LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

''BJP ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ: ಸಿಎಂ ಸಿದ್ದರಾಮಯ್ಯ''

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ ಸಲ್ಲಿಸಿದ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯವು (ಟ್ರಯಲ್ ಕೋರ್ಟ್) ತಿರಸ್ಕರಿಸಿರುವುದು ಪ್ರಧಾನಿ ಮೋದಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡು ರಾಜಕೀಯ ವಿರೋಧಿಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎನ್ನುವುದನ್ನು ಮತ್ತೊಮ್ಮೆ ಜಗಜ್ಜಾಹೀರಾಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ ಸಲ್ಲಿಸಿದ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯವು (ಟ್ರಯಲ್ ಕೋರ್ಟ್) ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ಪ್ರತಿಭಟನೆ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನೀಡುತ್ತಿರುವ ಇಂತಹ ಕಿರುಕುಳವನ್ನು ಎದುರಿಸಲು ಸೋನಿಯಾ ಗಾಂಧಿ ಮತ್ತವರ ಕುಟುಂಬದ ಜೊತೆ ನೈತಿಕ ಬೆಂಬಲವಾಗಿ ನಾವು ನಿಂತಿದ್ದೇವೆ, ದೇಶದ ಕೋಟ್ಯಂತರ ಜನರಿದ್ದಾರೆಂದು ಹೇಳಿದರು.

1937 ರಲ್ಲಿ ಜವಾಹರ್ ಲಾಲ್ ನೆಹರೂರವರು ದೇಶದ ಜನರಲ್ಲಿ ಸ್ವಾತಂತ್ರ್ಯ ಹೋರಾಟದ ಬಗ್ಗೆ ಜಾಗೃತಿ ಮೂಡಿಸಲು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಾರಂಭಿಸಿದರು. ಇದು ಕಾಂಗ್ರೆಸ್ ಪಕ್ಷದ ಆಸ್ತಿ. ನಂತರ ಈ ಪತ್ರಿಕೆಯನ್ನು ಯಂಗ್ ಇಂಡಿಯನ್ ಸಂಸ್ಥೆ ವಹಿಸಿಕೊಂಡಿತು. ಸಂಸ್ಥೆಗೆ ಸೇರಿದ್ದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ ಮತ್ತು ಆಸ್ಕರ್ ಫರ್ನಾಂಡಿಸ್ ಇವರ ಮೇಲೆ ಪ್ರಕರಣ ದಾಖಲಿಸಿ, ಇಡಿ ತನಿಖೆಯನ್ನು ಮಾಡಿಸಲಾಯಿತು.

2012 ರಲ್ಲಿ ಸುಬ್ರಮಣ್ಯಂಸ್ವಾಮಿಯವರು ಇವರ ವಿರುದ್ಧ ದಾವೆ ಹೂಡಿದ್ದರು. ಪ್ರಸ್ತುತ ಇ.ಡಿ ಯವರು ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿದೆ. ಈ ಪ್ರಕರಣವನ್ನು ಸುಳ್ಳು ಎಂದು ನ್ಯಾಯ ಎತ್ತಿಹಿಡಿದಿದೆ ಎಂದು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು