LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಸಾಲಭಾದೆ: ರೈತ ಆತ್ಮಹತ್ಯೆ

ಗೌರಿಬಿದನೂರು: ಬೆಳೆ ವೈಫಲ್ಯದಿಂದ ನೊಂದ ರೈತನೊಬ್ಬ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ತೊಂಡೇಬಾವಿ ಹೋಬಳಿಯ ಕುಂಟಚಿಕ್ಕನಹಳ್ಳಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ.

ಆತ್ಮಹತ್ಯೆಗೆ ಶರಣಾದ ರೈತನನ್ನು ತಿಮ್ಮಯ್ಯ (56) ಎಂದು ಗುರುತಿಸಲಾಗಿದೆ. ತಿಮ್ಮಯ್ಯನಿಗೆ ಇಬ್ಬರು ಗಂಡು ಮಕ್ಕಳಿದ್ದು, ಇಬ್ಬರೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ತನ್ನ ಜಮೀನಿನಲ್ಲಿ ಕೊರೆಸಿದ್ದ ಕೊಳವೆ ಬಾವಿಯಲ್ಲಿ ಜಮೀನಿಗೆ ಸಾಕಾಗುವಷ್ಟು ನೀರು ಸಿಕ್ಕಿತ್ತು. ಈ ವರ್ಷ ಬಾಳೆ, ಟಮೋಟೋ, ಹೂವಿನ ಬೆಳೆಯನ್ನು ಬೆಳೆದಿದ್ದರು. ಟಮೋಟೋಗೆ ರೋಗ ತಾಕಿ ನಷ್ಟವುಂಟಾದರೆ, ಹೂವಿಗೆ ಉತ್ತಮ ಬೆಲೆ ದೊರೆಯದೆ ನಷ್ಟಕ್ಕೆ ಗುರಿಯಾದರು.

ಬೆಳೆಯಿಡಲು ಬ್ಯಾಂಕ್, ಧರ್ಮಸ್ಥಳದ ಸಂಘ ಮತ್ತು ಸ್ತ್ರೀಶಕ್ತಿ ಸಂಘದಿಂದ ಸಾಲ ಪಡೆದಿದ್ದರು. ಅದರ ಬಡ್ಡಿ ವಿಷವೇರಿದಂತೆ ಬೆಳೆಯುತ್ತಿತ್ತು. ಒಂದು ಕಡೆಯ ಬೆಳೆಯ ವೈಫಲ್ಯ ಬೆಲೆಯ ಕುಸಿತ, ಮತ್ತೊಂದು ಕಡೆದ ಸಾಲದ ಬಡ್ಡಿಯ ಹೆಚ್ಚಳ. ಇದರಿಂದ ಧೃತಿಗೆಟ್ಟ ತಿಮ್ಮಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಭಾನುವಾರ ಬೆಳಗ್ಗೆ ತನ್ನ ಜಮೀನಿಗೆ ಹೋದ ತಿಮ್ಮಯ್ಯ ಊಟದ ಸಮಯವಾದರೂ ಮನೆಗೆ ಮರಳಲಿಲ್ಲ. ಇದರಿಂದ ಅನುಮಾನಗೊಂಡ ಅವರ ಪತ್ನಿ, ಜಮೀನಿಗೆ ಬಂದಾಗ ತಿಮ್ಮಯ್ಯ ವಿಷ ಸೇವಿಸಿ ನರಳುತ್ತಿದ್ದದ್ದು ಕಂಡು ನೆರೆಹೊರೆಯವರ ಸಹಾಯದಿಂದ ನಗರದ ಆಸ್ಪತ್ರೆಗೆ ಕರೆತಂದರು. ಇಲ್ಲಿ ಪ್ರಥಮ ಚಿಕಿತ್ಸೆ ನೀಡಿ ದೊಡ್ಡ ಆಸ್ಪತ್ರೆಗೆ ಕರೆದುಕೊಂಡು ಹೋಗಲು ವೈದ್ಯರು ಸೂಚಿಸಿದಾಗ ಚಿಕ್ಕಬಳ್ಳಾಪುರಕ್ಕೆ ಕರೆದುಕೊಂಡು ಹೋದರಾದರೂ ಅಲ್ಲಿನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು