LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಭಾರತಿ ಟೀಚರ್ 7ನೇ ತರಗತಿಗೆ ಐವತ್ತರ ಸಂಭ್ರಮ

ಅನಾಯಾಸವಾಗಿ ಅರ್ಧ ಶತಕ ಪೂರೈಸಿದ 2026ರ ಮೊದಲ ಸಿನಿಮಾ ಅಂತ ಖ್ಯಾತಿಗೆ ಒಳಗಾದ `ಭಾರತಿ ಟೀಚರ್ 7ನೇ ತರಗತಿ' 50ನೇ ದಿನದ ಸಂಭ್ರಮದ ಸಮಾರಂಭವು ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಪೂಜ್ಯಾಯ ಫಿಲಂಸ್ ಅಡಿಯಲ್ಲಿ ಉದ್ಯಮಿ ರಾಘವೇಂದ್ರ ರೆಡ್ಡಿ ಬಂಡವಾಳ ಹೂಡಿದ್ದು, ಗುರುರಾಜ್ ರೆಡ್ಡಿ ಸಹ ನಿರ್ಮಾಪಕರು. ಕಥೆ,ಚಿತ್ರಕಥೆ, ಸಂಭಾಷಣೆ, ಸಾಹಿತ್ಯ, ಸಂಗೀತ ಮತ್ತು ನಿರ್ದೇಶನದ ಜವಬ್ದಾರಿಯನ್ನು ಎಂ.ಎಲ್.ಪ್ರಸನ್ನ ಹೊತ್ತುಕೊಂಡಿದ್ದಾರೆ. ಸಚಿತ್ ಫಿಲಂಸ್‌ನ ವೆಂಕಟ್ ಗೌಡ ಕ್ರಿಯೇಟಿವ್ ಮುಖ್ಯಸ್ಥರಾಗಿ ಗುರುತಿಸಿಕೊಂಡಿದ್ದಾರೆ.
ಡಾ.ವಿ.ನಾಗೇಂದ್ರಪ್ರಸಾದ್, ನಟ ಧರ್ಮಕೀರ್ತಿರಾಜ್, ಮೋಹನ್, ರವಿಗೌಡ, ನಿರ್ದೇಶಕರುಗಳಾದ ಜಡೇಶ್.ಕೆ.ಹಂಪಿ, ಓಂಪ್ರಕಾಶ್ ರಾವ್, ಹಿರಿಯ ಪತ್ರಕರ್ತ,ನಟ ಚಕ್ರವರ್ತಿ ಚಂದ್ರಚೂಡ್, ವೀರಕಪುತ್ರ ಶ್ರೀನಿವಾಸ್ ಮುಂತಾದವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡದ ಕೆಲಸವನ್ನು ಶ್ಲಾಘಿಸಿದರು.
ಶಿಕ್ಷಕರಾಗಿ ಸಿಹಿಕಹಿಚಂದ್ರು, ಟೈಟಲ್ ರೋಲ್‌ದಲ್ಲಿ ಕು.ಯಶಿಕಾ, ಗೋವಿಂದೇಗೌಡ, ಅಶ್ವಿನ್‌ಹಾಸನ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ದಿವ್ಯಾ ಅಂಚನ್, ಬೆನಕಾ ನಂಜಪ್ಪ, ರೋಹಿತ್‌ರಾಘವೇಂದ್ರ, ಸೌಜನ್ಯಸುನಿಲ್, ಎಂ.ಜೆ.ರAಗಸ್ವಾಮಿ ಮುಂತಾದವರು ನಟಿಸಿದ್ದಾರೆ. ಛಾಯಾಗ್ರಹಣ ಎಂ.ಬಿ.ಹಳ್ಳಿಕಟ್ಟಿ, ಸಂಕಲನ ಸುಜಿತ್‌ನಾಯಕ್, ವಾದ್ಯ ಸಂಯೋಜನೆ ಕೆ.ಎಂ.ಇAದ್ರ, ನೃತ್ಯ ಕಂಬಿರಾಜ್, ಕಾರ್ಯಕಾರಿ ನಿರ್ಮಾಪಕ ದರ್ಶನ್‌ಗೌಡ ಅವರದಾಗಿದೆ.
ಡಾ.ವಿ.ನಾಗೇಂದ್ರ ಪ್ರಸಾದ್ ಮಾತನಾಡಿ, ಭವಿಷ್ಯದಲ್ಲಿ ಶತದಿನ, ಸಿಲ್ವರ್ ಜುಬ್ಲಿ ಸಂಭ್ರಮದ ದಿನಗಳನ್ನು ನೋಡುವಂತ ಸಾಧ್ಯತೆಗಳು ತುಂಬ ಕಡಿಮೆ ಇದೆ. ಅಂತ ಒಂದು ದೊಡ್ಡ ಪೈಪೋಟಿ ಯುಗದಲ್ಲಿ ಕಾಲಿಟ್ಟು ಆಗಿದೆ. ಸೂಪರ್ ಸ್ಟಾರ್ ಚಿತ್ರಗಳೇ 20-30 ದಿವಸ ಕಾಣೋದು ಕಷ್ಟ. ಇಂಥ ಸಂದರ್ಭದಲ್ಲಿ ಕನ್ನಡ ಪರ, ಮುಂದಿನ ಪೀಳಿಗೆಗೆ ಕಿವಿಮಾತು ಹೇಳುವಂತ, ಕನ್ನಡ ಧ್ವನಿಯಾಗಿ, ಸ್ಪಷ್ಟವಾಗಿ ಚಿತ್ರದಲ್ಲಿ ತೋರಿಸಲಾಗಿದೆ. ಒಳ್ಳೆಯ ಅಂಶಗಳನ್ನು ಒಳಗೊಂಡಿರುವ ಚಿತ್ರವನ್ನು ಜನರಿಗೆ ತಲುಪಿಸುವಂತ ಕೆಲಸ ಆಗಬೇಕು. ಅಂತಹುದನ್ನು ಇವರುಗಳು ಮಾಡಿರುವುದು ಶ್ಲಾಘನೀಯ. ಇಂತಹ ಪ್ರಯತ್ನಗಳು ಮತ್ತೆ ಮತ್ತೆ ಆಗಬೇಕು. ಚಿತ್ರ ನೋಡಿದ್ದೇನೆ. ಎಲ್ಲಾ ಪಾತ್ರಗಳ ಪೋಷಣೆಯನ್ನು ಆನಂದಿಸಿದ್ದೇನೆ ಎಂದರು.
ಅಪರೂಪದ ಕಾರ್ಯಕ್ರಮದಲ್ಲಿ ಭಾಗಿಯಾಗಿರೋದು ನನ್ನ ಸೌಭಾಗ್ಯ ಅಂತ ಭಾವಿಸಿದ್ದೇನೆ. 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರೂ, ಇಷ್ಟು ದೊಡ್ಡ ರೋಲ್ ಸಿಕ್ಕಿರೋದು ಇದೇ ಮೊದಲು. ಇಂತಹ ಪಾತ್ರ ನಿಭಾಯಿಸುತ್ತೇನೆ ಎನ್ನುವ ನಂಬಿಕೆ ಇರಲಿಲ್ಲ. ನಿರ್ದೇಶಕರು ನನ್ನ ಮೇಲೆ ಭರವಸೆ ಇಟ್ಟುಕೊಂಡಿದ್ದಕ್ಕೆ ಧನ್ಯವಾದ ತಿಳಿಸುತ್ತೇನೆ. ಇಡೀ ಪಯಣದಲ್ಲಿ ಸಿನಿಮಾ ಬಿಟ್ಟು ಬೇರೇನೂ ಚರ್ಚೆ ನಡೆದೇ ಇಲ್ಲ. ಎಲ್ಲರ ಪರಿಶ್ರಮಕ್ಕೆ ಇಂದು ಫಲ ಸಿಕ್ಕಿದೆ ಎಂದು ಸಿಹಿಕಹಿ ಚಂದ್ರು ಸಂತಸ ಹಂಚಿಕೊAಡರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು