LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬೆಂಗಳೂರಿನ ಎಚ್‍ಸಿಜಿ ಕ್ಯಾನ್ಸರ್ ಕೇಂದ್ರದಿಂದ ಜಾಗೃತಿ

ಬೆಂಗಳೂರು: "ಜೋ ದವಾ ನಹೀ ಕರ್ ಪಾಟಿ, ವೋ ದುವಾ ಕರ್ ಪಾಟಿ ಹೈ" (ಔಷಧದಿಂದ ಏನನ್ನು ಸಾಧಿಸಲು ಸಾಧ್ಯವಾಗುವುದಿಲ್ಲವೋ, ಅದು ಆಶೀರ್ವಾದಗಳಿಂದ ಸಾಧ್ಯ) ಎಂಬ ಬಲವಾದ ನಂಬಿಕೆಯಿಂದ ಪ್ರೇರಿತವಾದ, 'ದಿ ಪವರ್ ಆಫ್ ಗುಡ್ ವಿಷಸ್' ಅಭಿಯಾನದ ಅಡಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಬೆಂಗಳೂರಿನ ಎಚ್‍ಸಿಜಿ ಕ್ಯಾನ್ಸರ್ ಕೇಂದ್ರವು ವಿಶ್ವ ಕ್ಯಾನ್ಸರ್ ದಿನವನ್ನು ಆಚರಿಸಿತು.

ರಂಗೋಲಿ ಮೆಟ್ರೋ ಆರ್ಟ್ ಸೆಂಟರ್‍ನಲ್ಲಿ ಕ್ಯಾನ್ಸರ್ ಜಾಗೃತಿ ಅನುಭವ ಕೇಂದ್ರ, ಕ್ಯಾನ್ಸರ್ ಮತ್ತು ಆರಂಭಿಕ ತಪಾಸಣೆಯ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ಫಲಕಗಳು ಮತ್ತು ಭಾಗವಹಿಸುವವರು ಕ್ಯಾನ್ಸರ್ ರೋಗಿಗಳಿಗೆ ತಮ್ಮ ಶುಭ ಹಾರೈಕೆಗಳನ್ನು ಹಂಚಿಕೊಳ್ಳಬಹುದಾದ ವಿಶ್ ವಾಲ್ ಮುಂತಾದ ಸರಣಿ ಚಟುವಟಿಕೆಗಳನ್ನು ಈ ಕೇಂದ್ರವು ನಡೆಸಿತು.

ಸಾಮುದಾಯಿಕವಾಗಿ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವುದನ್ನು ಪ್ರಾರಂಭಿಸುವುದು ಮತ್ತು ಆರಂಭಿಕ ಪತ್ತೆಹಚ್ಚುವಿಕೆಯು ಅವರ ಬದುಕುಳಿಯುವ ಸಾಧ್ಯತೆಗಳನ್ನು ಹೆಚ್ಚಿಸುವುದರಿಂದ ಮತ್ತು ರೋಗದ ಉತ್ತಮ ನಿರ್ವಹಣೆಗೆ ಸಹಾಯ ಮಾಡುವುದರಿಂದ ಹೆಚ್ಚಿನ ಜನರನ್ನು ಕ್ಯಾನ್ಸರ್ ತಪಾಸಣೆಗೆ ಒಳಗಾಗಲು ಪ್ರೋತ್ಸಾಹಿಸುವುದು ಈ ಕಾರ್ಯಕ್ರಮದ ಉದ್ದೇಶ. ಎಂಜಿ ರಸ್ತೆಯಲ್ಲಿರುವ ರಂಗೋಲಿ ಮೆಟ್ರೋ ಆರ್ಟ್ ಸೆಂಟರ್‍ನಲ್ಲಿ ಕ್ಯಾನ್ಸರ್ ಜಾಗೃತಿ ಅನುಭವ ಕೇಂದ್ರವು ಕೇಂದ್ರಬಿಂದುವಾಗಿತ್ತು,

ಈ ಸಂದರ್ಭದಲ್ಲಿ ಮಾತನಾಡಿದ ಹೆಲ್ತ್‍ಕೇರ್ ಗ್ಲೋಬಲ್ ಎಂಟರ್ಪ್ರೈಸಸ್ ಲಿಮಿಟೆಡ್‍ನ ಕರ್ನಾಟಕ ಪ್ರಾದೇಶಿಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಷಾ ಕುಮಾರ್, ಹೆಚ್ಚಿನ ಜಾಗೃತಿ ಮತ್ತು ಪೂರ್ವಭಾವಿ ಕ್ರಮಗಳ ಮೂಲಕ, ಕ್ಯಾನ್ಸರ್ ಸವಾಲುಗಳನ್ನು ಎದುರಿಸುತ್ತಿರುವ ವ್ಯಕ್ತಿಗಳ ಜೀವನದ ಮೇಲೆ ನಾವು ಗಮನಾರ್ಹ ಪರಿಣಾಮ ಬೀರಬಹುದು ಎಂದು ನಾವು ನಂಬುತ್ತೇವೆ ಎಂದು ಹೇಳಿದರು.

ಎಚ್‍ಸಿಜಿ ಕ್ಯಾನ್ಸರ್ ಆರೈಕೆಯ ಬಗ್ಗೆ ಸಮಗ್ರ ವಿಧಾನವನ್ನು ಹೊಂದಿದೆ ಮತ್ತು ಜಾಗೃತಿ ಮೂಡಿಸುವುದು ನಿರಂತರವಾದ ಪ್ರಯತ್ನ ಎಂದು ನಂಬುತ್ತದೆ. ಈ ಕಾರ್ಯಕ್ರಮದೊಂದಿಗೆ, ಆಸ್ಪತ್ರೆಯು ಆರೋಗ್ಯಕರ ಮತ್ತು ತಿಳುವಳಿಕೆಯುಳ್ಳ ಸಮುದಾಯವನ್ನು ಬೆಳೆಸುವ ಶಾಶ್ವತ ಬದ್ಧತೆಯನ್ನು ಹುಟ್ಟುಹಾಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು