LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬರ ಪರಿಸ್ಥಿತಿಯನ್ನು ಸಮಗ್ರವಾಗಿ ನಿಭಾಯಿಸಿ: ಸಲ್ಮಾ ಕೆ ಫಾಹಿಂ

ದೇವನಹಳ್ಳಿ: ಜಿಲ್ಲೆಯ ನಾಲ್ಕು ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡಲಾಗಿದ್ದು ಮುಖ್ಯವಾಗಿ ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಅಭಾವವಾಗದಂತೆ ನೋಡಿಕೊಂಡು ಬರ ಪರಿಸ್ಥಿತಿಯನ್ನು ಸಮಗ್ರವಾಗಿ ಎದುರಿಸಿ ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬರ ಪರಿಸ್ಥಿತಿಯ ಬಗ್ಗೆ ಚರ್ಚಿಸಿ ಪ್ರಸಕ್ತ ಸಾಲಿನಲ್ಲಿ ಜನವರಿ 1 ರಿಂದ ಅಕ್ಟೋಬರ್ 26 ರವರೆಗೆ 716 ಮಿ.ಮೀ ವಾಡಿಕೆ ಮಳೆಗೆ 598 ಮಿ.ಮೀ ಮಳೆಯಾಗಿದ್ದು ಶೇಕಡ 17% ರಷ್ಟು ಮಳೆ ಕೊರತೆಯಾಗಿದೆ, ಜಿಲ್ಲೆಯಲ್ಲಿ ರಾಗಿ ಪ್ರಮುಖ ಬೆಳೆಯಾಗಿದ್ದು ತನೆ ಬೆಳವಣಿಗೆ ಹಂತದಲ್ಲಿದೆ.ಮಳೆ ಕೊರತೆಯಿಂದ ಇಳುವರಿ ಕಡಿಮೆಯಾಗಿದೆ ಎಂದರು.

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಆಗದಂತೆ ಕ್ರಮವಹಿಸಿ ಅವಶ್ಯವಿದ್ದಲ್ಲಿ ಖಾಸಗಿಯಾಗಿ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಮಾಡಿಕೊಳ್ಳಿ ಎಂದರು.ಮಾದಕ ವಸ್ತುಗಳ ಮಾರಾಟ ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೆಚ್ಚಿನ ಕ್ರಮ ವಹಿಸಿ, ಮಾಲಿನ್ಯಕಾರಕ ಪಟಾಕಿ ಮಾರಾಟ, ಸಾಗಾಟ ಅಂಗಡಿಗಳ ಮೇಲೆ ದಾಳಿ ನಡೆಸಿ, ಅವರ ವಿರುದ್ಧ ಕ್ರಮ ವಹಿಸಿ ಹಸಿರು ಪಟಾಕಿ ಮಾರಾಟಕ್ಕೆ ಅನುಮತಿ ನೀಡಿ ಎಂದು ಪೋಲಿಸ್ ಅಧಿಕಾರಿಗಳಿಗೆ ಸೂಚಿಸಿದರು.

ಜಾನುವಾರುಗಳಿಗೆ ಆಹಾರ ಮೇವು ಕೊರತೆ ಉಂಟಾಗದಂತೆ ಕ್ರಮವಹಿಸಿ, ಮೇವು ಸಂಗ್ರಹ ಕೇಂದ್ರಗಳನ್ನು ತೆರೆದು ರೈತರಿಗೆ ಮಾಹಿತಿ ನೀಡಬೇಕು. ಅನ್ನ ಭಾಗ್ಯ ಯೋಜನೆ ಅಡಿ 231009 ಫಲಾನುಭವಿಗಳಿದ್ದು ಅದರಲ್ಲಿ 1,91,976 ಫಲಾನುಭವಿಗಳಿಗೆ ಡಿ.ಬಿ.ಟಿ ಮೂಲಕ ನೇರವಾಗಿ 11,05,62,390/- ಕೋಟಿ ರೂಗಳು ಸೆಪ್ಟೆಂಬರ್ ಮಾಹೆಯಲ್ಲಿ ಜಮೆಯಾಗಿದೆ.

ಉಳಿದಂತೆ ವಿವಿಧ ಕಾರಣಗಳಿಂದ ಹಣ ಜಮೆ ಆಗಿರದ ಫಲಾನುಭವಿಗಳಿಗೆ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯಲ್ಲಿ ಇರುವ ಸಮಸ್ಯೆಗಳ ಬಗ್ಗೆ ತಿಳಿಸಿ. ಸಮಸ್ಯೆ ಬಗೆಹರಿಸಿಕೊಂಡು ಮುಂದಿನ ಮಾಹೆಯೊಳಗೆ ಎಲ್ಲಾ ಅರ್ಹ ಫಲಾನುಭವಿಗಳಿಗೆ ಡಿ. ಬಿ. ಟಿ ಮೂಲಕ ಜಮೆಯಾಗಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆ ಅಡಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ 1,96,662 ಫಲಾನುಭವಿಗಳು ನೋಂದಣಿ ಆಗಿರುತ್ತಾರೆ. ಬಾಕಿ ಇರುವ ಫಲಾನುಭವಿಗಳಿಗೆ ಗ್ರಾಮಮಟ್ಟದಲ್ಲಿ ಪ್ರಚಾರ ಮಾಡಿ, ಜಾಗೃತಿ ಮೂಡಿಸಿ,ಮಾಹಿತಿ ನೀಡಿ ನೋಂದಾಯಿಸಿಕೊಳ್ಳಲು ಕ್ರಮವಹಿಸಿ ಎಂದರಲ್ಲದೆ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸುವ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾವಣೆ ಪ್ರಕ್ರಿಯೆಯನ್ನು ಪರಿಶೀಲಿಸಿ ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವಿದ್ಯಾರ್ಥಿನಿಲಯಗಳಿಗೆ ನಿವೇಶನ ಹಂಚಲು ಕ್ರಮ ವಹಿಸಿ ಎಂದು ಹೇಳಿದರು.ಕೃಷಿ, ತೋಟಗಾರಿಕೆ ಇಲಾಖೆಯ ಬೆಳೆಗಳಿಗೆ ಸಂಬಂಧಿಸಿದಂತೆ ಬಿತ್ತನೆ ಬೀಜ, ರಸಗೊಬ್ಬರ, ಔಷಧಿಗಳ ಕೊರತೆಯಾಗದಂತೆ ನೋಡಿಕೊಳ್ಳಿ ಎಂದರಲ್ಲದೆ ರೈತರಿಗೆ ಸೂಕ್ತ ಮಾರ್ಗದರ್ಶನ, ಸಲಹೆ ನೀಡಿ ಎಂದರು.

ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಕೆಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿಎಂದರು.ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಪ್ರಗತಿ ಪರಿಶೀಲನೆ ನಡೆಸಿ ಬಾಕಿ ಇರುವ ರಸ್ತೆ, ಸೇತುವೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದರು. ನರೇಗಾ ಯೋಜನೆಯಡಿ ಇಲಾಖೆಗಳಲ್ಲಿ ಬಾಕಿ ಇರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ.

ಶೇಕಡಾವಾರು ಪ್ರಗತಿ ಕಡಿಮೆ ಸಾಧಿಸಿರುವ ಇಲಾಖೆಗಳಿಗೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಿ ವರದಿ ನೀಡಿ ಎಂದರು.
2024-25 ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಉದ್ಯೋಗ ಖಾತರಿ ನಡೆ ಸುಸ್ಥಿರ ತೆಯಡೆಗೆ ಎಂಬ ಕ್ರಿಯಾ ಯೋಜನೆ ತಯಾರಿಸಲು ಗ್ರಾಮ ಪಂಚಾಯಿತಿಗಳಿಗೆ ಐಇಸಿ ಕಾರ್ಯಕ್ರಮದ ನರೇಗಾ ಭಿತ್ತಿಪತ್ರಗಳ ಬಿಡುಗಡೆಗೊಳಿಸಿದರು.
ನಂತರ ದೇವನಹಳ್ಳಿ ತಾಲ್ಲೂಕು ಸರ್ಕಾರಿ ಆಸ್ಪತ್ರೆ ಭೇಟಿ ನೀಡಿ ಔಷಧಿಗಳ ಕೊಠಡಿಯಲ್ಲಿ ಔಷಧಿಗಳು ಪರಿಶೀಲಿಸಿದರು, ಮಹಿಳಾ ಮತ್ತು ಮಕ್ಕಳ ಕೊಠಡಿಯನ್ನು ಪರಿಶೀಲಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ರಮೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು