LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಶಾಸಕಿ ರೂಪಕಲಾ ರವರಿಗೆ ಅಭಿನಂದನೆ

ಬೇತಮಂಗಲ: ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯಮಂಗಲ ಗ್ರಾಮದಿಂದ ತಂಬಾರ್ಲಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಂದಾಜು ೮೦ ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಶಾಸಕಿ ರೂಪಕಲಾ ಅವರು ಡಾಂಬರೀಕರಣ ರಸ್ತೆ ಮಾಡುವ ಮೂಲಕ ದಶಕಗಳ ಬೇಡಿಕೆಯನ್ನು ಶಾಸಕರು ಈಡೇರಿಸಿದ್ದಾರೆ ಎಂದು ತಂಬಾರ್ಲಹಳ್ಳಿ ಗ್ರಾಮದ ಮುಖಂಡ ಮುನೇಗೌಡ ತಿಳಿಸಿದರು.
ಪಟ್ಟಣದ ಸಮೀಪದ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯಮಂಗಲ ಗ್ರಾಮದಿಂದ ತಂಬಾರ್ಲಹಳ್ಳಿ ಗ್ರಾಮದ ರಸ್ತೆಯು ಗುಂಡಿ ಬಿದ್ದು ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿದ್ದ ಈ ರಸ್ತೆಯಿಂದ ಗ್ರಾಮಸ್ಥರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದರು.
ಜನರ ಮನವಿಗೆ ಸ್ಪಂದಿಸಿದ ಶಾಸಕರು, ವಿಶೇಷ ಅನುದಾನದಡಿ ಈ ರಸ್ತೆ ಕಾಮಗಾರಿಯನ್ನು ಮಂಜೂರು ಮಾಡಿಸಿದ್ದಾರೆ. ಪ್ರಸ್ತುತ ಕಾಮಗಾರಿ ಭರದಿಂದ ಸಾಗುತ್ತಿದ್ದು, ಇದರಿಂದ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಜನರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ.
ಜಿಲ್ಲೆಯಲ್ಲೇ ಕೆಜಿಎಫ್ ತಾಲೂಕು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಇದಕ್ಕೆ ಶಾಸಕರ ಇಚ್ಛಾಶಕ್ತಿ ಮತ್ತು ಮೂಲಸೌಕರ್ಯಗಳ ಭರವಸೆ ಈಡೇರಿಸುವ ನಿಟ್ಟಿನಲ್ಲಿ ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆಗೊಳಿಸಿ ಕೈಗೊಳ್ಳಲಾಗಿದೆ ಎಂದರು.
ಜಯಮAಗಲ ಬಳಿ ಮಳೆಗಾಲದಲ್ಲಿ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು ಆದರೆ ಶಾಸಕರು ಸೇತುವೆ ನಿರ್ಮಾಣ ಮಾಡಿ ಬಹು ನಿರೀಕ್ಷಿತ ಕಾಮಗಾರಿಯನ್ನು ಪೂರ್ಣಗೊಳಿಸಿದ್ದಾರೆ ಎಂದರು.
ಗ್ರಾಮಸ್ಥರ ಹರ್ಷ: ತಮ್ಮ ಗ್ರಾಮಕ್ಕೆ ಸುಸಜ್ಜಿತ ರಸ್ತೆ ಒದಗಿಸಿಕೊಟ್ಟ ಶಾಸಕಿ ರೂಪಕಲಾ ಅವರ ಜನಪರ ಕೆಲಸಕ್ಕೆ ತಂಬಾರ್ಲಹಳ್ಳಿ ಹಾಗೂ ಜಯಮಂಗಲ ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ಗ್ರಾಮದ ಪರವಾಗಿ ಶಾಸಕರಿಗೆ ಆತ್ಮೀಯವಾಗಿ ಧನ್ಯವಾದಗಳನ್ನು ಅರ್ಪಿಸಲಾಗಿದೆ.
ದಿನನಿತ್ಯದ ಓಡಾಟಕ್ಕೆ ರಸ್ತೆ ತುಂಬಾ ಕಷ್ಟವಾಗಿತ್ತು. ಶಾಸಕರು ನಮ್ಮ ನೋವಿಗೆ ಸ್ಪಂದಿಸಿ ೮೦ ಲಕ್ಷ ವೆಚ್ಚದಲ್ಲಿ ರಸ್ತೆ ಮಾಡಿಸಿಕೊಡುತ್ತಿರುವುದು ಸಂತಸ ತಂದಿದೆ ಎಂದು ತಂಬಾರ್ಲಹಳ್ಳಿ ಗ್ರಾಮಸ್ಥರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಗುತ್ತಿಗೆದಾರ ನಾರಾಯಣ ಸ್ವಾಮಿ, ಮುಖಂಡರಾದ ಮುನೇಗೌಡ, ನಂಜುAಡ ಗೌಡ, ರಮೇಶಪ್ಪ, ವೆಂಕಟರಾಮಪ್ಪ, ಜಯಮಂಗಲ ಮಣಿ, ರಾಮಚಂದ್ರ ಸೇರಿದಂತೆ ಸ್ಥಳೀಯ ಹಾಗೂ ಗ್ರಾಮಸ್ಥರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು