LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಕೋಲಾರ ಸರ್ಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಒತ್ತಾಯ

ಕೋಲಾರ: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳನ್ನು ಗೋಡೆ ಮತ್ತು ಕಲ್ಲುಗಳ ತೆರವಿಗೆ ಬಳಸಿಕೊಂಡ ಪ್ರಕರಣವನ್ನು ಕೋಲಾರ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹಾಗೂ ಕೋಲಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಪ್ರಕರಣ ಮುಚ್ಚಿ ಹಾಕುವ ಉನ್ನಾರ ನಡೆಯುತಿದೆ ಎಂದು ಶಿಕ್ಷಣ ಇಲಾಖೆಯ ಆಯುಕ್ತರದ ಬಿ.ಬಿ. ಕಾವೇರಿ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರಿತೇಶ್ ಕುಮಾರ್ ಸಿಂಗ್ರವರಿಗೆ ರೈತ ಸಂಘದ ಮುಖಂಡ ರಾದ ಪ್ರೊ. ನಂಜುಂಡಸ್ವಾಮಿ ಸ್ಥಾಪಿತ
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಯುವ ಘಟಕದ ಅಧ್ಯಕ್ಷ ಕಲ್ವಮಂಜಲಿ ರಾಮುಶಿವಣ್ಣ, ಕೋಲಾರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ ನಾರಾಯಣಸ್ವಾಮಿ ದೂರು ನೀಡಿದರು.

ಕೋಲಾರ ನಗರದ ಸರ್ಕಾರಿಪ್ರೌಢಶಾಲಾ ಉಪ ಪ್ರಾಂಶುಪಾಲರಾದ ಬಿ.ಎಂ.ರಾಧಮ್ಮ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಂದ ಪರೀಕ್ಷೆ ಸಮಯದಲ್ಲಿ ಸತತವಾಗಿ ಮೂರು ದಿನ ದೊಡ್ಡ ದೊಡ್ಡ ಕಲ್ಲು ಹೊಡೆಯುವ ಸುತಿಗೆಗಳಿಂದ ಕಲ್ಲು ಹೊಡೆಯುವ ಕೆಲಸಕ್ಕೆ, ಚಪ್ಪಡಿಗಳನ್ನು ಗಡಾರಿಯಿಂದ ಪಕ್ಕಕ್ಕೆ ಸರಿಸುವ ಕೆಲಸಕ್ಕೆ, ಗೋಡೆಗಳನ್ನು ಒಡೆಯುವ ಕೆಲಸಕ್ಕೆ ವಿದ್ಯಾರ್ಥಿಗಳನ್ನು ಕೆಲಸಕ್ಕೆ ಬಳಸಿಕೊಂಡಿರುವ ಪ್ರಕರಣವನ್ನು ಕೋಲಾರ ಜಿಲ್ಲಾ ಉಪ ನಿರ್ದೇಶಕರು ಹಾಗೂ ಕೋಲಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕಾಣದ ಕೈಗಳು ಪ್ರಕರಣ ಮುಚ್ಚಿ ಹಾಕುವ ಉನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ಶಿಕ್ಷಣ ಇಲಾಖೆಯ ಆಯುಕ್ತರಾದ ಬಿ.ಬಿ ಕಾವೇರಿ ರವರಿಗೆ ಮತ್ತು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರಿತೇಶ್ ಕುಮಾರ್ ಸಿಂಗ್ ರವರಿಗೆ ಗುರುವಾರ ಬೆಂಗಳೂರಿನಲ್ಲಿ ದೂರು ಸಲ್ಲಿಸಿ ಉಪ ಪ್ರಾಂಶುಪಾಲರಾದ ರಾಧಮ್ಮ ರವರನ್ನು ಸೇವೆಯಿಂದ ವಜಾ ಗೊಳಿಸಬೇಕೆಂದು ಒತ್ತಾಯಿಸಿದರು.
ದೂರು ಸಲ್ಲಿಸಿ ಆ ವಿಡಿಯೋ ಮತ್ತು ಫೋಟೋಗಳಲ್ಲಿ ಇರುವ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಮಕ್ಕಳು ಸಹ ಇದ್ದಾರೆ ಎಂಬುದು ದೃಢಪಡಿಸಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು