LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ಸಾಧ್ಯವಿಲ್ಲ

ಸುಪ್ರೀಂಕೋರ್ಟ್ಗೆ ರಾಜ್ಯ ಸರ್ಕಾರ ಅಫಿಡವಿಟ್ ಸಲ್ಲಿಕೆ



ಬೆಂಗಳೂರು: ಸದ್ದಿಲ್ಲದೆ ಕಾರ್ಯಾಚರಣೆ ನಡೆಸುತ್ತಿರುವ ಬೈಕ್ ಟ್ಯಾಕ್ಸಿಗಳಿಗೆ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆ ಭಾರಿ ಬಿಗ್ ಶಾಕ್ ನೀಡಿದೆ. ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಲು ಸಾಧ್ಯವೇ ಇಲ್ಲ ಎಂದು ರಾಜ್ಯ ಸರ್ಕಾರ ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದೆ.
ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ರಾಜ್ಯ ಸರ್ಕಾರವು ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ದ್ವಿಚಕ್ರ ವಾಹನಗಳನ್ನು ವಾಣಿಜ್ಯ ಉದ್ದೇಶದ ಟ್ಯಾಕ್ಸಿಗಳಾಗಿ ಬಳಸಲು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಅಫಿಡವಿಟ್‌ನಲ್ಲಿ ತಿಳಿಸಿದೆ. ಅದಕ್ಕಾಗಿ ಸರ್ಕಾರ ಪ್ರಮುಖವಾಗಿ ರಸ್ತೆ ಸುರಕ್ಷತೆ ಹಾಗೂ ಪ್ರಯಾಣಿಕರ ಹಿತರಕ್ಷಣೆಯ ಕಾರಣಗಳನ್ನು ಮುಂದಿಟ್ಟಿದೆ.ಸುರಕ್ಷತೆ ಮತ್ತು ವಿಮೆಯ ಕೊರತೆ: ಬೈಕ್ ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರಿಗೆ ಯಾವುದೇ ಸೂಕ್ತ ಸುರಕ್ಷತೆ ಇರುವುದಿಲ್ಲ. ಅಷ್ಟೇ ಅಲ್ಲದೆ, ಇಂತಹ ವಾಹನಗಳಿಗೆ ಯಾವುದೇ ಅಧಿಕೃತ ವಿಮಾ ರಕ್ಷಣೆ ಇರುವುದಿಲ್ಲ.ಹೆಚ್ಚುತ್ತಿರುವ ಅಪಘಾತಗಳು: ದ್ವಿಚಕ್ರ ವಾಹನಗಳಲ್ಲಿ ಅಪಘಾತಗಳು ಸಂಭವಿಸುವ ಮತ್ತು ಸಾವು-ನೋವುಗಳು ಸಂಭವಿಸುವ ಪ್ರಮಾಣ ತೀರಾ ಹೆಚ್ಚಾಗಿರುತ್ತದೆ. ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ `ಬೈಕ್ ಟ್ಯಾಕ್ಸಿ' ಎಂಬ ಪದದ ಯಾವುದೇ ಅಧಿಕೃತ ವ್ಯಾಖ್ಯಾನ ಅಥವಾ ನಿಯಮಾವಳಿಗಳೇ ಇಲ್ಲ ಎಂದು ಸರ್ಕಾರ ಸುಪ್ರೀಂಕೋರ್ಟ್ಗೆ ಸ್ಪಷ್ಟಪಡಿಸಿದೆ.ಸುಪ್ರೀಂಕೋರ್ಟ್ನಲ್ಲಿ ಕಾನೂನು ಹೋರಾಟ ನಡೆಸುತ್ತಿರುವ ಬೆನ್ನಲ್ಲೇ, ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಸಾರಿಗೆ ಇಲಾಖೆಯ ಜಾರಿ ವಿಭಾಗದ ಕಾರ್ಯಾಚರಣೆ ಎರಡನೇ ದಿನವೂ ಭರ್ಜರಿಯಾಗಿ ಮುಂದುವರಿದಿದೆ. ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ಓಲಾ, ಊಬರ್ ಹಾಗೂ ರಾಪಿಡೋ ಸೇರಿದಂತೆ ವಿವಿಧ ಆ್ಯಪ್ ಆಧಾರಿತ ಅನಧಿಕೃತ ಬೈಕ್ ಟ್ಯಾಕ್ಸಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ.ಪ್ರಮುಖವಾಗಿ ಬೆಂಗಳೂರಿನ ಕೋರಮಂಗಲ ಆರ್‌ಟಿಒ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ತೀವ್ರಗೊಂಡಿದ್ದು, ಇಂದು ಒಂದೇ ದಿನ ಅಧಿಕಾರಿಗಳು 85ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಿಕೊಂಡಿದ್ದಾರೆ. ಇಂತಹ ಅನಧಿಕೃತ ಸೇವೆಗಳಿಗೆ ಬ್ರೇಕ್ ಹಾಕಲು ಸಾರಿಗೆ ಇಲಾಖೆಯು ಒಟ್ಟು 11 ವಿಶೇಷ ತಂಡಗಳನ್ನು ರಚನೆ ಮಾಡಿದ್ದು, ನಿನ್ನೆ ಒಂದೇ ದಿನ ಬರೋಬ್ಬರಿ 256 ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಲಾಗಿತ್ತು. ಆ ಮೂಲಕ ಕೇವಲ ಎರಡು ದಿನಗಳಲ್ಲಿ ನೂರಾರು ಬೈಕ್‌ಗಳನ್ನು ಜಪ್ತಿ ಮಾಡುವ ಮೂಲಕ ಸಾರಿಗೆ ಇಲಾಖೆ ಖಡಕ್ ಮುನ್ನೆಚ್ಚರಿಕೆ ನೀಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST