LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಶಾಲೆಗಳಿಗೆ ಬಾಂಬ್ ಬೆದರಿಕೆ ವಿದ್ಯಾರ್ಥಿಗಳು, ಪೋಷಕರಲ್ಲಿ ಆತಂಕ ಸೃಷ್ಟಿ

ಬೆಂಗಳೂರು: ನಗರದಲ್ಲಿ ಮತ್ತೆ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಬಸವೇಶ್ವರ ನಗರದ ನ್ಯಾಫಲ್ ಹಾಗೂ ವಿದ್ಯಾಶಿಲ್ಪ, ಸದಾಶಿವನಗರದ ನೀವ್ ಅಕಾಡೆಮಿ ಮತ್ತು ಪೂರ್ಣಪ್ರಜ್ಞಾ ಶಾಲೆಗಳು ಸೇರಿದಂತೆ ಯಲಹಂಕ, ಆನೇಕಲ್ ಮತ್ತಿತರರ ಕಡೆ ಇರುವ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ.

ಸುಮಾರು 44ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಸಿಂಗೇನ ಅಗ್ರಹಾರದ ಎಬಿನೇಜರ್, ನಾಗದೇವನಹಳ್ಳಿಯ ಚಿತ್ರಕೂಟ, ಚಿತ್ರ ಕೌಶಲ್ಯ ಶಾಲೆಗಳಿಗೆ ಬೆದರಿಕೆ ಮೇಲ್ ಬಂದಿದೆ.ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದು, ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ.

ಇನ್ನು ಆತಂಕಗೊಂಡ ಪೋಷಕರು ಶಾಲೆ ಬಳಿ ಓಡೋಡಿ ಬಂದು ತಮ್ಮ-ತಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ.
ಕಳೆದ 1 ವರ್ಷದಿಂದ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ವರ್ಷ ಒಂದೇ ದಿನ 30 ಶಾಲೆಗಳಿಗೆ ಇ-ಮೇಲ್ ಬೆದರಿಕೆ ಹಾಕಲಾಗಿತ್ತು. ಆದರೂ ಸಹ ಈವರೆಗೂ ಬಾಂಬ್ ಬೆದರಿಕೆ ಹಾಕಿರುವವರ ಬಂಧನವಾಗಿಲ್ಲ. ಇದೀಗ ಮತ್ತೆ ಅದೇ ಚಾಳಿ ಮುಂದುವರೆಸಿದ್ದಾರೆ.

ಬಾಂಬ್ ಬೆದರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದಾರೆ. ಶಾಲೆಗಳಿಗೆ ಬಾಂಬ್ ಪತ್ತೆ ದಳ, ನಿಷ್ಕ್ರಿಯ ದಳವನ್ನು ಕಳಿಸಿದ್ದೇವೆ. ಬೆದರಿಕೆ ಬಂದಿರುವ ಶಾಲೆಗಳಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಾರೆ. ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು

ವೈಟ್‍ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಸ್ಕೂಲ್‍ಗೆ ಇಂದು ಬೆಳಿಗ್ಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ ಎಂದು ವೈಟ್‍ಫೀಲ್ಡ್ ಡಿಸಿಪಿ ಶಿವಕುಮಾರ್ ತಿಳಿಸಿದ್ದು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳಗಳು ಶಾಲೆಗೆ ತೆರಳಿ ಪರಿಶೀಲಿಸುತ್ತಿದೆ ಎಂದು ತಿಳಿಸಿದ್ದಾರೆ.
ಬೆದರಿಕೆ ಮೇಲ್ ಮಾಡಿರುವುದು ಮುಜಾಹೀದ್ ಎಂಬ ಹೆಸರಿನಿಂದ ಬಂದಿದ್ದು, ದೊಡ್ಡ ಅನಾಹುತ ಮಾಡುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ನೀವೆಲ್ಲರೂ ಮತಾಂತರಗೊಳ್ಳಬೇಕು ಇಲ್ಲದೆ ಇದ್ದರೆ ಸಾಯಲು ತಯರಾಗಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಬೆದರಿಕೆ ಬಗ್ಗೆ ಮಾಹಿತಿ ಪಡೆದ ಕೂಡಲೇ ಶಾಲಾ ಆಡಳಿತ ಮಂಡಳಿಯವರು ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ನೀಡಿ ತಮ್ಮ ಮಕ್ಕಳನ್ನು ಶಾಲೆಯಿಂದ ಕರೆದೊಯ್ಯುವಂತೆ ತಿಳಿಸಿದ್ದಾರೆ.

ಸುದ್ದಿ ತಿಳಿದ ಕೂಡಲೇ ಮಕ್ಕಳ ಪೋಷಕರು ಶಾಲೆಗೆ ಧಾವಿಸಿ ಮಕ್ಕಳನ್ನು ಮನೆಗೆ ಕರೆದೊಯ್ದಿದ್ದಾರೆ. ಬಹುತೇಕ ಬೆದರಿಕೆ ಬಂದಿದ್ದ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.ಶಾಲೆಗಳಿಗೆ ಧಾವಿಸಿರುವ ಶ್ವಾನಗಳ ಹಾಗೂ ಬಾಂಬ್ ಪತ್ತೆ ದಳ ಮತ್ತು ನಿಷ್ಕ್ರಿಯ ದಳ ಪರಿಶೀಲನೆ ನಡೆಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು