LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಗೊಂದಲ ಸೃಷ್ಟಿ ಯತ್ನ ಬಿಜೆಪಿ ವಿರುದ್ಧ ಡಿಸಿಎಂ ಶಿವಕುಮಾರ್ ವಾಗ್ದಾಳಿ

ದೆಹಲಿ: ನಮ್ಮ ಪಕ್ಷದಲ್ಲಿ ಅನಗತ್ಯವಾಗಿ ಗೊಂದಲ ಸೃಷ್ಟಿ ಎಬ್ಬಿಸಲು ಬಿಜೆಪಿಯವರು ಯತ್ನ ನಡೆಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮ ಪಕ್ಷದ ನಾಯಕರು ಯಾರನ್ನು ಬಿಜೆಪಿಯವರು ಅವರ ಪಕ್ಷಕ್ಕೆ ಸೇರಿಸಿಕೊಳ್ಳಲು ಸಾಧ್ಯವಿಲ್ಲ.

ಅವರ ಪಕ್ಷದ ನಾಯಕನನ್ನೇಅವರು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ನಮ್ಮ ಪಕ್ಷದ ಶಾಸಕರ್ಯಾರು ಬಿಜೆಪಿಗೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಬಿಜೆಪಿ ಅನಗತ್ಯವಾಗಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ತಿಂಗಳ 15ರೊಳಗಾಗಿ ರಾಜ್ಯದ ವಿವಿಧ ನಿಗಮ ಮಂಡಳಿಯೊಳಗೆ ಅಧ್ಯಕ್ಷರ ನೇಮಕಾತಿ ನಡೆಯಲಿದೆ ಎಂದು ತಿಳಿಸಿರುವ ಶಿವಕುಮಾರ್ ಈಗಾಗಲೇ ಈ ಸಂಬಂಧ ಒಂದು ಸುತ್ತಿನ ಮಾತುಕತೆ ನಡೆದಿದೆ. ಪಕ್ಷದ ವರಿಷ್ಠರು ಬೆಂಗಳೂರಿಗೆ ಬಂದು ನಿಗಮಮಂಡಳಿ ನೇಮಕಾತಿಗೆ ಸಂಬಂಧಪಟ್ಟಂತೆ ಅಂತಿಮ ಪಟ್ಟಿ ಸಿದ್ಧತೆಗೊಳಿಸಲಿದ್ದಾರೆ ಎಂದರು.

ಲೋಕೋಪಯೋಗಿ ಸಚಿವ ಹಾಗೂ ಪಕ್ಷದ ಕಾರ್ಯಾಧ್ಯಕ್ಷರಾಗಿರುವ ಸತೀಶ್ ಜಾರಕಿಹೊಳಿ ಅವರೊಂದಿಗೆ ಅವರ ನಿವಾಸದಲ್ಲಿ ನಡೆದ ಮಾತುಕತೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿ, ನಾನು ಪಕ್ಷದ ಅಧ್ಯಕ್ಷನಾಗಿ ಅವರೊಂದಿಗೆ ಮಾತನಾಡಿದ್ದೇನೆ. ಬಹುತೇಕ ನಾಯಕರ ನಿವಾಸಕ್ಕೆ ತೆರಳಿ ಸಮಾಲೋಚನೆ ನಡೆಸಿದ್ದೇನೆ.

ಅದೇರೀತಿಯಾಗಿ ಸತೀಶ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದೇನೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನಮ್ಮ ನಿವಾಸದಲ್ಲಿ ಸಭೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ.
ಬಿಜೆಪಿ-ಜೆಡಿಎಸ್ ಕೆಲ ನಾಯಕರು ನಮ್ಮ ಸಂಪರ್ಕದಲ್ಲಿದ್ದು, 15ರಂದು ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು