LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಸಿಎಲ್‍ಪಿ ಸಭೆಯಲ್ಲಿ ಬಿಜೆಪಿ ಶಾಸಕರು

ಬೆಳಗಾವಿ: ನಿನ್ನೆ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೂವರು ಬಿಜೆಪಿ ಶಾಸಕರು ಹಾಜರಾಗಿದ್ದು, ಕೂತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಕಾಂಗ್ರೆಸ್ ಶಾಸಕಾಂಗ ಸಭೆಗೆ ತೆರಳಿದ್ದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್. ಸಭೆಗೆ ಮುಖ ತೋರಿಸಿ ಊಟ ಮುಗಿಸಿಕೊಂಡು ಹೊರ ಬಂದಿದ್ದಾರೆ.

ಈ ಇಬ್ಬರು ವಿಧಾನಸಭಾ ಸದಸ್ಯರ ಜೊತೆಗೆ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸಹ ಹಾಜರಾಗಿದ್ದರು ಎಂದು ಹೇಳಲಾಗಿದೆ. ಈ ಮೂವರು ಶಾಸಕರು ಶಾಸಕಾಂಗ ಸಭೆಗೆ ಹಾಜರಾಗಿರಲಿಲ್ಲ. ಊಟಕ್ಕೆ ಆಹ್ವಾನ ನೀಡಿದ್ದಕ್ಕೆ ಬಂದಿದ್ದರು ಎಂದು ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ವಿಪಕ್ಷ ನಾಯಕ ಆರ್.ಅಶೋಕ್ ಸಹ ತಾವು ಸೋಮಶೇಖರ್ ಅವರೊಂದಿಗೆ ಮಾತನಾಡಿದ್ದು, ಅವರು ಸಹ ಭೋಜನಕ್ಕೆ ತೆರಳಿದ್ದಾಗಿ ತಿಳಿಸಿದ್ದಾರೆ ಎಂದು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಶಾಸಕರ ಕ್ಷೇತ್ರಗಳಿಗೆ 25 ಕೋಟಿ ರೂ. ಅನುದಾನ ನೀಡುವುದಾಗಿ ಮುಖ್ಯಮಂತ್ರಿಯವರು ಘೋಷಣೆ ಮಾಡಿರುವುದಕ್ಕೆ ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಗಿದೆ.

ಕಾಂಗ್ರೆಸ್ ಶಾಸಕರು ಒಕ್ಕೊರಲಿನಿಂದ ಮುಖ್ಯಮಂತ್ರಿಯವರನ್ನು ಅಭಿನಂದಿಸಿದ್ದು ಈ ಸಂದರ್ಭದಲ್ಲಿ ಮಾತನಾಡಿರುವ ಮುಖ್ಯಮಂತ್ರಿಯವರು ಲೋಕಸಭಾ ಚುನಾವಣೆಗೆ ಎಲ್ಲರೂ ಸಜ್ಜಾಗಿ ಎಂದು ಕರೆ ನೀಡಿದ್ದು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳ ಬಗ್ಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಮಾವೇಶ ಮಾಡಿ, ಜನರಿಗೆ ಲೋಕಸಭೆಗೆ ಗ್ಯಾರಂಟಿಗಳ ಪ್ರಚಾರ ಹೆಚ್ಚೆಚ್ಚು ಮನವರಿಕೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ನಿನ್ನೆ ರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಗೆ ಕೆಲವು ಶಾಸಕರು ಗೈರಾಗಿರುವುದಕ್ಕೆ ಮುಖ್ಯಮಂತ್ರಿಯವರು ಸಿಟ್ಟಾದರು ಎಂದು ಹೇಳಲಾಗಿದೆ.ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ ಪಾಟೀಲ್, ಶರಣು ಪ್ರಕಾಶ್ ಪಾಟೀಲ್, ಜಮೀರ್ ಅಹಮದ್, ಸತೀಶ್ ಜಾರಕಿಹೊಳಿ, ಶರಣಬಸಪ್ಪ ದರ್ಶನಾಪುರ್ ಸೇರಿದಂತೆ ಕೆಲವರು ಗೈರಾಗಿದ್ದರು ಎನ್ನಲಾಗಿದೆ.ಗೈರಾದವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು ಸಚಿವ ಸಂಪುಟ ಸಭೆಯಲ್ಲಿ ಅವರಿಗೆ ಎಚ್ಚರಿಕೆ ನೀಡುವುದಾಗಿ ಹೇಳಿದ್ದಾರೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು