LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸುಂದರ ತಾಣದಲ್ಲಿ ಚಿತ್ರೀಕರಣವಾಯಿತು "ದೇಸಾಯಿ" ಚಿತ್ರದ ಸುಂದರ ಗೀತೆ

ಶ್ರೀವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳಚಗುಡ್ಡ ಕಥೆ ಬರೆದು ನಿರ್ಮಿಸುತ್ತಿರುವ, ನಾಗಿರೆಡ್ಡಿ ಭಡ ರಚನೆ & ನಿರ್ದೇಶನದ ಹಾಗೂ "ಲವ್ 360" ಖ್ಯಾತಿಯ ಪ್ರವೀಣ್ ಕುಮಾರ್ ನಾಯಕನಾಗಿ ನಟಿಸುತ್ತಿರುವ "ದೇಸಾಯಿ" ಚಿತ್ರದ ಹಾಡೊಂದರ ಚಿತ್ರೀಕರಣ ಬೆಂಗಳೂರು ನಗರದ ಹೊರವಲಯದ ಡೆಸ್ಟಿನೊ ರೆಸಾರ್ಟ್ ನ ಸುಂದರ ಪರಿಸರದಲ್ಲಿ ನಡೆಯಿತು.

ಶಿವು ಬೇರ್ಗಿ ಅವರು ಬರೆದಿರುವ, ಸಾಯಿಕಾರ್ತಿಕ್ ಸಂಗೀತ ನೀಡಿರುವ ಈ ಹಾಡಿಗೆ ಮೋಹನ್ ಮಾಸ್ಟರ್ ನೃತ್ಯ ನಿರ್ದೇಶನದಲ್ಲಿ ನಾಯಕ ಪ್ರವೀಣ್ ಕುಮಾರ್ ಹಾಗೂ ನಾಯಕಿ ರಾಧ್ಯ ಹೆಜ್ಜೆ ಹಾಕಿದರು. ಹಾಡು ಹಾಗೂ ಚಿತ್ರದ ಬಗ್ಗೆ ಚಿತ್ರತಂಡದ ಸದಸ್ಯರು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದರು.

"ದೇಸಾಯಿ" ಒಂದು ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ ಎಂದು ಮಾತನಾಡಿದ ನಿರ್ದೇಶಕ ನಾಗಿರೆಡ್ಡಿ ಭಡ, ಸುಮಾರು ವರ್ಷಗಳಿಂದ ಚಿತ್ರರಂಗದೊಂದಿಗೆ ನಂಟಿರುವ ನನಗೆ ಇದು ಮೊದಲ ನಿರ್ದೇಶನದ ಚಿತ್ರ. ತಾತಾ, ತಂದೆ ಹಾಗೂ ಮಗ ಮೂರು ತಲೆಮಾರಿನ ಕಥೆ ಇದರಲ್ಲಿದೆ. ಸೆಂಟಿಮೆಂಟ್ ಸನ್ನಿವೇಶಗಳು ಸಖತಾಗಿ ಮೂಡಿಬಂದಿದೆ. ಜನರು ಬಯಸುವ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಇನ್ನೊಂದು ಹಾಡು ಮುಗಿದರೆ ಚಿತ್ರೀಕರಣ ಮುಕ್ತಾಯವಾಗುತ್ತದೆ ಎಂದು ತಿಳಿಸಿದರು.

ನಾನು ಮೂಲತಃ ಬಾಗಲಕೋಟೆಯವನು. ಚಿತ್ರ ನಿರ್ಮಾಣ ಮಾಡಬೇಕೆಂಬುದು ನನ್ನ ಕನಸು. ಅದು ಈಗ ಈಡೇರಿದೆ. ಇದೊಂದು ಪಕ್ಕಾ ಉತ್ತರ ಕರ್ನಾಟಕ ಶೈಲಿಯ ಚಿತ್ರ. ಸಂಭಾಷಣೆ ಕೂಡ ಅದೇ ಸೊಗಡಿನಲ್ಲಿರುತ್ತದೆ. ಯಾವುದಕ್ಕೂ ಕೊರತೆ ಬಾರದ ಹಾಗೆ ಚಿತ್ರವನ್ನು ನಿರ್ಮಿಸುತ್ತಿದ್ದೇನೆ. ಹೆಚ್ಚಿನ ಚಿತ್ರೀಕರಣ ಬಾದಾಮಿ, ಬಾಗಲಕೋಟೆಯಲ್ಲಿ ನಡೆದಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿ ಬರುತ್ತಿದೆ ಎಂದರು ನಿರ್ಮಾಪಕ ಮಹಂತೇಶ್ ವಿ ಚೋಳಚಗುಡ್ಡ.

ಈ ಚಿತ್ರದಲ್ಲಿ ನನ್ನದು ಆಟಗಾರ(ಅಥ್ಲೆಟಿಕ್)ನ ಪಾತ್ರ. "ಲವ್ 360" ಚಿತ್ರದ ನಂತರ ಒಳ್ಳೆಯ ಪಾತ್ರಕ್ಕಾಗಿ ಕಾಯುತ್ತಿದೆ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನನ್ನ ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ ಎಂದು ನಾಯಕ ಪ್ರವೀಣ್ ಕುಮಾರ್ ತಿಳಿಸಿದರು.

"ದೇಸಾಯಿ" ಚಿತ್ರದಲ್ಲಿ ನನ್ನದು ಬೋಲ್ಡ್ ಹುಡುಗಿಯ ಪಾತ್ರ ಎಂದು ತಮ್ಮ ಪಾತ್ರದ ಬಗ್ಗೆ ನಾಯಕಿ ರಾಧ್ಯ ಮಾಹಿತಿ ನೀಡಿದರು. ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್ ಚಿತ್ರದ ಬಗ್ಗೆ ಮಾತನಾಡಿದರು."ಲವ್ 360" ಖ್ಯಾತಿಯ ಪ್ರವೀಣ್ ಕುಮಾರ್ ,ರಾಧ್ಯ, "ಒರಟ" ಪ್ರಶಾಂತ್, ಚೆಲುವರಾಜು, ಮಧುಸೂದನ್ ರಾವ್, ಕಲ್ಯಾಣಿ, ಹರಿಣಿ, ನಟನ ಪ್ರಶಾಂತ್, ಮಂಜುನಾಥ್ ಹೆಗಡೆ, ಸೃಷ್ಟಿ (ಕಾಂತಾರ) ಮುಂತಾದವರು ತಾರಾಬಳಗದಲ್ಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು