LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

"ಬನ್ನೂರು, ತಿ. ನರಸೀಪುರ ಪುರಸಭೆಗೆ ಆಡಳಿತಾಧಿಕಾರಿಯಾಗಿ ನೇಮಕ"

ತಿ.ನರಸೀಪುರ: ತಿ. ನರಸೀಪುರ ಮತ್ತು ಬನ್ನೂರು ಪುರಸಭಾ ಅಧ್ಯಕ್ಷ ಉಪಾಧ್ಯಕ್ಷರ ಹಾಗೂ ಸದಸ್ಯರ ಅಧಿಕಾರದ ಅವಧಿ ಮುಕ್ತಾಯಗೊಂಡ ಹಿನ್ನೆಲೆ ದೈನಂದಿನ ಕಛೇರಿಯ ಕಾರ್ಯ ಚಟುವಟಿಕೆಗಳಿಗೆ ಮೈಸೂರು ಉಪವಿಭಾಗಾಧಿಕಾರಿಗಳನ್ನು ಬನ್ನೂರು ಮತ್ತು ನರಸೀಪುರ ಪುರಸಭೆಗೆ ಆಡಳಿತಾಧಿಕಾರಿಯಾಗಿ ನೇಮಕ ಮಾಡಿರುವ ಆದೇಶ ಹೊರಬಿದ್ದಿದೆ.

ಪ್ರಸ್ತುತ ಸ್ಥಳೀಯಸಂಸ್ಥೆಗಳಾದ ರಾಜ್ಯದಲ್ಲಿನನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಚುನಾಯಿತ ಕೌನ್ಸಿಲ್ ಅವಧಿಯು ಸಂವಿಧಾನಿಕವಾಗಿ ಚುನಾಯಿತ ಪ್ರತಿನಿಧಿಗಳ ಅಧಿಕಾರದ ಅವಧಿಯ ಕಾಲ ೫ ವರ್ಷ ನಿಗದಿಯಾಗಿದ್ದರು. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪ್ರಕಟಿಸುವ ಅವಧಿ ವಿಳಂಬವಾದ ಹಿನ್ನೆಲೆ ಪುರಸಭಾ ಸದಸ್ಯರಿಗೆ ಹೆಚ್ಚುವರಿಯಾಗಿ
ಎರಡುವರೆ ವರ್ಷಗಳಿಗೂ ಹೆಚ್ಚು ಕಾಲ ಅಧಿಕಾರ ನಡೆಸುವಂತಾಯಿತು.

ಕೊನೆಗೂ ಸದಸ್ಯರ ಅಧಿಕಾರದ ಅವಧಿ ಮುಕ್ತಾಯಗೊಂಡಿರುವುದರಿಂದ ಕರ್ನಾಟಕ ಪೌರಾಡಳಿತ ಕಾಯ್ದೆ ೧೯೫೪ರ ಕಲಂ -೩೮೯ ರಲ್ಲಿ ಪ್ರದತ್ರವಾದ ಅಧಿಕಾರವನ್ನು ಚಲಾಯಿಸಿ ಅವಧಿ ಮುಕ್ತಾಯಗೊಂಡಿರುವ ಸ್ಥಳೀಯ ಸಂಸ್ಥೆಗಳಲ್ಲಿ ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೂ ಅವುಗಳ ದಿನನಿತ್ಯದ ಕಾರ್ಯನಿರ್ವಹಣೆಗಾಗಿ ಟಿ ನರಸೀಪುರ ಮತ್ತು ಬನ್ನೂರು ಪುರಸಭೆಗೆ ಮೈಸೂರು ಉಪವಿಭಾಗಾಧಿಕಾರಿ ರವರನ್ನು ಎರಡು ಪುರಸಭೆಗೆ ಆಡಳಿತ ಆಡಳಿತ ಅಧಿಕಾರಿಗಳನ್ನಾಗಿ ಸರ್ಕಾರ ನೇಮಕ ಮಾಡಿ ಆದೇಶಹೊರಡಿಸಿದೆ. ಸರ್ಕಾರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಆಡಳಿತ ಅಧಿಕಾರಿಗಳನ್ನು ನೇಮಕ ಮಾಡಿದ್ದೇವೆ ಎಂದು ಚುನಾವಣೆ ನಡೆಸದೆ ಚುನಾವಣೆಯನ್ನು ವಿಳಂಬ ನೀತಿ ಅನುಸರಿಸದೆ ಸರ್ಕಾರ ಮತ್ತು ಚುನಾವಣೆ ಆಯೋಗ ದಿನಾಂಕ ಘೋಷಣೆ ಮಾಡಬೇಕು. ಸ್ಥಳೀಯ ಸಂಸ್ಥೆಗಳ ಸಾರ್ವಜನಿಕ ಕಾರ್ಯ ಚಟುವಟಿಕೆಗಳು ಸರಾಗವಾಗಿ ನಡೆಯಬೇಕೆಂದರೆ ಸ್ಥಳೀಯ ಸಂಸ್ಥೆಯ ಪ್ರತಿನಿಧಿಗಳಿರಬೇಕು ಎಂಬ ಕೂಗು ಸಾರ್ವಜನಿಕರ ವಲಯದಲ್ಲಿ ಕೇಳಿ ಬರುತ್ತದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು