ನವದೆಹಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ನಿಧನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ರತಿಕ್ರಿಯಿಸಿದ್ದು, ಈ ಹಿಂದೆ ಭಾರತ-ಬಾಂಗ್ಲಾದೇಶ ಸಂಬAಧಗಳಿಗೆ ಅವರು ನೀಡಿದ ಕೊಡುಗೆಗಳನ್ನು ನೆನಪಿಸಿಕೊಂಡಿದ್ದಾರೆ.
ಬಾAಗ್ಲಾದೇಶ ನ್ಯಾಷನಲ್ ಪಾರ್ಟಿ (ಬಿಎನ್ಪಿ) ನಾಯಕಿಯ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಎಂದು ಹೇಳಿದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ``ಢಾಕಾದಲ್ಲಿ ಮಾಜಿ ಪ್ರಧಾನಿ ಮತ್ತು ಬಿಎನ್ಪಿ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಅವರ ಕುಟುಂಬಕ್ಕೆ ಮತ್ತು ಬಾಂಗ್ಲಾದೇಶದ ಎಲ್ಲ ಜನತೆಗೆ ನಮ್ಮ ಪ್ರಾಮಾಣಿಕ ಸಂತಾಪಗಳು. ಈ ದುರಂತ ನಷ್ಟವನ್ನು ಭರಿಸುವ ಧೈರ್ಯವನ್ನು ದೇವರು ಆಕೆಯ ಕುಟುಂಬಕ್ಕೆ ನೀಡಲಿ.'' ಎಂದು ಹೇಳಿದ್ದಾರೆ.
ಭಾರತ-ಬಾಂಗ್ಲಾದೇಶ ರಾಜತಾಂತ್ರಿಕ ಸಂಬAಧಗಳನ್ನು ಬೆಳೆಸುವಲ್ಲಿ ಖಲೀದಾ ಜಿಯಾ ಅವರ ಪಾತ್ರವನ್ನು ಅವರು ಒಪ್ಪಿಕೊಂಡರು ಮತ್ತು ಅವರ ``ಪ್ರಮುಖ ಕೊಡುಗೆಗಳು'' ಯಾವಾಗಲೂ ನೆನಪಿನಲ್ಲಿ ಉಳಿಯುತ್ತವೆ ಎಂದು ಹೇಳಿದರು.
ಭಾರತದ ಪ್ರಧಾನಿಯಾದ ಒಂದು ವರ್ಷದ ನಂತರ ೨೦೧೫ ರಲ್ಲಿ ಬಾಂಗ್ಲಾದೇಶದ ನಾಯಕಿಯನ್ನು ಭೇಟಿಯಾದದ್ದನ್ನು ಪ್ರಧಾನಿ ಮೋದಿ ನೆನಪಿಸಿಕೊಂಡರು. ``ಅವರ ದೃಷ್ಟಿ ಮತ್ತು ಪರಂಪರೆಯು ನಮ್ಮ ಪಾಲುದಾರಿಕೆಗೆ ಮಾರ್ಗದರ್ಶನ ನೀಡುವುದನ್ನು ಮುಂದುವರಿಸುತ್ತದೆ ಎಂದು ನಾವು ಭಾವಿಸುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ'' ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.