LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಕುಮಾರಸ್ವಾಮಿಯವರು ಸಹಿ ಮಾಡಿರುವ ಕಡತಕ್ಕೆ ಮೇಕೆದಾಟು ಸೇರಿದೆಯೇ: ಎಚ್.ಸಿ.ಬಾಲಕೃಷ್ಣ

ಮಾಗಡಿ: ನೂತನವಾಗಿ ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡು ಮೊದಲಬಾರಿಗೆ ಕಡತಕ್ಕೆ ಸಹಿ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಮೇಕೆದಾಟು ಸೇರಿದಂತೆ ಹಲವು ನೀರಾವರಿ ಯೋಜನೆಯ ವಿಚಾರವಾಗಿ ಕಡತಕ್ಕೆ ಸಹಿ ಮಾಡಿದ್ದಾರೆ ಅಂದುಕೊಂಡರೆ ಅರಣ್ಯ ನಾಶ ಮಾಡಲು ಸಹಿ ಮಾಡಿದ್ದಾರೆ ಎಂದು ಶಾಸಕ ಹೆಚ್.ಸಿ.ಬಾಲಕೃಷ್ಣ ವ್ಯಂಗ್ಯವಾಡಿದರು.

ತಾಲ್ಲೂಕಿನ ಕಲ್ಯಾ ಮತ್ತು ತಗ್ಗಿಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸುಮಾರುಇಪ್ಪತ್ತು ಕೋಟಿ ರೂಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಹಾಗೂ ಉದ್ಘಾಟನೆಯನ್ನು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರುಹಾಗೂ ಶಾಸಕರಾದ ಹೆಚ್.ಸಿ.ಬಾಲಕೃಷ್ಣ ಅವರು ಪಕ್ಷದ ಮುಖಂಡರೊಂದಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಮಾಜಿ ನಾಯಕರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕಾ ಸಚಿವರಾಗಿ ಮೊದಲ ಬಾರಿಗೆ ಕಡತಕ್ಕೆ ಸಹಿ ಮಾಡಿರುವುದನ್ನು ನೋಡಿ ಮೇಕೆದಾಟು, ಮಹದಾಯಿ, ಎತ್ತಿನಹೊಳೆ ನೀರಾವರಿ ಯೋಜನೆಯ ವಿಚಾರವಾಗಿ ಸಹಿ ಮಾಡಿದ್ದಾರೆ ಎಂದು ಕೊಂಡರೆ, ಕುದುರೆಮುಖ ಗಣಿಗಾರಿಕೆಗೆ ಅನುಮತಿ ನೀಡಿ, ಅರಣ್ಯ ನಾಶ ಮಾಡಲು ಸಹಿ ಮಾಡುವ ಮೂಲಕ ನಮ್ಮ ನಿರೀಕ್ಷೆಯನ್ನು ಸುಳ್ಳು ಮಾಡಿದ್ದಾರೆ ಎಂದು ಲೇವಡಿ ಮಾಡಿದರು.

ಜೂ.27ರಂದು ನಡೆಯುವ ಕೆಂಪೇಗೌಡರ ಜಯಂತಿಯಂದು ಅಭಿವೃದ್ಧಿಗಾಗಿ ಬಿಡುಗಡೆಯಾಗಿರುವ ಮಾಹಿತಿ ನೀಡುತ್ತೇವೆ; ಸುಮಾರು 150 ಕೋಟಿ ರೂ ವೆಚ್ಚದಲ್ಲಿ ಕೆಂಪೇಗೌಡರ ಕೋಟೆ ಮತ್ತು ಕೆಂಪಾಪುರದಲ್ಲಿರುವ ಸಮಾಧಿಯ ಅಭಿವೃದ್ಧಿಗಾಗಿ ಈಗಾಗಲೇ ಚಾಲನೆ ನೀಡಿದ್ದು, ಅದರಲ್ಲಿ 20 ಕೋಟಿ ರೂಗಳ ಮಂಜೂರಾತಿಯನ್ನು ನೀಡಿದ್ದು, ಇನ್ನೂ 30 ಕೋಟಿ ಬಿಡುಗಡೆಗೆ ರೆಡಿ ಇದೆ. ಇದೇ ತಿಂಗಳ ಜೂ.27ರಂದು ನಡೆಯುವ ಕೆಂಪೇಗೌಡರ ಜಯಂತಿಯಂದು ಅಭಿವೃದ್ಧಿಗಾಗಿ ಬಿಡುಗಡೆಯಾಗಿರುವುದನ್ನು ಮತ್ತೊಮ್ಮೆ ನಿಮ್ಮಗಳ ಮುಂದೆ ಬಿಡುಗಡೆಗೊಳಿಸುವುದಾಗಿ ತಿಳಿಸಿದರು.

ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಮತ್ತು ಉಸ್ತುವಾರಿ ಸಚಿವರಾದ ರಾಮಲಿಂಗರೆಡ್ಡಿ ಅವರು ಶುಕ್ರವಾರ ತಾಲ್ಲೂಕಿನ ಆಗಲಕೋಟೆ ಮತ್ತು ಮತ್ತಿಕೆರೆಯಲ್ಲಿ ನಿರ್ಮಾಣವಾಗಿರುವ ವಿ.ಎಸ್.ಎಸ್.ಎನ್ ಕಟ್ಟಡಗಳನ್ನು ಉದ್ಘಾಟನೆ ಮಾಡಲು ಆಗಮಿಸುತ್ತಿದ್ದಾರೆ. ಪಟ್ಟಣದಲ್ಲಿ 2 ಕೋಟಿ ರೂ ವೆಚ್ಚದಲ್ಲಿ ನೂತನ ಕೃಷಿ ಕಟ್ಟಡದ ಕಾಮಗಾರಿಗೆ ಚಾಲನೆ ನೀಡುತ್ತಿದ್ದು, ಸುಮಾರು 5 ಕೋಟಿ ರೂ ವೆಚ್ಚದಲ್ಲಿ ರೈತರಿಗೆ ತರಬೇತಿಯನ್ನು ನೀಡುವ ಸಂಸ್ಥೆಯನ್ನು ಸ್ಥಾಪಿಸಲು ಮಂಜೂರಾತಿ ನೀಡಿದ್ದಾರೆ ಅವರಿಗೆ ತಾಲ್ಲೂಕಿನ ಜನತೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಹಾಗೂ ರೈತರಿಗೆ ಉತ್ತಮವಾದ ತರಬೇತಿಯನ್ನು ನೀಡುತ್ತಿರುವ ಸಂಸ್ಥೆಗೆ ಹುಲಿಕಟ್ಟೆ ಗ್ರಾಮದಲ್ಲಿ 5 ಎಕರೆಯನ್ನು ಹಸ್ತಾಂತರವನ್ನು ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿರುವುದಾಗಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ತಗ್ಗೀಕುಪ್ಪೆ ಗ್ರಾಪಂ ಅದ್ಯಕ್ಷ ಮದರಾಯ್ಯನಪಾಳ್ಯ ರಾಜಣ್ಣ.ತಹಶೀಲ್ದಾರ್ ಶರತ್ ಕುಮಾರ್, ಕಂದಾಯ ಇಲಾಖೆಯ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಜೆಜೆಎಂ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು, ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು