LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bellary

ಆರೋಗ್ಯ ಸೇವೆ ಹಾಗೂ ಶಿಕ್ಷಣ ಉಚಿತವಾಗಿ ನೀಡುವ ಕೆಲಸ ಆಗಬೇಕಿದೆ ಸಾಲುಮರದ ತಿಮ್ಮಕ್ಕ ಅವರ ಪುತ್ರ ಡಾ.ಬಳ್ಳೂರು ಉಮೇಶ್

ಬೇಲೂರು: ದೇಶದಲ್ಲಿ ಶಿಕ್ಷಣ ವ್ಯಾಪಾರಿಕರಣವಾಗಿದ್ದು ಆರೋಗ್ಯ ಸೇವೆ ಹಾಗೂ ಶಿಕ್ಷಣವನ್ನು ಉಚಿತವಾಗಿ ನೀಡುವ ಕೆಲಸ ಆಗಬೇಕಿದೆ ಎಂದು ಸಾಲುಮರದ ತಿಮ್ಮಕ್ಕೆ ಅವರ ಪುತ್ರ ಡಾ.ಬಳ್ಳೂರು ಉಮೇಶ್ ಹೇಳಿದರು.

ಪಟ್ಟಣದ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ವೃತ್ತ ಪತ್ರಿಕೆಗಳ ಉಚಿತ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಸರಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣವಿದ್ದು ಇಂದು ಅನೇಕ ಖಾಸಗಿ ಶಾಲೆಗಳಲ್ಲಿ ಶೂಟುಬೂಟು ಹಾಕಿಕೊಂಡ ಅನರ್ಹ ಶಿಕ್ಷಕರಿಂದಲೇ ಬೋಧನೆ ಮಾಡಿಸುವ ಪರಿಪಾಠ ನಡೆಯುತ್ತಿದೆ.

ಅರ್ಹ ಶಿಕ್ಷಕರಿಂದ ಬೋಧನೆ ದೊರೆಯುತ್ತಿದ್ದರೆ ಅದು ಸರಕಾರಿ ಶಾಲೆಯಿಂದ ಮಾತ್ರ ಎಂದ ಉಮೇಶ್, ಮೌಲ್ಯವಿಲ್ಲದ ಶಿಕ್ಷಣ ಮಕ್ಕಳ ಉಜ್ವಲ ಬದುಕಿಗೆ ತೊಡಕುಂಟಾಗಲಿದೆ. ಮಕ್ಕಳಲ್ಲಿ ಸಂಸ್ಕಾರ, ತಂದೆ, ತಾಯಿ, ಗುರುಗಳಿಗೆ ಗೌರವ ನೀಡುವಂತ ನೀತಿಬೋಧನೆ ಅಗತ್ಯವಿದೆ. ಸರಕಾರಿ ಶಾಲೆಗಳ ಉಳಿಸಿ ಎಂದು ಬೊಟ್ಟು ಮಾಡಿ ತೋರಿಸಿದರೆ ಸಾಲದು ಶಾಲೆಗಳಿಗೆ ಮೂಲಬೂತ ಸೌಲಭ್ಯದ ಕೊರತೆ ನೀಗಿಸಬೇಕಿದೆ.

ವಿದ್ಯಾರ್ಥಿಗಳು ಜ್ಞಾನ ವೃದ್ಧಿಗಾಗಿ ಪತ್ರಿಕೆಗಳನ್ನು ಓದು ಹವ್ಯಾಸ ಬೆಳೆಸಿಕೊಳ್ಳಬೇಕಿದೆ. ಮಕ್ಕಳ ಅತಿಯಾದ ಮೊಬೈಲ್ ಬಳಕೆ ಬಗ್ಗೆ ಪೋಷಕರು ಎಚ್ಚರ ವಹಿಸಬೇಕಿದೆ. ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ಪರಿಸರ ಕಾಳಜಿ ಸಾಲಿನಲ್ಲಿ ಇಂದು ವಿಶ್ವದಲ್ಲಿ ಪ್ರಥಮ ಸ್ಥಾನದಲ್ಲಿದ್ದಾರೆ. ಸಾಲುಮರದ ತಿಮ್ಮಕ್ಕ ಅವರ ಬದುಕು ಕುರಿತು ಹೆಚ್ಚಿನ ಮಾಹಿತಿ ನೀಡಿದರು. ಶಾಲೆಗೆ ಕುಡಿಯುವ ನೀರಿನ ಕೆಲವೊಂದು ವ್ಯವಸ್ಥೆ ಮಾಡಿಕೊಡುವುದಾಗಿ ತಿಳಿಸಿದರು.

ಪುರಸಭೆ ಸದಸ್ಯ ಜಮಾಲುದ್ದೀನ್ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಓದಿದವರು ಇಂದು ಐಎಎಸ್, ಕೆಎಎಸ್, ಐಪಿಎಸ್ ಅಧಿಕಾರಿಗಳಾಗಿದ್ದಾರೆ, ವಿಜ್ಞಾನಿಗಳಾಗಿದ್ದಾರೆ. ವಿದ್ಯಾರ್ಥಿಗಳು ದುಶ್ಚಟದಿಂದ ದೂರವಿದ್ದರೆ ಮೌಲ್ಯಾಧಾರಿತ ಶಿಕ್ಷಣ, ಸಂಸ್ಕಾರಯುತ ಬದುಕು ಸಾಗಿಸಲು ಸಾಧ್ಯವಿದೆ.

ಉತ್ತಮರ ಸ್ನೇಹ, ಉತ್ತಮ ನಡೆ, ನುಡಿ ಬದುಕಿಗೆ ಪೂರಕವಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು. ಶಾಲಾ ಉಪ ಪ್ರಾಂಶುಪಾಲ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ವರ್ಷ ಹತ್ತನೆ ತರಗತಿಯಲ್ಲಿ ಶೇ.91.65 ಫಲಿತಾಂಶ ಬಂದಿದ್ದು ಈ ವರ್ಷ ಶೇ.100 ತರುವ ಉದ್ದೇಶವಿದೆ. ಶಾಲೆಯನ್ನು ಬಿ ಶ್ರೇಣಿಗೆ ತರುವ ಪ್ರಯತ್ನದಲ್ಲಿದ್ದೇವೆಂದರು.
ಈ ಸಂದರ್ಭ ಶಿಕ್ಷಕರಾದ ಟಿ.ಡಿ.ತಮ್ಮಣ್ಣಗೌಡ, ಹೇಮಂತಕುಮಾರ್, ಮನೋಹರ್, ಶಾಹಿದ್, ವರ್ತಕ ಇಮ್ತಿಯಾಜ್ ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು