LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಬಾಯ್ಲರ್ ಸ್ಫೋಟ: ಇಬ್ಬರು ಸಾವು

ಮೀರತ್: ಉತ್ತರ ಪ್ರದೇಶದ ಮೀರತ್‍ನ ಟೈರ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಬಾಯ್ಲರ್ ಸ್ಪೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಉತ್ತರ ಪ್ರದೇಶದ ಮೀರತ್‍ನ ಇಂಚೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ವನ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ.
ಈ ಪ್ರದೇಶದಲ್ಲಿ ಟೈರ್ ಕರಗಿಸುವ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದು ಹಲವು ಪೊಲೀಸ್ ಠಾಣೆಗಳಿಂದ ಪಡೆಗಳು ಆಗಮಿಸಿದ್ದು, ರಕ್ಷಣಾ ಕಾರ್ಯ ಆರಂಭಿಸಲಾಗಿದೆ. ಸ್ಥಳಕ್ಕಾಗಮಿಸಿದ ಎಸ್ಪಿ ದೇಹತ್ ಕಮಲೇಶ್ ಬಹದ್ದೂರ್ ಸಿಂಗ್, ದುರ್ಗಾ ಟೈರ್ಸ್ ಹೆಸರಿನಲ್ಲಿ ಟೈರ್ ಕರಗಿಸುವ ಕಾರ್ಖಾನೆ ಇದೆ. ಬೆಳಗ್ಗೆ ಕಾರ್ಖಾನೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು.

6.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಈ ಕಾರ್ಖಾನೆಯು ಇಲ್ಲಿನ ನಿವಾಸಿಯಾಗಿರುವ ಅಮಿತ್ ಠಾಕೂರ್ ಅವರಿಗೆ ಸೇರಿದ್ದು ಎನ್ನಲಾಗಿದೆ. ಸ್ಥಳದಲ್ಲಿ ಪೊಲೀಸರಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಗಾಯಾಳುಗಳನ್ನು ಮೀರತ್ ಗಂಗಾನಗರದ ದಿವ್ಯಜ್ಯೋತಿ ನರ್ಸಿಂಗ್ ಹೋಂಗೆ ದಾಖಲಿಸಲಾಗಿದೆ. ಬಾಯ್ಲರ್ ಸ್ಫೋಟಗೊಳ್ಳಲು ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಅಪಘಾತಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ, ಇದಕ್ಕಾಗಿ ವಿಧಿವಿಜ್ಞಾನ ತಂಡ ಮತ್ತು ಇತರ ತನಿಖಾ ತಂಡಗಳು ಕೂಡ ಸ್ಥಳಕ್ಕೆ ತಲುಪುತ್ತಿವೆ. ಎಸ್ಪಿ ದೇಹತ್ ಕಮಲೇಶ್ ಬಹದ್ದೂರ್ ಅವರು ಈ ಸಂಪೂರ್ಣ ಘಟನೆಯ ಮೇಲೆ ನಿಗಾ ವಹಿಸಿದ್ದಾರೆ.ಕಾರ್ಖಾನೆಯಲ್ಲಿ ಸುರಕ್ಷತಾ ಮಾನದಂಡಗಳ ಬಗ್ಗೆ ಹೆಚ್ಚಿನ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಹೇಳಲಾಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು