LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸೆನ್ಸಾರ್ ಪಾಸಾದ "ಅಥಿ ಐ ಲವ್ ಯು'

ಈವರೆಗೂ ಚಲನಚಿತ್ರಗಳಿಗೆ ಸೆನ್ಸರ್ ಮಂಡಳಿ ಕೊಡುವ U, U/A,A,A,, ಸರ್ಟಿಫಿಕೇಟ್ ಗಳು ಪ್ರೇಕ್ಷಕರ ವರ್ಗವನ್ನು ನಿಗದಿ ಮಾಡುತ್ತಿದ್ದು ಅದೇ ರೀತಿ "ಅಥಿ ಐ ಲವ್ ಯು" ಚಿತ್ರಕ್ಕೂ ಸಹ ಸೆನ್ಸಾರ್ ಮಂಡಳಿ ಯು ಸರ್ಟಿಫಿಕೇಟ್ ನೀಡುವ ಮೂಲಕ ಮಕ್ಕಳಿಂದ ವಯೋ ವೃದ್ಧರವರೆಗೂ ಸೇರಿದಂತೆ ಎಲ್ಲಾ ವರ್ಗದ ಜನರು ಸಿನಿಮಾವನ್ನು ವೀಕ್ಷಣೆ ಮಾಡಬಹುದು ಎಂದು ಅನುಮತಿ ನೀಡಿದ್ದಾರೆ. ಆದರೆ ನಿರ್ದೇಶಕ ಲೋಕೇಂದ್ರ ಸೂರ್ಯ ಈ ಚಿತ್ರ ಕೇವಲ ದಂಪತಿಗಳಿಗೆ ಮಾತ್ರ ಎಂದು ಹೇಳಿದ್ದಾರೆ.

ಹೌದು ನಿರ್ದೇಶಕರ ಈ ಹೇಳಿಕೆಯಿಂದ ಎಂಥವರಿಗಾದರೂ ಗೊಂದಲ ಎನಿಸುವುದು ಸಹಜ. ಜನಸಾಮಾನ್ಯರು ಇಂದು ಥಿಯೇಟರ್ ಕಡೆ ಮುಖ ಮಾಡಿ ಚಿತ್ರಗಳನ್ನ ವೀಕ್ಷಿಸುವ ಪ್ರಮಾಣ ಕಡಿಮೆಯಾದ ಬೆನ್ನಲ್ಲಿ ಗಾಂಧಿನಗರದ ನಟರು, ನಿರ್ದೇಶಕರು, ನಿರ್ಮಾಪಕರು ಪ್ರೇಕ್ಷಕರನ್ನು ಥಿಯೇಟರ್ ನತ್ತ ಕರೆದು ತರಲು ಸಾಕಷ್ಟು ಸರ್ಕಸ್ ಮಾಡುತ್ತಿರುವ ಸಂದರ್ಭದಲ್ಲಿ, ನಿರ್ದೇಶಕ ಲೋಕೇಂದ್ರ ಸೂರ್ಯ ನನ್ನ "ಅಥಿ ಐ ಲವ್ ಯು" ಚಿತ್ರವನ್ನು ದಂಪತಿಗಳು ಮಾತ್ರ ಜೊತೆಯಲ್ಲಿ ಕುಳಿತು ನೋಡಬೇಕಿದೆ.

ಸೆನ್ಸರ್ ಮಂಡಳಿ ಕೊಟ್ಟಿರುವ U ಸರ್ಟಿಫಿಕೇಟ್ ಮತ್ತು ನಿರ್ದೇಶಕ ಲೋಕೇಂದ್ರ ಸೂರ್ಯ ಕೊಟ್ಟಿರುವ ಹೇಳಿಕೆಗೆ ಒಂದಕ್ಕೊಂದು ವಿರುದ್ಧವಾಗಿದೆ. ಈ ಬಗ್ಗೆ ನಿರ್ಮಾಪಕ ರೆಡ್ ಅಂಡ್ ವೈಟ್ ಸೆವೆನ್ ರಾಜ್ ಅವರು ನಿರ್ದೇಶಕರು ಕೊಟ್ಟಿರುವ ಹೇಳಿಕೆ ಸರಿಯಾಗಿದೆ ಅದರಿಂದ ನನಗೇನು ನಷ್ಟವಿಲ್ಲ ನಮ್ಮ ಸಿನಿಮಾ ದಂಪತಿಗಳೇ ನೋಡಬೇಕಾದ ಚಿತ್ರವಾದ ಕಾರಣ ಅವರನ್ನೇ ಉದ್ದೇಶಿಸಿ ನಿರ್ದೇಶಕರು ಮಾತನಾಡಿದ್ದಾರೆ ಈ ಸಾಂಸಾರಿಕ ವಿಚಾರಗಳು ಸಂಸಾರದ ಅನುಭವವನ್ನು ಕಂಡವರಿಗೆ ಮಾತ್ರವೇ ರುಚಿಸುತ್ತದೆ ವಿನಹ ಅದರ ಅನುಭವ ಇಲ್ಲದವರಿಗೆ ಅದು ಕ್ಷುಲ್ಲಕ ಎನಿಸಬಹುದು ಆ ನಿಟ್ಟಿನಲ್ಲಿ ನಿರ್ದೇಶಕರು ಕೊಟ್ಟಿರುವ ಹೇಳಿಕೆಯನ್ನೇ ನಾನು ಗೌರವಿಸುತ್ತೇನೆ ಎಂದು ಹೇಳಿದ್ದಾರೆ.

ಅಲ್ಲದೆ ಈ ಮೊದಲ ಚಿತ್ರCw L ಸರ್ಟಿಫಿಕೇಟ್ ಪಡೆದುಕೊಂಡ ಕಾರಣ ನನಗೆ ಬಹಳ ನಿರಾಶೆಯಾಗಿತ್ತು ಆದರೆ ಈಗ "ಅತಿ ಐ ಲವ್ ಯು U" ಸರ್ಟಿಫಿಕೇಟ್ ಪಡೆದುಕೊಂಡು ಬಿಡುಗಡೆಗೆ ಮತ್ತಷ್ಟು ಧೈರ್ಯ ತುಂಬಿದೆ ಎಂದರು ರೆಡ್ ಅಂಡ್ ವೈಟ್ ನಿರ್ಮಾಪಕ ಸವೆನ್ ರಾಜ್. ಮೊದಲಿನಿಂದಲೂ ಒಂದಲ್ಲ ಒಂದು ರೀತಿ ವಿಭಿನ್ನ ಪ್ರಯತ್ನಗಳನ್ನ ತಮ್ಮ ಇತಿಮಿತಿಗಳಲ್ಲಿ ಸಾಬೀತು ಪಡಿಸುತ್ತಿರುವ ಲೋಕೇಂದ್ರ ಸೂರ್ಯ ಈ ಬಾರಿಯೂ ಅಂತಹದ್ದೆ ಒಂದು ವಿಭಿನ್ನತೆಗೆ ಜೀವ ನೀಡಿದ್ದಾರೆ ಎಂದು ಕಾಣುತ್ತಿದೆ. ಈ ಎಲ್ಲಾ ಗೊಂದಲಗಳಿಗೆ ಡಿಸೆಂಬರ್ 7ರಂದು ಚಿತ್ರದ ಬಿಡುಗಡೆ ಉತ್ತರ ನೀಡಲಿದೆ. ಒಂದೇ ಮನೆ, ಎರಡೇ ಪಾತ್ರಗಳು, ಒಂದು ಸನ್ನಿವೇಶವನ್ನು ನಿರ್ದೇಶಕರು ಚಿತ್ರವನ್ನಾಗಿ ರೂಪಿಸಿದ್ದಾರೆ. ಇಂತಹ ವಿಭಿನ್ನ ಪ್ರಯತ್ನದ "ಅಥಿ ಐ ಲವ್ ಯು" ಚಿತ್ರ ಜನಮೆಚ್ಚುಗೆ ಪಡೆಯುತ್ತದೆ ಎಂಬ ಭರವಸೆ ಚಿತ್ರತಂಡಕ್ಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು