LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

BJPಯಲ್ಲಿ ಬಣ ರಾಜಕೀಯಕ್ಕೆ ಅವಕಾಶವಿಲ್ಲ, ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ. ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು. ಈ ನಿಟ್ಟಿನಲ್ಲಿ ಸಭೆ, ಸಮಾವೇಶಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ ತಮ್ಮ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾನುವಾರ ಸೂಚನೆ ನೀಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ. ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು. ಈ ನಿಟ್ಟಿನಲ್ಲಿ ಸಭೆ, ಸಮಾವೇಶಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ ತಮ್ಮ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕೆಂದು ವಿನಂತಿಸುವೆ. ಭಾರತೀಯ ಜನತಾ ಪಾರ್ಟಿ ಕೂಡು ಕುಟುಂಬವಿದ್ದಂತೆ, ಪಕ್ಷದ ಚೌಕಟ್ಟಿನಲ್ಲೇ ಪ್ರತಿಯೊಂದು ಸಭೆ, ಕಾರ್ಯಕ್ರಮಗಳು ನಡೆಯಬೇಕೇ ಹೊರತು ಪಕ್ಷದ ನಿಯಮ, ಧ್ಯೇಯಗಳನ್ನು ಬದಿಗೆ ಸರಿಸಿ ಯಾವುದೇ ಚಟುವಟಿಕೆಗಳನ್ನು ನಡೆಸುವುದು ಸಂಘಟನೆಯ ಆಶಯಕ್ಕೆ ಪೂರಕವಾಗಿಲ್ಲದಿರುವುದನ್ನು ವಿನಮ್ರತೆಯಿಂದ ಸಹೃದಯರಲ್ಲಿ ತಿಳಿಸಬಯಸುತ್ತೇನೆಂದು ಹೇಳಿದ್ದಾರೆ.

ರಾಜ್ಯಾಧ್ಯಕ್ಷನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಗೆ ಇನ್ನಷ್ಟು ಬಲ ತುಂಬುವ ಕಾರ್ಯಕ್ರಮದಡಿಯಲ್ಲಿ ಪಕ್ಷದ ಹಿರಿಯರು, ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಎಲ್ಲ ಹಿರಿಯರೊಂದಿಗೆ ಅತೀ ಶೀಘ್ರದಲ್ಲೇ ಸಭೆ ಕರೆಯಲಿದ್ದೇನೆಂದು ತಿಳಿಸಿದ್ದಾರೆ.

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಠಕ್ಕರ್‌ ನೀಡಲು ದಾವಣಗೆರೆಯಲ್ಲಿ ವಿಜಯೇಂದ್ರ ಬಣದ ನಾಯಕರು ಇಂದು ಸಭೆ ನಡೆಸಿದ್ದಾರೆ.

ದಾವಣಗೆರೆ ಸಾಯಿ ಇಂಟರ್‌ನ್ಯಾಷನಲ್‌ ಹೋಟೆಲ್‌ನಲ್ಲಿಂದು ಮಧ್ಯಾಹ್ನ 12ಕ್ಕೆ ಸಭೆ ನಡೆದಿದ್ದು, ಸಭೆಯಲ್ಲಿ ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಹರತಾಳು ಹಾಲಪ್ಪ, ಸೋಮಶೇಖರ ರೆಡ್ಡಿ, ಎಸ್.ಎ.ರವೀಂದ್ರನಾಥ್, ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಸೇರಿ 40ಕ್ಕೂ ಹೆಚ್ಚು ಮುಖಂಡರು ಪಾಲ್ಗೊಂಡಿದ್ದಾರು ಎಂದು ತಿಳಿದುಬಂದಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣಗಳ ನಡುವಿನ ಮುನಿಸು ಹೈಕಮಾಂಡ್ ಮಧ್ಯ ಪ್ರವೇಶದಿಂದ ಶಮನವಾಗಿದೆ ಎನ್ನುವಾಗಲೇ ದಾವಣಗೆರೆಯಲ್ಲಿ ಸೇರಿರುವ ಈ ಸಭೆ ಕುತೂಹಲ ಕೆರಳಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು