LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಟ್ರೇಲರ್‌ನಲ್ಲೇ ಗಮನ ಸೆಳೆದ "ಕ್ಷಮೆಯಿರಲಿ ತಂದೆ"

ಈ ಚಿತ್ರದ ಮೂಲಕ ನಿರ್ಮಾಣ ಹಾಗೂ ನಿರ್ದೇಶನಕ್ಕೆ ನಟ ಎಂ.ಎನ್ ಸುರೇಶ್ ಎಂಟ್ರಿ
ರಂಗಭೂಮಿ, ಕಿರುತೆರೆ, ಹಿರಿತೆರೆ ಕಲಾವಿದರಾಗಿ ಕಳೆದ ಮೂರು ದಶಕಗಳಿಂದ ಜನಪ್ರಿಯರಾಗಿರುವ ಎಂ ಎನ್ ಸುರೇಶ್ (ಮೂಗ್ ಸುರೇಶ್ ) ಈಗ ನಿರ್ಮಾಪಕ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರಕ್ಕೆ " ಕ್ಷಮೆಯಿರಲಿ ತಂದೆ" ಎಂದು ಹೆಸರಿಟ್ಟಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿ ಜೂನ್ 12ರಂದು ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ಮೋಷನ್ ಪೋಸ್ಟರ್, ಟ್ರೇಲರ್ ಹಾಗೂ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಯಿತು. ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರಾದ ಟಿ.ಎಸ್.ನಾಗಾಭರಣ, ನಾಗತಿಹಳ್ಳಿ ಚಂದ್ರಶೇಖರ್, ನಿರ್ಮಾಪಕ ಉಮೇಶ್ ಬಣಕಾರ್ ಹಾಗೂ ರಾಮಕೃಷ್ಣ (ಮೇಕಪ್) ಮುಖ್ಯ ಅತಿಥಿಗಳಾಗಿ ಆಗಮಿಸಿ ಮೋಷನ್ ಪೋಸ್ಟರ್, ಟ್ರೇಲರ್ ಹಾಗೂ ಲಿರಿಕಲ್ ವಿಡಿಯೋ ಅನಾವರಣ ಮಾಡಿದರು. ಚಿತ್ರದ ಟ್ರೇಲರ್ ಚೆನ್ನಾಗಿದೆ. ಚಿತ್ರ ಯಶಸ್ವಿಯಾಗಲಿ. ಎಂ ಎನ್ ಸುರೇಶ್ ನಿರ್ಮಾಪಕ ಹಾಗೂ ನಿರ್ದೇಶಕರಾಗಿಯೂ ಗೆಲ್ಲಲಿ ಎಂದು ಅತಿಥಿಗಳು ಹಾರೈಸಿದರು. ಆನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಸಮಾರಂಭಕ್ಕೆ ಆಗಮಿಸಿದ ಅತಿಥಿಗಳಿಗೆ ಧನ್ಯವಾದ ತಿಳಿಸಿ ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕ ಹಾಗೂ ನಿರ್ದೇಶಕ ಎನ್ ಎಂ ಸುರೇಶ್, ನಾನು ಕೆಲವು ಚಿತ್ರಗಳಿಗರ ಸಹ ನಿರ್ಮಾಪಕನಾಗಿದ್ದೆ. ಪೂರ್ಣಪ್ರಮಾಣದ ನಿರ್ಮಾಪಕನಾಗಿರುವುದು ಈ ಚಿತ್ರದಿಂದ. ಇನ್ನೂ, ನಿರ್ದೇಶನ ನಾನು ಮಾಡಬೇಕೆಂದುಕೊAಡಿರಲಿಲ್ಲ. ನನ್ನ ಕಾರ್ಯವೈಖರಿ ಹತ್ತಿರದಿಂದ ಬಲ್ಲ ಸ್ನೇಹಿತರು ನೀವೇ ನಿರ್ದೇಶನ ಮಾಡಿ ಎಂದರು. ಮೊದಲ ನಿರ್ದೇಶನದ ಚಿತ್ರ, ಬೇರೆಯವರು ದುಡ್ಡು ಹಾಕುವುದು ಬೇಡ ಅಂತ ನಾನು ಕೂಡಿಟ್ಟಿದ್ದ ಹಣವನ್ನೇ ಈ ಚಿತ್ರಕ್ಕೆ ಹಾಕಿ ನಿರ್ಮಾಣ ಮಾಡಿದ್ದೇನೆ. ಇದಕ್ಕೆ ನನ್ನ ಕುಟುಂಬದ ಸಹಕಾರವೂ ಇದೆ. ಶೀರ್ಷಿಕೆಯೇ ತಿಳಿಸುವಂತೆ ಇದೊಂದು ತಂದೆ - ಮಗನ ಬಾಂಧವ್ಯದ ಚಿತ್ರ. ಹರೀಶ್ ಅವರು ಕಥೆ ಬರೆದಿದ್ದಾರೆ. ಮಂಜುನಾಥ್ ಹೆಗ್ಡೆ, ರೇಣುಕಾಬಾಲಿ , ಶ್ರೀಮಂತ, ವಿನ್ಯಾಶೆಟ್ಟಿ ಮುಂತಾದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದು, ನಾನು ಸಹ ನಟಿಸಿದ್ದೇನೆ. ಸೂರ್ಯಕಾಂತ್ ಛಾಯಾಗ್ರಹಣ, ಮುತ್ತುರಾಜ್ ಸಂಕಲನ ಹಾಗೂ ಪುಣ್ಯೇಶ್ ಕುಮಾರ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರ ಜೂನ್ 12 ರಂದು ತೆರೆಗೆ ಬರಲಿದೆ. ನನ್ನ ಮೊದಲ ನಿರ್ದೇಶನ ಹಾಗೂ ನಿರ್ಮಾಣದ ಈ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.
ನಟ ಶ್ರೀಮಂತ, ಕಥೆ ಬರೆದಿರುವ ಹರೀಶ್, ಸಂಕಲನಕಾರ ಮುತ್ತುರಾಜ್, ನಟ ಶಿವಕುಮಾರ್ ಆರಾಧ್ಯ ಹಾಗೂ ಕಾರ್ಯಕಾರಿ ನಿರ್ಮಾಪಕಿ ಅಹಲ್ಯ ಸುರೇಶ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು