LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಆಕಾಂಕ್ಷಿಗಳಲ್ಲಿ ಆತಂಕ ಸದ್ದುಗದ್ದಲಗಳಿಲ್ಲದೆ ನಡೆದಿದೆ ಸಂಪುಟ ವಿಸ್ತರಣೆ ಕಸರತ್ತು

ದೆಹಲಿ: ಕರ್ನಾಟಕ ರಾಜ್ಯ ಸಂಪುಟ ವಿಸ್ತರಣೆ ಕಸರತ್ತು ದೆಹಲಿಯಲ್ಲಿ ನಡೆದಿದ್ದು, ಸಚಿವಾಕಾಂಕ್ಷಿಗಳಲ್ಲಿ ಒಂದು ರೀತಿಯಲ್ಲಿ ಆತಂಕ ಮೂಡಿಸಿದೆ.
ತಮಗೆ ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯುತ್ತದೋ ಇಲ್ಲವೋ ಎಂಬ ಆತಂಕದಲ್ಲಿ ಶಾಸಕರಿದ್ದಾರೆ. ಸಚಿವರ ಸ್ಥಾನ ಬಯಸಿ ಬಹುತೇಕ ಶಾಸಕರು ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ತಮ್ಮ ತಮ್ಮ ನೆಚ್ಚಿನ ಪಕ್ಷದ ನಾಯಕರನ್ನು ಭೇಟಿ ಮಾಡಿ ತಮ್ಮ ಅರ್ಹತೆಯ ಆಧಾರ ಮೇಲೆ ಸಚಿವ ಸ್ಥಾನ ದೊರಕಿಸುವಂತೆ ದುಂಬಾಲು ಬೀಳುತ್ತಿದ್ದಾರೆ. ತಮಗೆ ಈ ಬಾರಿ ಸಚಿವ ಸ್ಥಾನ ದೊರೆಯುವುದು ಖಚಿತ ಎಂದು ನಿರೀಕ್ಷೆಯಲ್ಲಿ ಹಲವರಿದ್ದಾರೆ. ತಾವು ಪ್ರತಿನಿಧಿಸುವ ಪ್ರದೇಶ ಸಮುದಾಯ ಮತ್ತಿತರರ ಲೆಕ್ಕಾಚಾರವನ್ನು ತಾವು ಯಾವ ಕಾರಣಕ್ಕಾಗಿ ಸಚಿವರಾಗಬೇಕು ಎಂಬುದು ನಾಯಕರಿಗೆ ಮನವರಿಕೆ ಮಾಡುವ ಪ್ರಯತ್ನದಲ್ಲಿದ್ದಾರೆ. ಮುಂಬೈ ಕರ್ನಾಟಕ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಭಾಗಗಳ ಆಧಾರದ ಮೇಲೆ ಸಚಿವ ಸ್ಥಾನ ಕೊಡಿಸಬೇಕು ಎಂಬ ಒತ್ತಾಯ ಪ್ರಬಲವಾಗಿ ವರಿಷ್ಠರ ಮೇಲೆ ಹೇರುತ್ತಿದ್ದಾರೆ. ಈಗಾಗಲೇ ಸಂಪುಟ ವಿಸ್ತರಣೆಗಾಗಿ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲು ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಮ್ಮ ಮೇಲೆ ಬರುತ್ತಿರುವ ಒತ್ತಡಗಳಿಗಾಗಿ ಯಾರಾ ಕೈಗೂ ಸಿಗದೆ ಓಡಾಡುತ್ತಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಪಕ್ಷದ ವರಿಷ್ಟರೊಂದಿಗೆ ಈ ಮೂವರು ನಾಯಕರು ಸಭೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮೂವರು ನಾಯಕರು ಸಂಪುಟ ವಿಸ್ತರಣೆಗೆ ಸಂಬಂಧಪಟ್ಟಂತೆ ಹಲವು ಶಾಸಕರ ಪಟ್ಟಿ ಸಿದ್ಧಪಡಿಸಿದ್ದು, ತಮ್ಮ ಪಟ್ಟಿಯನ್ನು ವರಿಷ್ಠರಿಗೆ ಸಭೆ ಸಂದರ್ಭದಲ್ಲಿ ನೀಡಲಿದ್ದಾರೆ. ಎಲ್ಲರ ಪಟ್ಟಿಯನ್ನು ಪರಾಮರ್ಶೆ ನಡೆಸಿ ವರಿಷ್ಠರು ಹಲವು ಶಾಸಕರ ಹೆಸರನ್ನು ಅಂತಿಮವಾಗಿ ಸಿದ್ಧಪಡಿಸಲಿದ್ದಾರೆ ಎಂದು ಹೇಳಲಾಗಿದೆ. ಅಂತಿಮ ಪಟ್ಟಿಯಲ್ಲಿ ಯಾರ ಹೆಸರು ಇರುತ್ತದೆ. ಇಲ್ಲವೋ ಎಂಬುದು ಸಹ ಸಚಿವಾಕಾಂಕ್ಷಿಗಳ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಈ ಪ್ರಕ್ರಿಯೆ ಇನ್ನು ಎರಡು ಮೂರು ದಿನ ನಡೆಯ ಬಹುದು ಎಂಬುದು ಹಲವರ ಲೆಕ್ಕಚಾರವಾಗಿದೆ. ದೆಹಲಿ ವಿಶೇಷ ಪ್ರತಿನಿಧಿಯಾಗಿರುವ ಟಿ.ಬಿ. ಜಯಚಂದ್ರ ಅವರಿಗೆ ಕ್ಯಾಬಿನೆಟ್ ಸ್ಥಾನ ಮಾನದ ಹುದ್ದೆ ಇದ್ದರೂ ಸಹ ಸಚಿವರಾಗಲು ಇಂಗಿತ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಮುಗಿದ ನಂತರ ಕಾಂಗ್ರೆಸ್ ಪಕ್ಷದಲ್ಲಿ ಯಾವ ಬೆಳವಣಿಗೆಗಳು ನಡೆಯುತ್ತವೆ ಎಂಬುದು ಕಾದು ನೋಡಬೇಕಿದೆ. ಈ ಮಧ್ಯೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ರಾಜ್ಯ ಉಸ್ತುವಾರಿ ಹೊತ್ತಿರುವ ರಣದೀಪ್ ಸುರ್ಜೆವಾಲ ಅವರ ಜತೆ ದೆಹಲಿಯ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು