LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ದಿ ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥಾಪನಾ ದಿನದ ಅಂಗವಾಗಿ ಸೈಕಲ್ ಜಾಥಾ

ಕೆ.ಆರ್.ಪುರ: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ಮಕ್ಕಳು ಭಾಗವಹಿಸುವುದರಿಂದ ಶಿಸ್ತು, ಸಂಯಮ, ದೇಶಭಕ್ತಿ ವೃದ್ಧಿಯಾಗಲಿದೆ ಎಂದು ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನ ಕಾರ್ಯದರ್ಶಿ ರವಿಕುಮಾರ್ ಹೇಳಿದರು.

ಕೆ.ಆರ್.ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನ 73 ನೇ ಸಂಸ್ಥಾಪನಾ ದಿನ ಹಾಗೂ ಧ್ವಜ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಸೈಕಲ್ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದರು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಸುಮಾರು ವರ್ಷಗಳ ಇತಿಹಾಸವಿದ್ದು, ಈ ಸಂಸ್ಥೆಯು ವಿಶ್ವದಾದ್ಯಂತ ಶಾಖೆಗಳನ್ನು ಹೊಂದಿದೆ.

ಪರಿಸರ ಸಂರಕ್ಷಣೆ ಸೇರಿದಂತೆ ಹಲವು ಸಮಾಜಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇತ್ತೀಚೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿಶೇಷವಾಗಿ ಮಕ್ಕಳಿಗೆ ಶಿಸ್ತು, ಸಂಯಮ, ದೇಶಭಕ್ತಿ, ಉದಾರ ಮನೋಭಾವ ಗಳನ್ನು ಬೆಳೆಸುವಲ್ಲಿ ಕಾರ್ಯಪ್ರವೃತ್ತವಾಗಿದೆ ಎಂದರು.

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿರುವುದರಿಂದ ಮಕ್ಕಳು ಹೆಚ್ಚು ಭಾಗವಹಿಸು ವಂತಾಗಬೇಕು. ಪ್ರತಿ ಶಾಲಾ ಕಾಲೇಜು ಮಟ್ಟ ದಲ್ಲಿಯೇ ಸ್ಕೌಟ್ಸ್ ಮತ್ತು ಗೈಡ್ಸ್ ಸಕ್ರಿಯವಾಗಿ ಭಾಗವಹಿಸುವಲ್ಲಿ ಗಮನಹರಿಸುವುದು ಉತ್ತಮ. ಮಕ್ಕಳು ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿಗೆ ಭಾಜನರಾಗುವಂತೆ ಸಲಹೆ ನೀಡಿದರು.

ಸಮಾಜ ಸೇವಕ, ಮುಖಂಡ ಮಂಜುರಾಜ್ ಮಾತನಾಡಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ದೇಶದಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ದೇಶದ ಭವಿಷ್ಯ ನಿರ್ಮಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಸಹಕಾರಿಯಾಗಿದೆ ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್ನ ಸಂಸ್ಥಾಪನಾ ದಿನಾಚರಣೆ ಹಾಗೂ ಧ್ವಜ ದಿನದ ಅಂಗವಾಗಿ ಕೆ.ಆರ್.ಪುರದ ಪ್ರಥಮ ದರ್ಜೆ ಕಾಲೇಜು ಆವರಣದಿಂದ ಐಟಿಐ ಸೇತುವೆವರೆಗೂ ಸೈಕಲ್ ಜಾಥ ಹಮ್ಮಿಕೊಳ್ಳಲಾಗಿತ್ತು. ನೂರೈವತ್ತಕ್ಕೂ ಹೆಚ್ಚು ಮಕ್ಕಳು ಸೈಕಲ್ ಜಾಥದಲ್ಲಿ ಪಾಲ್ಗೊಂಡಿದ್ದರು.

ದಿ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಉಪ ಆಯುಕ್ತರಾದ ಡಾ.ಮನಸಾ ಹೆಬ್ಬಾರ್, ಬಿಇಒ ರಾಮಮೂರ್ತಿ, ಕೆ.ಆರ್.ಪುರ ಕಾಲೇಜು ಪ್ರಾಂಶುಪಾಲರಾದ ಪ್ರತಿಭಾ ಪಾರ್ಶ್ವನಾಥ, ಧೀರಜ್,ರಾಜೇಶ್ವರಿ, ಉದಯ್, ಪವನ್ ಕುಮಾರ್, ವೇಣುಗೋಪಾಲ್, ಹಂಸರಾಜ್ ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು