LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಸಮ್ಮೇತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಹೊಸಕೋಟೆ: ತಾಲೂಕಿನ ಅನುಗೊಂ ಡನಹಳ್ಳಿ ಹೋಬಳಿಯ ಸಮ್ಮೇತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್
ಬೆಂಬಲಿತ ನಡವತ್ತಿ ಕಾಂತರಾಜು, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸುಧಾರಾಣಿ ಅವರು ಆಯ್ಕೆಯಾಗಿದ್ದಾರೆ.

ಒಟ್ಟು 31 ಸದಸ್ಯರ ಸಂಖ್ಯಾಬಲವನ್ನು ಹೊಂದಿರುವ ಸಮ್ಮೇತನಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಿಗದಿ ಮಾಡಲಾಗಿತ್ತು.ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತರಾಗಿ ನಡವತ್ತಿ ಕಾಂತರಾಜು, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಮಮತಾ ಅವರು ನಾಮಪತ್ರವನ್ನು ಸಲ್ಲಿಸಿದ್ದರು.

ಈ ವೇಳೆ ಚುನಾವಣೆ ನಡೆದ ಸಂದರ್ಭದಲ್ಲಿ ಕಾಂಗ್ರೆಸ್ಬೆಂಬಲಿತ ಕಾಂತರಾಜು ಅವರಿಗೆ 17 ಮತ, ಬಿಜೆಪಿ ಬೆಂಬಲಿತ ಮಮತಾ 13 ಮತಗಳನ್ನು ಪಡೆದಿದ್ದು, ಓರ್ವ ಸದಸ್ಯರು ಗೈರಾಗಿದ್ದರು.ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಇಬ್ಬರು ಅಭ್ಯರ್ಥಿಗಳಾಗಿ ಸಂದ್ಯಾ ರಾಣಿ ಹಾಗೂ ಕವಿತಾ ಅಶೋಕ್ ನಾಮಪತ್ರ ಸಲ್ಲಿಸಿ ಚುನಾವಣೆ ಎದುರಿಸಿ ಸಂಧ್ಯಾರಾಣಿ ಅವರು 17 ಮತಗಳನ್ನು ಪಡೆದುಕೊಳ್ಳುವ ಮೂಲಕ ಗೆಲುವು ಸಾಧಿಸಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಕಾಂತರಾಜುಮಾತನಾಡಿ ಬೆಂಗಳೂರು ನಗರಕ್ಕೆ ಹೊಂದಿಕೊಂಡಂತಿರುವ ಸಮೇತನಹಳ್ಳಿ ಗ್ರಾಮವನ್ನ ಸರ್ವತಮುಖವಾಗಿ ಅಭಿವೃದ್ಧಿಪಡಿಸುವುದೇ ನನ್ನ ಗುರಿಯಾಗಿದೆ. ಪ್ರಮುಖವಾಗಿ ಸಾಕಷ್ಟು ಕೈಗಾರಿಕೆಗಳು ಇರುವ ಕಾರಣದಿಂದ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಅಗತ್ಯವಾದ ಅಂತಹ ಶಾಶ್ವತ ಯೋಜನೆಗಳನ್ನ ಕಲ್ಪಿಸುತ್ತೇನೆ. ಪ್ರಮುಖವಾಗಿ ಸಮ್ಮೇತನಹಳ್ಳಿ ಕೆರೆಯನ್ನು ಅಭಿವೃದ್ಧಿಪಡಿಸುವ ದೃಢಸಂಕಲ್ಪ ಹೊಂದಿದ್ದು,
ನನ್ನ ಅವಧಿಯಲ್ಲಿ ಅದನ್ನ ಕಾರ್ಯರೂಪಕ್ಕೆ ತರುವ ಕೆಲಸ ಮಾಡುತ್ತೇನೆ ಎಂದರು.

ಹೋಬಳಿ ಕಾಂಗ್ರೆಸ್ ಮುಖಂಡ ಬೋದನಹೊಸಹಳ್ಳಿ ಪ್ರಕಾಶ್ ಮಾತನಾಡಿ ಸಮ್ಮೇತನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ 23 ಸದಸ್ಯರು ಇದ್ದರು ಸಹ ಶಾಸಕರಾಗಿ ಶರತ್ ಬಚ್ಚೇಗೌಡರು ಆಯ್ಕೆಯಾದ ನಂತರ ತಾಲೂಕಿನಲ್ಲಿ ಅಭಿವೃದ್ದಿಯ ಪರ್ವದ ಜೊತೆಗೆ ಕ್ಷೇತ್ರದ ಜನರನ್ನು ಅವರು ಪಕ್ಷಾತೀತವಾಗಿ, ಧರ್ಮಾತೀತವಾಗಿ ಗೌರವಿಸುತ್ತಿರುವ ಹಿನ್ನೆಲೆ ಪಕ್ಷವನ್ನು ಮರೆತು ಕಾಂಗ್ರೆಸ್ ಬೆಂಬಲಿತರ ಅಭ್ಯರ್ಥಿಗೆ ಮತ ನೀಡಿ, ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವಂತೆ ಮಾಡಿದ್ದಾರೆ. ಆದ್ದರಿಂದ ಈ ಗೆಲುವು ಶಾಸಕ ಶರತ್ ಬಚ್ಚೇಗೌಡರಿಗೆ ಸಲ್ಲಬೇಕು ಎಂದು ಹೇಳಿದರು.

ನೂತನ ಅಧ್ಯಕ್ಷರನ್ನು ಹೋಬಳಿ ಕಾಂಗ್ರೆಸ್ ಮುಖಂಡರುಗಳಾದ ಸಮ್ಮೇತನ ಹಳ್ಳಿ ಸೊಣ್ಣಪ್ಪ, ಮಲ್ಲಸಂದ್ರ ಶೇಷಪ್ಪ, ರೂಪ ಮರಿಯಪ್ಪ, ಮಾನವ ಹಕ್ಕುಗಳ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಸಮ್ಮೇತನಹಳ್ಳಿ ಲಕ್ಷ್ಮಣಸಿಂಗ್, ತತ್ತನೂರು ಮಂಜುನಾಥ್, ಕೊರಳೂರು ಸುರೇಶ್, ಅರವಿಂದ್ ಮಂಜುನಾಥ್, ಉದ್ಯಮಿ ಮುನಿರಾಜು, ಯಲ್ಲಪ್ಪ, ವಿಜಯಕುಮಾರ್ ಸೇರಿದಂತೆ ಹಲವಾರು ಗಣ್ಯರು ಅಭಿನಂದಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು