LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬೆಂಗಳೂರು ಸಿಟಿ ಇನ್ಸ್ಟಿಟ್ಯೂಟ್‍ನಿಂದ ಗೌರವ ಸದಸ್ಯತ್ವ ಪ್ರದಾನ

ಬೆಂಗಳೂರು: ಮುಂದಿನ ದಸರಾ ಸಂಭ್ರಮಾಚರಣೆಯ ಮೊದಲೇ, ಮೈಸೂರು ನಗರದ ವಿಶ್ವ ವಿಖ್ಯಾತ ಅರಮನೆ ಆವರಣ ಹೊಸ ಪ್ರಯತ್ನವೊಂದಕ್ಕೆ ಸಾಕ್ಷಿಯಾಗಲಿದೆ. ಜನಪರ ಆಡಳಿತಗಾರ, ಆಧುನಿಕ ಭಾರತದ ಕನಸುಗಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜೀವನ-ಸಾಧನೆ- ಕೊಡುಗೆ ಬಗ್ಗೆ ನಾದ ಬ್ರಹ್ಮ ಶ್ರೀ ಹಂಸಲೇಖ ರಚಿಸಲಿರುವ ರೂಪಕವೊಂದು ಅಲ್ಲಿ ಪ್ರದರ್ಶನಗೊಳ್ಳಲಿದೆ.

ಈ ಘೋಷಣೆಗೆ ಸಾಕ್ಷಿಯಾಗಿದ್ದು, ನಗರದ ಬೆಂಗಳೂರು ಸಿಟಿ ಇನ್ಸಿಟ್ಯೂಟ್ ನಲ್ಲಿ ಶುಕ್ರವಾರ ನಡೆದ ನಾಲ್ವಡಿ ಕೃಷ್ಣರಾಜ ಒಡೆಯರ್ ಸಂಸ್ಮರಣೆ ಹಾಗು ನಾಲ್ವಡಿ ಕುರಿತ ಕಿರು ಚಿತ್ರ ಪ್ರದರ್ಶನ ಕಾರ್ಯಕ್ರಮ. ಬೆಂಗಳೂರು ಸಿಟಿ ಇನಸ್ಟಿಟ್ಯೂಟ್ ನೀಡಿರುವ ಗೌರವ ಸದಸ್ಯತ್ವವನ್ನು ಸ್ವೀಕರಿಸಿ ಮಾತನಾಡಿದ ರಾಜಮಾತೆ ಗೌರವಾನ್ವಿತ ಡಾ ಪ್ರಮೋದಾದೇವಿ ಒಡೆಯರ್ ಅವರು ಈ ಸಂಬಂಧ ಮುಂದಿಟ್ಟ ಕೋರಿಕೆಗೆ ಅಲ್ಲೆ ಒಪ್ಪಿಗೆ ಸೂಚಿಸಿದ ನಾದ ಬ್ರಹ್ಮ ಶ್ರೀ ಹಂಸಲೇಖ ಈ ರೂಪಕವನ್ನು ರಚಿಸಿ, ಕನ್ನಡಿಗರಿಗೆ ಅರ್ಪಿಸುದಾಗಿ ಪ್ರಕಟಿಸಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಾಧನೆ, ಈ ನಾಡಿಗೆ ಅವರ ಕೊಡುಗೆ ಅದ್ವಿತೀಯ. ಕರ್ನಾಟಕದ ಮನೆ-ಮನಗಳಲ್ಲೂ ಪ್ರಾತಸ್ಮರಣಿಯರಾಗಿರುವ ನಾಲ್ವಡಿಯವರ ಸ್ಮರಿಸಿ ಮಾತನಾಡಿದ ರಾಜಮಾತೆ ಗೌರವಾನ್ವಿತ ಡಾ ಪ್ರಮೋದಾದೇವಿ ಒಡೆಯರ್ ಈ ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ವಿಶ್ವಕ್ಕೆ ಮಾದರಿ ಎಂದು ಬಣ್ಣಿಸಿದರು.

"ನಾವೆಲ್ಲರೂ, ಈ ದೇಶ ಸೇವೆಗೆ ನಮ್ಮ ಬದುಕನ್ನು ಮುಡಿಪಾಗಿಡಬೇಕು," ಎಂದು ಅವರು ಈ ಸಂದರ್ಭದಲ್ಲಿ ಕರೆ ನೀಡಿದರು.
ಇದೆ ಸಂದರ್ಭದಲ್ಲಿ ರಾಜಮಾತೆ ಗೌರವಾನ್ವಿತ ಡಾ ಪ್ರಮೋದಾದೇವಿ ಒಡೆಯರ್ ಹಾಗು ಹಂಸಲೇಖ ಅವರಿಗೆ ಬೆಂಗಳೂರು ಸಿಟಿ ಇನ್ಸಿಟ್ಯೂಟ್ ಗೌರವ ಸದಸ್ಯತ್ವ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಹಂಸಲೇಖ ನಾಲ್ವಡಿ ಅವರ ಸಾಧನೆ ನಮಗೆಲ್ಲರಿಗೂ ಆದರ್ಶಪ್ರಾಯ ಎಂದು ಬಣ್ಣಿಸಿದರು.
ಕನ್ನಡ ಭಾಷೆ-ಆಡಳಿತದ ಬಗ್ಗೆ ಮಾತನಾಡಿದ ಅವರು, ಕನ್ನಡವನ್ನು ಕೇವಲ ಭಾಷೆಯೆಂದು ಪರಿಗಣಿಸದೆ ಅದನ್ನು ನಮ್ಮ ಹಕ್ಕಿನ ಪತ್ರ ಎಂದು ತಿಳಿದುಕೊಳ್ಳಬೇಕು. ಈ ಹಕ್ಕು ನಮ್ಮೆಲ್ಲರಿಗೂ ದಕ್ಕುವಂತೆ ಆಗಬೇಕು ಎಂದು ತಿಳಿಸಿದರು. "ಈ ಬಗ್ಗೆ ನಾವು ಸದಾ ಎಚ್ಚರದಿಂದಿರಬೇಕು," ಎಂದು ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಕನ್ನಡ -ಕನ್ನಡಿಗರ ಕುಸಿತದ ಬಗ್ಗೆ ಅವರು ಈ ಸಂದರ್ಭದಲ್ಲಿ ಕಳವಳ ವ್ಯಕ್ತಪಡಿಸಿದರು.ಸಿಟಿ ಇನ್ಸಿಟ್ಯೂಟ್ ಅಧ್ಯಕ್ಷ ಶ್ರೀ ಕೆ ಸುಕುಮಾರ್, ಉಪಾಧ್ಯಕ್ಷ ಎಸ್ ಸಿ ಚಂದ್ರಶೇಖರ್, ಗೌರವ ಕಾರ್ಯದರ್ಶಿ ಲಕ್ಷ್ಮೀಶ ಚಂದ್ರ, ಗೌರವ ಖಜಾಂಚಿ ವಿರೂಪಾಕ್ಷ ಬಿ ಪಿ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ, ಸಂಗೀತ ಮತ್ತು ನೃತ್ಯ ಕಾರ್ಯಕ್ರಮಗಳ ಭರಪೂರ ಮನೋರಂಜನೆ ಕಾರ್ಯಕ್ರಮ ನೋಡುಗರನ್ನು ಮುದಗೊಳಿಸಿತು. ಮುಂಬೈ, ಕೋಲ್ಕೊತಾ, ಚೆನ್ನೈನ ಖ್ಯಾತ ನೃತ್ಯ ತಂಡಗಳ ಪ್ರದರ್ಶನ, ಕನ್ನಡದ ಹೆಮ್ಮೆಯ ಬಾಲ ಕಲಾವಿದ ಅರ್ಜುನ್ ಇಟಗಿ ಹಾಡು, ನೋಡುಗರನ್ನು ಮನೋರಂಜನಾ ಲೋಕದಲ್ಲಿ ತೇಲಾಡಿಸಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು