LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

`ಒಡೆಯರ ಆಡಳಿತ ವಿಕೇಂದ್ರೀಕರಣ ಅನನ್ಯ'

ಕೋಲಾರ : ದಿ ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯಕ್ಕೆ ನೀಡಿದ ಅಮೂಲ್ಯ ಕೊಡುಗೆ ಅನನ್ಯ ಎಂದು ಕವಿ ಡಾ. ಶರಣಪ್ಪ ಗಬ್ಬೂರು ಅಭಿಪ್ರಾಯಪಟ್ಟರು.ಅವರು ನಗರದ ರಡ್ಡಿ ಕಂಪ್ಯೂಟರ್ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಸ್ವರ್ಣಭೂಮಿ ಫೌಂಡೇಶನ್ ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತಾನಾಡಿದರು.

ಕಲೆ, ಸಾಹಿತ್ಯ, ಶಿಕ್ಷಣ, ಕೈಗಾರಿಕೆ ಇನ್ನೂ ಅನೇಕ ಆಡಳಿತ ವಿಕೇಂದ್ರೀಕರಣಕ್ಕೆ ಅನುವು ಮಾಡಿ ಕೊಟ್ಟಿದ್ದು ಒಡೆಯರ್. ರಾಜ್ಯದ ಸಣ್ಣ ಸಣ್ಣ ಪಟ್ಟಣಗಳಲ್ಲಿಯೂ ಸಹ ಮುನಿಸಿಪಾಲಿಟಿಗಳು ರಚನೆಯಾದವು. ಹಳ್ಳಿಗಳಲ್ಲಿ ಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿಗಳು ಕಾರ್ಯ ನಿರ್ವಹಿಸಲು ಆರಂಭ ಮಾಡಿದುದರಿಂದ, ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದಲ್ಲಿ ಜನರ ಭಾಗವಹಿಸುವಿಕೆಗೆ ಅಪಾರ ಉತ್ತೇಜನ ನೀಡಲಾಯಿತು ಎಂದರು.

ಅಧ್ಯಕ್ಷ ಬಿ ಶಿವುಕುಮಾರ್ ಮಾತಾನಾಡಿ ಇವರ ಕಾಲದಲ್ಲಿ ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ರೂಪಿಸಿದ ನಾಲ್ವಡಿಯವರನ್ನ ವಿದ್ವಾಂಸರು, ಶಿಕ್ಷಣ ತಜ್ಣರು, ಇತಿಹಾಸಕಾರರು ’ ಸಾಮಾಜಿಕ ಕಾನೂನುಗಳ ಹರಿಕಾರ’ ಎಂದು ಕರೆದಿದ್ದಾರೆ. ಸಾಹಿತ್ಯ, ಸಂಗೀತ, ವಾಸ್ತು ಶಿಲ್ಪಗಳ ಅಭಿವೃದ್ಧಿಗೆ ಪ್ರಾಮುಖ್ಯತೆಯನ್ನು ಕೊಟ್ಟು 1915 ರಲ್ಲಿ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಪ್ರಾರಂಭಿಸಿದರು ಎಂದರು.

ಇಂಚರ ಸಂಸ್ಥೆಯ ಅಧ್ಯಕ್ಷ ಇಂಚರ ನಾರಾಯಣಸ್ವಾಮಿ ಮಾತಾನಾಡಿ ಮೈಸೂರಿನಲ್ಲಿ ದಾಖಲೆಗಳನ್ನು ನಿರ್ಮಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಅವರ ಕಾಲದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ 270 ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದ್ದರು ಎಂದರು.ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪೋಸ್ಟ್ ನಾರಾಯಣಸ್ವಾಮಿ ಮಾತಾನಾಡಿ ಒಡೆಯರ್ ಬುಡಕಟ್ಟು, ಗಿರಿಜನ, ಅರಣ್ಯವಾಸಿಗಳಿಗೆ ಮೊಟ್ಟ ಮೊದಲು ಶಾಲೆಗಳನ್ನು ತೆರೆಯಲಾಯಿತು.

ಅಸ್ಪೃಶ್ಯರಿಗಾಗಿಯೇ ಹುಸ್ಕೂರು ಹಾಗೂ ಟಿ.ನರಸೀಪುರದಲ್ಲಿ ಶಾಲೆಗಳನ್ನು ಪ್ರಾರಂಭಿಸಲಾಯಿತು. ನಂತರ ಇವರ ಆಡಳಿತಾವಧಿಯಲ್ಲಿ ಸುಮಾರು 800 ಶಾಲೆಗಳನ್ನು ತೆರೆಯಲಾಯಿತು ಎಂದರು.ಕಾರ್ಯಕ್ರಮದಲ್ಲಿ ಕವಿ ಮಕ್ ತಾಳಿಕೋಟೆ, ದಿವಾಕರ್, ರಮೇಶ್, ಲಿಖಿತ್ ಕುಮಾರ್, ಹೇಮಂತ್ವಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು