LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಸಿಎಸ್‍ಕೆ ಮೊದಲ ಸೋಲಿನ ರುಚಿ ತೋರಿಸಿದ ಡೆಲ್ಲಿ ಕ್ಯಾಪಿಟಲ್ಸ್

ವಿಶಾಖಪಟ್ಟಣಂ: ಅಂತೂ ಇಂತೂ ಐಪಿಎಲ್ 2024 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿನ ಖಾತೆ ತೆರೆದಿದೆ. ಚೆನ್ನೈ ಸೂಪರ್ ಕಿಂಗ್ಸ್ ಗೆ 20 ರನ್ ಗಳ ಸೋಲುಣಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿತು.

ಡೆಲ್ಲಿ ಪರ ಆರಂಭಿಕರಿಬ್ಬರೂ ಅಬ್ಬರದ ಆಟವಾಡಿದರು. ಪೃಥ್ವಿ ಶಾ 43, ಡೇವಿಡ್ ವಾರ್ನರ್ 52 ರನ್ ಸಿಡಿಸಿದರು. ಬಳಿಕ ಬಂದ ನಾಯಕ ರಿಷಬ್ ಪಂತ್ 51 ರನ್ ಗಳಿಸಿ ಮಿಂಚಿದರು. ಹಲವು ದಿನಗಳ ನಂತರ ಅಭಿಮಾನಿಗಳಿಗೆ ರಿಷಬ್ ಬ್ಯಾಟಿಂಗ್ ಝಲಕ್ ನೋಡಲು ಸಿಕ್ಕಿತು.ಈ ಮೊತ್ತ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಲಷ್ಟೇ ಶಕ್ತವಾಯಿತು.

ಆರಂಭಿಕ ರಚಿನ್ ರವೀಂದ್ರ 2, ನಾಯಕ ಋತುರಾಜ್ ಗಾಯಕ್ ವಾಡ್ 1 ರನ್ ಗಳಿಸಿ ಔಟಾದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಅಜಿಂಕ್ಯಾ ರೆಹಾನೆ 45, ಡೇರಿಲ್ ಮಿಚೆಲ್ 34 ರನ್ ಗಳಿಸಿ ಚೇತರಿಕೆ ನೀಡಿದರು.ಆದರೆ ನಿನ್ನೆಯ ಪಂದ್ಯದ ಹೈಲೈಟ್ ಧೋನಿ ಅಬ್ಬರದ ಬ್ಯಾಟಿಂಗ್. ಈ ಐಪಿಎಲ್ ನಲ್ಲಿ ಇದೇ ಮೊದಲ ಬಾರಿಗೆ ಧೋನಿ ಬ್ಯಾಟಿಂಗ್ ಗೆ ಬಂದಿದ್ದರು.

ಕೇವಲ 16 ಎಸೆತಗಳಲ್ಲಿ 3 ಸಿಕ್ಸರ್ ಸಹಿತ ಅಜೇಯ 37 ರನ್ ಸಿಡಿಸಿ ಧೋನಿ ಪ್ರೇಕ್ಷಕರನ್ನು ರಂಜಿಸಿದರು. ಅವರಿಗೆ ಸಾಥ್ ನೀಡಿದ ರವೀಂದ್ರ ಜಡೇಜಾ 21 ರನ್ ಗಳಿಸಿದರು. ಆದರೆ ಇವರಿಬ್ಬರಿಗೂ ತಂಡಕ್ಕೆ ಗೆಲುವು ಕೊಡಿಸಲಾಗಲಿಲ್ಲ. ಡೆಲ್ಲಿ ಪರ ಮುಕೇಶ್ ಕುಮಾರ್ 3, ಖಲೀಲ್ ಅಹಮ್ಮದ್ 2 ವಿಕೆಟ್ ಕಬಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು