LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

`ಯೋಗದಿಂದ ಸದೃಢ ದೇಹ ಮತ್ತು ಸದೃಢ ಮನಸ್ಸು ನಿರ್ಮಾಣ’

ಬಾಗೇಪಲ್ಲಿ: ಯೋಗದಿಂದ ಸದೃಢ ದೇಹ ಮತ್ತು ಸದೃಢ ಮನಸ್ಸು ನಿರ್ಮಾಣವಾಗುತ್ತದೆ ಎಂದು ಬ್ರೈಟ್ ಇಂಟರ್ ನ್ಯಾಷನಲ್ ಶಾಲೆಯ ಪ್ರಾಂಶುಪಾಲ ಆರ್. ಸುರೇಶ್ ಬಾಬು ತಿಳಿಸಿದರು.

ಪಟ್ಟಣದ ಕೊತ್ತಪಲ್ಲಿ ರಸ್ತೆಯಲ್ಲಿರುವ ಬ್ರೈಟ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬರೂ ಯೋಗವನ್ನು ಜೀವನದಲ್ಲಿ ಒಂದು ಭಾಗವಾಗಿ ಅಳವಡಿಸಿಕೊಳ್ಳಬೇಕು.

ಭಾರತ ಪರಿಚಯಿಸಿದ ಯೋಗವು ಇಂದು ವಿಶ್ವದಲ್ಲೆಡೆ ಹರಡಿರುವುದು ಭಾರತದ ನಮ್ಮ ಸಂಸ್ಕೃತಿಯ ಹೆಮ್ಮೆಯಾಗಿದೆ. ಇಂದಿನ ಒತ್ತಡದ ಜೀವನದಲ್ಲಿ ಮನುಷ್ಯನ ಆರೋಗ್ಯ ಕಾಪಾಡಿಕೊಳ್ಳಲು ಯೋಗಾಭ್ಯಾಸ ಅಗತ್ಯವಾಗಿದೆ. ಯಾವುದೇ ವಯಸ್ಸಿನ ಮಿತಿಯಿಲ್ಲದೆ ಯೋಗವನ್ನು ಅಭ್ಯಾಸ ಮಾಡಿಕೊಳ್ಳಬೇಕು.
ದೇಹ ಮತ್ತು ಮನಸ್ಸು ಎರಡನ್ನೂ ಸ್ವಸ್ಥವಾಗಿಡಲು ಯೋಗದಿಂದ ಸಾಧ್ಯವಿದೆ. ಯೋಗವೆಂದರೆ ಔಷಧ ರಹಿತ ಚಿಕಿತ್ಸಾ ಪದ್ಧತಿಯ ದೇಸಿ ಕ್ರಮ. ಮಿತ ಆಹಾರ ಸೇವನೆ, ಉಪವಾಸ ವ್ಯಾಯಾಮದಂತಹ ಚಿಕಿತ್ಸಾ ಕ್ರಮಗಳ ಮೂಲಕ ಮನುಷ್ಯನ ದೇಹವನ್ನು ನಿಯಂತ್ರಣ ತರಬಹುದಾಗಿದೆ.

ಪ್ರತಿದಿನ ಯೋಗ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಬಹುದು. ಜೊತೆಗೆ ಸರಳ ಯೋಗಗಳು ನಮ್ಮ ಮನಸ್ಸನ್ನು ಉಲ್ಲಸವಾಗಿಡುತ್ತದೆ. ಜಗತ್ತಿಗೆ ಯೋಗವನ್ನು ಅನಾದಿ ಕಾಲದಿಂದಲೂ ಪರಿಚಯ ಮಾಡಿ ಕೊಟ್ಟಿರುವುದು ನಮ್ಮ ಭಾರತ ದೇಶದ ಋಷಿ ಮುನಿಗಳು. ಯೋಗದಿಂದ ಸದೃಢ ದೇಹ ಮತ್ತು ಸದೃಢ ಮನಸ್ಸು ನಿರ್ಮಾಣವಾಗುತ್ತದೆ.

ಒಳ್ಳೆಯ ಜೀವನಶೈಲಿ, ಸಾತ್ವಿಕ ಆಹಾರ ಸೇವನೆ ಹಾಗೂ ಉತ್ತಮ ಚಿಂತನೆ ಮಾಡುತ್ತಾ ಕಾಯಕ ಯೋಗದ ಮೂಲಕ ಸಾರ್ಥಕವಾಗಿ ಬದುಕಬೇಕಾಗಿದೆ ಎಂದರು.ಈ ಸಂದರ್ಭದಲ್ಲಿ ಬ್ರೈಟ್ ಇಂಟರ್ ನ್ಯಾಷನಲ್ ಶಾಲೆಯ ಅಧ್ಯಕ್ಷರಾದ ಜಿ.ಎಸ್. ಸಿದ್ದಲಿಂಗಯ್ಯ ಸೇರಿದಂತೆ ಶಿಕ್ಷಕರು, ಶಿಕ್ಷಕಿಯರು ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು