LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಸಾಲಮನ್ನಾ ಪರಿಶೀಲನೆ ಕಲಬುರಗಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ

ಕಲಬುರಗಿ: ರಾಜ್ಯದಲ್ಲಿ ಸಾಲ ಮನ್ನಾ ಮಾಡುವ ಸಂಬಂಧ ಪರಿಶೀಲನೆ ನಡೆಸುವುದಾಗಿ ಮುಖ್ಯಮಮತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಇಂದು ಬೆಳಿಗ್ಗೆ ಕಲಬುರಗಿ ಅತಿಥಿ ಗೃಹದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲ ಮನ್ನಾ ಸಂಬಂಧ ಯಾವ ರೀತಿ ಸಾಲಮನ್ನಾ ಮಾಡಬೇಕು. ಹೇಗೆ ಮಾಡಬೇಕು ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಆ ನಂತರ ಇದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ನಿನ್ನೆಯಿಂದ ರಾಜ್ಯದಲ್ಲಿ ಜಿಲ್ಲಾ ಪ್ರವಾಸ ಆರಂಭಿಸಿರುವ ಅವರು, ಮೊದಲಿಗೆ ಬೀದರ್ ಪ್ರವಾಸ ಮುಗಿಸಿ ಇಂದು ಕಲಬುರಗಿಗೆ ಆಗಮಿಸಿರುವ ಅವರು ಇಂದು ಕಲಬುರಗಿ ಜಿಲ್ಲೆಯ ವಿವಿಧ ಇಲಾಖೆಯ ಪ್ರಗತಿಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಹಲವರು ಸಮಸ್ಯೆಗಳನ್ನು ತಿಳಿಸಿದ್ದಾರೆ ಎಂದು ಹೇಳಿರುವ ಅವರು, ಸಮಸ್ಯೆಗಳ ಪರಿಹಾರಕ್ಕೆಂದೇ ರಾಜ್ಯ ಸರ್ಕಾರ ಹೊಸದಾಗಿ ಪ್ರಜಾಸೇವಾ ಇಲಾಖೆಯನ್ನು ಆರಂಭಿಸಿದೆ. ಇಲ್ಲಿ ಇವುಗಳ ಬಗ್ಗೆ ಪರಾಮರ್ಶೆ ನಡೆಸಲಾಗುವುದು. ಬರಪರಿಸ್ಥಿತಿ ಘೋಷಣೆ ಮಾಡಬೇಕು ಎಂದು ಬೇಡಿಕೆಯಿಟ್ಟಿದ್ದಾರೆ. ಹಳ್ಳಿಗಳ ಸಮಸ್ಯೆ ಸಂಬಂಧ ಪರಿಶೀಲಿಸಿ ಅವುಗಳನ್ನು ಪರಿಹಾರ ಮಾಡಲು ಮುಂದಾಗುವುದಾಗಿ ತಿಳಿಸಿದರು. ಯಾವ ಸಮಸ್ಯೆ ಹೇಗೆ ಬಗೆಹರಿಸಬೇಕು ಎಂಬುದನ್ನು ಕಾನೂನಿನ ಚೌಕಟ್ಟಿನಲ್ಲಿಯೇ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಇನ್ನೆರೆಡು ಮೂರು ದಿನಗಳಲ್ಲಿ ತಾವು ಬೆಳಗಾವಿ ಪ್ರವಾಸ ಹಮ್ಮಿಕೊಳ್ಳುವುದಾಗಿ ಹೇಳಿದರು.ಕಲ್ಬುರ್ಗಿಯ ಶರಣ ಬಸವೇಶ್ವರ ಸಂಸ್ಥಾನದ ಹಿಂದಿನ ಪೀಠಾಧಿಪತಿ ಶ್ರೀ ಶರಣ ಬಸವೇಶ್ವರ ಅಪ್ಪ ಗದ್ದುಗೆಗೆ ಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ನಮಿಸಿದರು. ಈಗಿನ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ, ಡಿಸಿಎಂ ಜಿ ಪರಮೇಶ್ವರ, ಸಚಿವರಾದ ಶರಣ್ ಪ್ರಕಾಶ್ ಪಾಟೀಲ್, ಯು ಟಿ ಖಾದರ್, ಪ್ರಿಯಾಂಕ್ ಖರ್ಗೆ ಮತ್ತಿತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು