LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

2ನೇವಿಶ್ವ ಕನ್ನಡ ಹಬ್ಬಕ್ಕೆ ಶುಭಾಶಯ ಕೋರಿದ ಅಮೇರಿಕಾ ಅಕ್ಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಅಮರನಾಥ ಗೌಡ

ಬೆಂಗಳೂರು: ಅಮರನಾಥ ಗೌಡ ರವರು ಕಳೆದ 23 ವರ್ಷಗಳ ಹಿಂದೆ ವಿಶ್ವದ ದೊಡ್ಡಣ್ಣ ಅಮೇರಿಕಾದಲ್ಲಿ ಕನ್ನಡ ಸಂಸ್ಥೆಯನ್ನು ಸ್ಥಾಪಿಸಿ ಅನಿವಾಸಿ ಕನ್ನಡಿಗರನ್ನೆಲ್ಲ ಒಟ್ಟಾಗಿ ಸೇರಿಸಿ ಅಕ್ಕ ಸಮ್ಮೇಳನವನ್ನು ಮಾಡುವ ಮೂಲಕ ವಿಶಿಷ್ಟವಾದ ದಾಖಲೆಯನ್ನು ಬರೆದಿದ್ದರು. ಇಂದು ಅಕ್ಕ ಸಮ್ಮೇಳನ ಎಂದರೆ ಒಂದು ಪ್ರತಿಷ್ಠೆಯ ಸಂಕೇತವಾಗಿದೆ.

ಸುಮಾರು 22 ವರ್ಷಗಳಿಂದ ಅಧ್ಯಕ್ಷರಾಗಿ ಮುಂದುವರೆಯುತ್ತಾ ಅಮೇರಿಕಾ ದೇಶದಲ್ಲಿ ಕನ್ನಡ ನಾಡಿನ ಸಾಂಸ್ಕೃತಿಕ ವೈಭವವನ್ನು ಪ್ರತಿವರ್ಷ ಮೇಳಯಿಸುವಂತೆ ಮಾಡುತ್ತಿರುವ ಅಕ್ಕ ಸಮ್ಮೇಳನಕ್ಕೆ ಕರ್ನಾಟಕ ರಾಜ್ಯದ ಅನೇಕ ಕಲಾವಿದರು ಸಾಹಿತಿಗಳು ಚಲನಚಿತ್ರರಂಗದ ತಾರೆಯರು ಜಾನಪದ ಕಲಾವಿದರು ಗಾಯಕರು. ಪ್ರತಿಷ್ಠಿತ ಗಣ್ಯರು ಭಾಗವಹಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.

ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಆಯೋಜಿಸಿ ಮುನ್ನಡೆಸುತ್ತಿರುವ ವಿಶ್ವ ಕನ್ನಡ ಹಬ್ಬ 2.. ಪ್ರಸ್ತುತ ಕೆಲವೇ ತಿಂಗಳುಗಳಲ್ಲಿ ಸಿಂಗಾಪುರ್ ಮಹಾ ದೇಶದಲ್ಲಿ ನಡೆಯಲಿದೆ ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ನ ಕೇಂದ್ರ ಕಚೇರಿಗೆ ಆಗಮಿಸಿದ ಡಾ. ಅಮರನಾಥ ಗೌಡರವರು ಕರ್ನಾಟಕ ಡಾ.ಶಿವಕುಮಾರ ನಾಗರನವಿಲೆ ಅವರೊಂದಿಗೆ ಮಾತನಾಡುತ್ತಾ.

ವಿಶ್ವ ಕನ್ನಡ ಹಬ್ಬದ ಪರಿಕಲ್ಪನೆಯನ್ನು ಮುಕ್ತ ಕಂಠದಿಂದ ಪ್ರಶಂಶಿಸಿದರು ಅತ್ಯಂತ ಯಶಸ್ವಿಯಾದ ಹಿನ್ನೆಲೆಯಲ್ಲಿ ಎರಡನೇ ವಿಶ್ವಕನ್ನಡ ಹಬ್ಬಕ್ಕೆ ಶುಭಾಶಯಗಳನ್ನು ಕೋರಿದರು.ಅಂತರ ರಾಷ್ಟ್ರೀಯ ಮಟ್ಟದಲ್ಲಿ ಒಂದು ಕಾರ್ಯಕ್ರಮವನ್ನು ಆಯೋಜನೆ ಮಾಡಲು ಮೂಲತಃ ಇಚ್ಛಾ ಶಕ್ತಿ ಬೇಕು, ದೃಢ ಸಂಕಲ್ಪ ಇರಬೇಕು, ಕನ್ನಡದ ಬಗ್ಗೆ ಅಪಾರವಾದ ಗೌರವ ಇರಬೇಕು, ಏನೇ ಬಂದರೂ ಅದನ್ನು ಸಹಿಸುವ ಸಹಿಷ್ಣುವಾದ ಗುಣ ಇರಬೇಕು, ಎಲ್ಲರನ್ನು ಒಟ್ಟಾಗಿ ಕೊಂಡ್ಯೋಯುವ ಮನೋಭಾವ ಇರಬೇಕು,

ಆ ಎಲ್ಲಾ ಅಂಶಗಳು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ನಲ್ಲಿ ಇರುವ ಕಾರಣದಿಂದ ಅತ್ಯಂತ ವಿಜೃಂಭಣೆಯ ಕಾರ್ಯಕ್ರಮವನ್ನು ದುಬೈನಲ್ಲಿ ನಡೆಸಲಾಗಿದೆ ಎರಡನೇ ವಿಶ್ವಕನ್ನಡ ಹಬ್ಬದ ಕಾರ್ಯಕ್ರಮಕ್ಕೆ ನಮಗೂ ಸಹ ಪ್ರೀತಿಯ ಆಮಂತ್ರಣವನ್ನು ನೀಡಿರುವ ಹಿನ್ನೆಲೆಯಲ್ಲಿ ಬಹಳ ಸಂತೋಷವಾಗಿದೆ ಮತ್ತು ಈ ಕಾರ್ಯಕ್ರಮಕ್ಕೆ ಅತ್ಯಂತ ತುಂಬು ಹೃದಯದಿಂದ ಅಭಿನಂದನೆಗಳನ್ನು ತಿಳಿಸುತ್ತಾ ಶುಭಾಶಯಗಳನ್ನು ಕೋರುತ್ತೇನೆ ಎಂದು ಆತ್ಮೀಯವಾಗಿ ನುಡಿದರು. ಮತ್ತು ನಾಡಿನ ಅನೇಕ ಪ್ರತಿಷ್ಠಿತ ವ್ಯಕ್ತಿಗಳು, ಸಾಧಕರು ಮತ್ತು ಸರ್ಕಾರ ಈ ಅವಿಸ್ಮರಣೀಯ ಕಾರ್ಯಕ್ರಮಕ್ಕೆ ಬೆಂಬಲವನ್ನು ನೀಡಬೇಕೆಂದು ಅವರು ವಿನಂತಿ ಮಾಡಿಕೊಂಡರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು