LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ನಿರುದ್ಯೋಗ ಯುವಕ/ಯುವತಿಯರಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಇವರು ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ ದೇವನಹಳ್ಳಿ ಟೌನ್ ನಲ್ಲಿ 10 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಜುಲೈ ಮೊದಲ ವಾರದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು, ನಾಯಕತ್ವದ ಗುಣಲಕ್ಷಣಗಳು, ಉದ್ಯಮವನ್ನು ಆಯ್ಕೆ ಮಾಡುವ ವಿಧಾನ, ವ್ಯಾಪಾರೋದ್ಯಮಗಳ ಅವಕಾಶಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಸಹಾಯ ನೀಡುವುದು ಹಾಗೂ ಈಗಾಗಲೇ ಸಿಡಾಕ್ ಮುಖಾಂತರ ತರಬೇತಿ ಪಡೆದು ಉದ್ಯಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗುತ್ತಿರುವ ಉದ್ಯಮಶೀಲರ ಅನುಭವ ಹಂಚಿಕೆ ಮತ್ತು ಸಂಬಂಧಪಟ್ಟ ಇತ್ಯಾದಿ ವಿಷಯಗಳ ಬಗ್ಗೆ ಅನುಭವಿ ಅತಿಥಿ ಬೋಧಕರಿಂದ ಉಪನ್ಯಾಸ/ಮಾಹಿತಿ ನೀಡಲಾಗುವದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 18 ವರ್ಷ ದಿಂದ 40 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿಯನ್ನು ಈ ಕೆಳಕಂಡ ವಿಳಾಸದಲ್ಲಿ ಕಛೇರಿ ವೇಳೆಯಲ್ಲಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ವಿಳಾಸ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಜಿಲ್ಲಾ ಕಛೇರಿ: ಜಿಲ್ಲಾ ಕೌಶಲ್ಯಾಭಿವೃದ್ಧಿಯವರ ಕಚೇರಿ ಕೊಠಡಿ ಸಂಖ್ಯೆ : 132, 1ನೇ ಮಹಡಿ, ಜಿಲ್ಲಾಡಳಿತ ಭವನ, ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಇಲ್ಲಿಗೆ 30 ಜೂನ್. 2024 ರ ಒಳಗಾಗಿ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಮೋಬೈಲ್ ಸಂಖ್ಯೆ 9353438881 ಇಲ್ಲಿಗೆ ಕರೆ ಮಾಡಬಹುದಾಗಿದೆ ಎಂದು ಸಿಡಾಕ್ ಸಂಸ್ಥೆಯ ಬೆಂಗಳೂರು ಗ್ರಾಮಾಂತರ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು