LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ಚಿಕ್ಕಬಳ್ಳಾಪುರ ಜಿಲ್ಲೆಯ ಬರ ನಿರ್ವಹಣೆಗೆ ಕ್ರಮ-ಸಚಿವ ಸುರೇಶ್


ಚಿಕ್ಕಬಳ್ಳಾಪುರ, ಆ.5: ಚಿಕ್ಕಬಳ್ಳಾಪುರ ಜಿಲ್ಲೆಯ ಎಂಟೂ ತಾಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಜನರು ಹಾಗೂ ಜಾನುವಾರುಗಳಿಗೆ ಯಾವುದೇ ತೊಂದರೆ ಆಗದಂತೆ ಸಮರೋಪಾದಿಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸಾರಿಗೆ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಇಲ್ಲಿನ ಜಿಲ್ಲಾ ಪಂಚಾಯತ್ ಸರ್. ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಪ್ರಕೃತಿ ವಿಕೋಪ ಮತ್ತು ಬರ ಪರಿಸ್ಥಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ, ಚಿಕ್ಕಬಳ್ಳಾಪುರ, ಗೌರಿಬಿದನೂರು, ಶಿಡ್ಲಘಟ್ಟ ಸೇರಿದಂತೆ ಎಲ್ಲ ತಾಲೂಕುಗಳಲ್ಲೂ ಮಳೆ ಕೊರತೆಯಿಂದ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಕಳೆದ ಮಾರ್ಚ್ನಿಂದ ಈವರೆಗೆ ಸುಮಾರು 86 ಮಿಲಿಮೀಟರ್ ಮಳೆಯಾಗಬೇಕಿದ್ದರೂ ಕೇವಲ ಶೇ. 4.5 ರಷ್ಟು ಮಾತ್ರ ಮಳೆಯಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆಗೆ ಮೊದಲ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಇದುವರೆಗೆ ಸುಮಾರು 1.25 ಲಕ್ಷ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊAಡಿದ್ದಾರೆ. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅಗತ್ಯವಿರುವ ಪ್ರದೇಶಗಳಲ್ಲಿ ಖಾಸಗಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲು ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದರು.ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ತಲಾ ಒಂದು ಕೋಟಿ ರೂಪಾಯಿ ಮೀಸಲಿಡಲಾಗಿದೆ. ಈ ಅನುದಾನವನ್ನು ತ್ವರಿತವಾಗಿ ಬಳಸಿಕೊಂಡು ಜನರ ಸಮಸ್ಯೆಗಳನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕುಡಿಯುವ ನೀರಿನ ಯೋಜನೆಗಳಿಗೆ ಯಾವುದೇ ರೀತಿಯ ಅನುದಾನದ ಕೊರತೆ ಉಂಟಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಬರದ ಪರಿಣಾಮ ಕೃಷಿ ಚಟುವಟಿಕೆಗಳ ಮೇಲೂ ತೀವ್ರ ಪರಿಣಾಮ ಬೀರಿದೆ. ಸಾಮಾನ್ಯವಾಗಿ ಈ ವೇಳೆಗೆ ಜಿಲ್ಲೆಯಲ್ಲಿ ಸುಮಾರು 1.26 ಲಕ್ಷ ಹೆಕ್ಟೇರ್ 
ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಳ್ಳಬೇಕಾಗಿತ್ತು. ಆದರೆ ಮಳೆಯ ಅಭಾವದಿಂದ ಕೇವಲ 5,650 ಹೆಕ್ಟೇರ್ ಪ್ರದೇಶದಲ್ಲಿ 
ಮಾತ್ರ ಬಿತ್ತನೆ ನಡೆದಿದೆ ಎಂದು ಸಚಿವರು ಮಾಹಿತಿ ನೀಡಿದರು.ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಮಳೆ ಕೊರತೆ ಪ್ರದೇಶಗಳೆಂದು ಪರಿಗಣಿಸಲಾಗಿದ್ದು, ಈ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ಬಳಿಕ ಬರಪೀಡಿತ ಪ್ರದೇಶಗಳೆಂದು ಘೋಷಿಸುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ರೈತರ ಹಿತದೃಷ್ಟಿಯಿಂದ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ ನಾಲ್ಕು ಗಂಟೆ ಹಾಗೂ ರಾತ್ರಿ ಮೂರು ಗಂಟೆ ವಿದ್ಯುತ್ ಪೂರೈಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.ಭಾರತ್ ಜೋಡೋ ಯುವಕರ ಸಂಘಗಳ ರಚನೆಗೆ ಆದ್ಯತೆ ನೀಡುವಂತೆ ಸೂಚಿಸಿದ ಸಚಿವರು, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಒಂದು ಸಂಘ ಸ್ಥಾಪಿಸಿ ಸರ್ಕಾರದಿಂದ ತಲಾ 10 ಲಕ್ಷ ರೂಪಾಯಿ ಅನುದಾನ ನೀಡಲಾಗುವುದು. ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಜನಸ್ನೇಹಿ ಆಡಳಿತ ನೀಡಬೇಕು. ವಿಶೇಷವಾಗಿ ರೈತರನ್ನು ಯಾವುದೇ ಕಾರಣಕ್ಕೂ ಸತಾಯಿಸದೆ ಅವರ ಕೆಲಸಗಳನ್ನು ನಿಯಮಾನುಸಾರ ನಿರ್ವಹಿಸಿಕೊಡಬೇಕು. ರೈತರಿಗೆ ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಅರಣ್ಯ ಇಲಾಖೆಯ ಅಧಿಕಾರಿಗಳು ಅರಣ್ಯ ಭೂಮಿಯ ನೆಪದಲ್ಲಿ ರೈತರಿಗೆ ಅನಗತ್ಯ ತೊಂದರೆ ನೀಡಬಾರದು ಎಂದೂ ತಾಕೀತು ಮಾಡಿದರು.ಜಿಲ್ಲೆಯಲ್ಲಿ ಬರ ಪರಿಹಾರ ಕಾರ್ಯಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿರುವ ಜಿಲ್ಲಾಡಳಿತ ಮತ್ತು ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಸಭೆಯ ಬಳಿಕ ಸಚಿವ ಬಿ.ಎಸ್.ಸುರೇಶ ಅವರು ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಗ್ರಾಮದ ಹೊಲಗಳಿಗೆ ಭೇಟಿ ನೀಡಿ ಮಳೆಯ ಕೊರತೆಯಿಂದ ಒಣಗಿ ಹೋಗಿರುವ ಬೆಳೆಗಳನ್ನು ಪರಿಶೀಲಿಸಿದರು. ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದ ಅವರು, ಅಗತ್ಯ ನೆರವು ಒದಗಿಸುವ ಭರವಸೆ ನೀಡಿದರು.ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎನ್ ಸಂಪಂಗಿ, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಡಾ. ಬಿ.ಸಿ. ಮುದ್ದು ಗಂಗಾಧರ್, ಕರ್ನಾಟಕ ರಾಜ್ಯ ಬೀಜ ನಿಗಮ ಅಧ್ಯಕ್ಷ ಆಂಜಿನಪ್ಪ, ಶಾಸಕರುಗಳಾದ ಎಸ್.ಎನ್.ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ. ಹೆಚ್. ಪುಟ್ಟಸ್ವಾಮಿಗೌಡ, ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್, ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಕ್ಕಳ ಹಕ್ಕುಗಳ ರಕ್ಷಣೆ ಪ್ರಜ್ಞಾವಂತ ನಾಗರಿಕರ ಕರ್ತವ್ಯ: ಜಿ.ಪ್ರಭಾವತಿಚಿಕ್ಕಬಳ್ಳಾಪುರ ಜಿಲ್ಲೆಯ ಬರ ನಿರ್ವಹಣೆಗೆ ಕ್ರಮ-ಸಚಿವ ಸುರೇಶ್ಬರ ವೀಕ್ಷಣೆ ನಡೆಸಿದ ಸಚಿವ ಕೆ.ಹೆಚ್.ಮುನಿಯಪ್ಪಜಾಗತಿಕವಾಗಿ  ಹರಡುತ್ತಿರುವ ಮಾರಕ ಸಾಂಕ್ರಾಮಿಕ-  ಕೆಲಸದ ಸಂಸ್ಕೃತಿಯಿಂದ ಉಂಟಾಗುತ್ತಿರುವ ಮಾನಸಿಕ ಒತ್ತಡಸುಬ್ಬಾರೆಡ್ಡಿಗೆ ಸಿಗದ ಸಚಿವ ಸ್ಥಾನ, ಬಾಗೇಪಲ್ಲಿ ಬಂದ್‌ಗೆ ಜನರ ಅಭೂತಪೂರ್ವ ಬೆಂಬಲಟೀಮ್ ಇಂಡಿಯಾದ ಇಬ್ಬರು ಕೋಚ್‌ಗಳ ನಿರ್ಗಮನ! ವಿಶ್ವಕಪ್‌ಗೂ ಮುನ್ನ ಗೌತಮ್ ಸ್ಥಿತಿ 'ಗಂಭೀರ?ರೋಹಿತ್, ಕೊಹ್ಲಿ ಇಲ್ಲದೆ ಪಾಕಿಸ್ತಾನ ಜೊತೆ ಭಾರತ ಬಿಗ್ ಫೈಟ್! ಹೈವೋಲ್ಟೇಜ್ ಪಂದ್ಯ ಯಾವಾಗ, ಎಲ್ಲಿ ಗೊತ್ತಾ?ನೆಟ್ಟಾರು ಹತ್ಯೆ ಪ್ರಕರಣ ಮತ್ತೋರ್ವ ಆರೋಪಿ ಸೆರೆಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಪ್ರದೋಷ್ ಅರ್ಜಿದಾರಿಯಾವುದಯ್ಯ ಮುಂದೆ!?