LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ದೃಷ್ಠಿದೋಷ ಮುಕ್ತಗೊಳಿಸಲು ಆಶಾಕಿರಣ ಯೋಜನೆ ಸಹಕಾರಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ: ದೃಷ್ಟಿ ದೋಷ ಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆಶಾಕಿರಣ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಶಾಸಕರು ಹಾಗೂ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.

ನಗರದ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂಧತ್ವ ಮುಕ್ತ ಸಮಾಜ ನಿಮಾರ್ಣಕ್ಕಾಗಿ ಮನೆ ಬಾಗಿಲಿಗೆ ಆಶಾಕಿರಣ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಹಾಗೂ ಮಕ್ಕಳಿಗೆ ಕನ್ನಡಕ ವಿತರಿಸಿ ಅವರು ಮಾತನಾಡಿದರು.ಆಶಾಕಿರಣವು ರಾಜ್ಯ ಸರ್ಕಾರದ ಒಂದು ಮಹತ್ವಕಾಂಕ್ಷೆ ಯೋಜನೆಯಾಗಿದೆ.

ದೃಷ್ಟಿದೋಷ ಮುಕ್ತ ರಾಜ್ಯವನ್ನಾಗಿಸುವ ಉದ್ದೇಶವನ್ನು ಆಶಾಕಿರಣ ಯೋಜನೆ ಹೊಂದಿದೆ. ಆಶಾಕಿರಣ ಯೋಜನೆಯಡಿ ಮನೆಬಾಗಿಲಿಗೆ ಬಂದು ಕುಟುಂಬದ ಪ್ರತಿ ಸದಸ್ಯರ ಕಣ್ಣುಗಳನ್ನ ತಪಾಸಣೆ ಮಾಡಿ ದೃಷ್ಟಿ ದೋಷವುಳ್ಳವರಿಗೆ ಕನ್ನಡಕ ನೀಡಲಾಗುತ್ತಿದೆ ಎಂದರು.
ಮನುಷ್ಯನಿಗೆ ಕಣ್ಣು ತುಂಬಾ ಮುಖ್ಯ ವಾಗಿದ್ದು ವಯೋಸಹಜ, ಅನುವಂಶಿಯತೆ, ಹಾಗೂ ಇನ್ನಿತರ ಆರೋಗ್ಯ ಸಮಸ್ಯೆಯಿಂದ ದೃಷ್ಠಿದೋಷ, ಅಂದತ್ವ ಉಂಟಾಗುತ್ತದೆ.

ಇದರ ನಿವಾರಣೆಗೆ ಆಶಾಕಿರಣ ಕಾರ್ಯಕ್ರಮವನ್ನು ಅನುಷ್ಠಾನಗೊಳ್ಳಿಸಲಾಗಿದೆ. ರಾಜ್ಯದ ನಾಲ್ಕು ಜಿಲ್ಲೆಗಳಾದ ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕಲ್ಬುರ್ಗಿ ಜಿಲ್ಲೆಗಳಲ್ಲಿ ಮೊದಲ ಬಾರಿಗೆ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯು 10 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದ್ದು, ಅದರಲ್ಲಿ ಆಶಾಕಿರಣ ಯೋಜನೆಯಾಡಿ 8,60,000 ಜನರನ್ನು ತಪಾಸಣೆಗೆ ಒಳಪಡಿಸಲಾಗಿದೆ. ದೃಷ್ಟಿದೋಷ ಉಂಟಾಗಿರುವ ವ್ಯಕ್ತಿಗಳಿಗೆ ಅಗತ್ಯವಾಗಿರುವ ಕನ್ನಡಕ ಹಾಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ ಅವರು ಮಾತನಾಡಿ ಇತರೆ ಜಿಲ್ಲೆಗಳಿಗೆ ಹೋಲಿಸಿದ್ದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಮಕ್ಕಳು ಉತ್ತಮವಾದ ದೃಷ್ಟಿಹೊಂದಿದ್ದಾರೆ. ಇದು ಬಹಳ ಸಮಾಧಾನದ ಸಂಗತಿಯಾಗಿದೆ. ಪ್ರಸ್ತುತ ನಮ್ಮ ಜಿಲ್ಲೆಯಲ್ಲಿ 31 ಸಾವಿರಕ್ಕೂ ಹೆಚ್ಚು ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಇದರಲ್ಲಿ ಮೂರುವರೆ ಸಾವಿರ ಮಕ್ಕಳಿದ್ದಾರೆ ಎಂದರು.

ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಚಂದ್ರಶೇಖರ್, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಉಮಾರಾಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು