ತರಿಗೆ ಸಿಗದೆ ತಪ್ಪಿಸಿಕೊಂಡು ಓಡಾಡುತ್ತಿದ್ದದು ನಮಗೆಲ್ಲರಿಗೂ ನೆನಪಿದೆ. ಉಸ್ತುವಾರಿ ಸಚಿವರಾಗಿ ದೊಡ್ಡಬಳ್ಳಾಪುರ ನಗರಸಭೆ ಉದ್ಘಾಟನೆಗೆ ಬರದೇ ತಾತ್ಸರ ತೋರಿದ ನಿಮಗೆ ಈಗ ಮುಖಂಡರು, ಕಾರ್ಯಕರ್ತರು ನೆನಪಾಯಿತೆ ? ಎಂದು ಆಕ್ರೋಶ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.

ದೊಡ್ಡಬಳ್ಳಾಪುರ ಕ್ಷೇತ್ರವನ್ನು ಕಡೆಗಣಿಸಿದ ನಿಮ್ಮಂತಹ ಅಭ್ಯರ್ಥಿ ನಮಗೆ ಬೇಡ. ಮೊದಲು ಕ್ಷೇತ್ರ ಬಿಟ್ಟು ಹೊರಡಿ ಎಂದು ತರಾಟೆಗೆ ತೆಗೆದುಕೊಂಡರು ಎಂದು ಸಭೆಯಲ್ಲಿ ಹಾಜರಿದ್ದ ಬಿಜೆಪಿ ಮುಖಂಡರೊಬ್ಬರು ತಿಳಿಸಿದರು.ಮುಖಂಡರು ಹಾಗೂ ಕಾರ್ಯಕರ್ತರ ಸಾಲು ಸಾಲು ಪ್ರಶ್ನೆಗಳಿಂದ ತಬ್ಬಿಬ್ಬಾದ ಡಾ. ಸುಧಾಕರ್ ಮಾತನಾಡಲು ಮುಂದಾದರೂ ಗದ್ದಲ ನಿಂತಿರಲಿಲ್ಲ. ಗದ್ದಲ ವಿಕೋಪಕ್ಕೆ ತಿರುಗುವ ಸಾಧ್ಯತೆ ಮನಗಂಡ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಕೃಷ್ಣಪ್ಪ, ಬಿ.ಸಿ.ನಾರಾಯಣಸ್ವಾಮಿ ಹಾಗೂ ಶಾಸಕ ಧೀರಜ್ ಮುನಿರಾಜು ಅವರು ಮಧ್ಯ ಪ್ರವೇಶಿಸಿ ಡಾ.ಸುಧಾಕರ್ ಮಾತಿಗೆ ಅವಕಾಶ ಮಾಡಿಕೊಟ್ಟರು.

ಒಂದು ಹಂತದಲ್ಲಿ ಶಾಸಕರ ಮನವಿಗೂ ಕಾರ್ಯಕರ್ತರು ಕಿವಿಗೊಡಲಿಲ್ಲ. ಇದರಿಂದ ಡಾ.ಕೆ.ಸುಧಾಕರ್ ನಮ್ಮಲ್ಲಿ ಯಾವುದೇ ಗೊಂದಲವಿಲ್ಲ, ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಕಾರ್ಯನಿರ್ವಹಿಸುವುದಾಗಿ ಹೇಳಿ ಸಭೆಯಿಂದ ಹೊರನಡೆದರು. ನಂತರ ನೆಲದ ಆಂಜನೇಯ ಸ್ವಾಮಿ ದೇವಾಲಯಕ್ಕೆ ಒಬ್ಬಂಟಿಯಾಗಿಯೇ ತೆರಳಿ ಪೂಜೆ ಸಲ್ಲಿಸಿದರು ಎಂದು ತಿಳಿದುಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು