LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಅಪಘಾತ: ಬೈಕ್ ಸವಾರ ಸಾವು

ಬೆಂಗಳೂರು: ಅತೀ ವೇಗದಲ್ಲಿ ಬಂದ ದ್ವಿಚಕ್ರವಾಹನ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಓರಿಯನ್ ಮಾಲ್ ಬಳಿ ಇರುವ ರಾಜಕುಮಾರ್ ಸ್ಟ್ಯಾಚು ಬಳಿ ನಿನ್ನೆ ರಾತ್ರಿ ಸುಮಾರು ಒಂದುವರೆ ಗಂಟೆಗೆ ಈ ಘಟನೆ ನಡೆದಿದ್ದು, ಯಶಸ್(28) ಎಂಬ ಯುವಕ ತೀವ್ರ ತಲೆಗೆ ಗಾಯಗೊಂಡು ಮೃತಪಟ್ಟಿರುವ ದುರ್ದೈವಿಯಾಗಿದ್ದಾನೆ.

ರಾಜಾಜಿನಗರ ನಿವಾಸಿಯಾಗಿರೋ ಮೃತ ಯುವಕ ಬಿ ಇ ಇಂಜಿನಿಯರ್ ಮುಗಿಸಿದ್ದಾನೆ ಎನ್ನಲಾಗಿದೆ.ಹೆಲ್ಮೆಟ್ ಧರಿಸದಿದ್ದರಿಂದ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದು, ಈ ಸಂಬಂಧ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST