LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮತದಾರ ಪ್ರಭುಗಳು ಕಾಲೇಜುಗಳಲ್ಲಿ ಉಚಿತ ಪ್ರದರ್ಶನ

ನೆಲಮಂಗಲ ಮೂಲದವರಾದ ಅನಂತರಾಯಪ್ಪ ವೃತ್ತಿಯಲ್ಲಿ ಹಿರಿಯ ವಕೀಲ. ಪ್ರವೃತ್ತಿಯಲ್ಲಿ ನಟ,ನಿರ್ದೇಶಕ. ಈ ಹಿಂದೆ ಸಮಾನತೆಯ ಕಡೆಗೆ ಸಿನಿಮಾವನ್ನು ಜನರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದರು.

ಇದರ ಅನುಭವದಿಂದಲೇ ಈಗ ಮತದಾರ ಪ್ರಭುಗಳು ಚಿತ್ರಕ್ಕೆ ಕಥೆ,ಚಿತ್ರಕಥೆ,ಸಂಭಾಷಣೆ, ಎರಡು ಹಾಡುಗಳಿಗೆ ಸಾಹಿತ್ಯ, ನಿರ್ದೇಶನ ಹಾಗೂ ಮುಖ್ಯ ಪಾತ್ರದಲ್ಲಿ ವಕೀಲನ ಪಾತ್ರಕ್ಕೆ ಬಣ್ಣ ಹಚ್ಚುವುದಲ್ಲದೆ ಮಾಡ್ರನ್ ಫಿಲಂಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ.
ಹೆಸರೇ ಹೇಳುವಂತೆ ಇದೊಂದು ಮತದಾರರಿಗೆ ಜಾಗೃತಿ ಮೂಡಿಸುವ ಅಂಶಗಳನ್ನು ಒಳಗೊಂಡಿದೆ.

ಕಥಾನಾಯಕ ವಕೀಲ. ಸಂಘ ಕಟ್ಟಿಕೊಂಡು ಭ್ರಷ್ಟಚಾರದ ವಿರುದ್ದ ಹೋರಾಟ ಮಾಡುತ್ತಿರುತ್ತಾರೆ. ಅದು ಫಲ ಕೊಡದೆ ಇದ್ದಾಗ, ಅನಿವಾರ್ಯವಾಗಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ, ಸಣ್ಣದೊಂದು ಸಾಕ್ಷ್ಯಚಿತ್ರ ಸಿದ್ದಪಡಿಸಿ, ಪ್ರದರ್ಶನ ಏರ್ಪಡಿಸುತ್ತಾರೆ. ಇದರಿಂದ ರಾಜ್ಯದಲ್ಲಿ ಮಹತ್ವದ ಬದಲಾವಣೆ ಆಗುತ್ತದೆ. ಅದು ಏನು ಎಂಬುದನ್ನು ತಿಳಿಯಲು ಚಿತ್ರ ನೋಡಬೇಕು. ಇದರಲ್ಲಿ ಯಾವುದೇ ಪಕ್ಷವನ್ನು ಬಿಂಬಿಸದೆ, ವೈಯಕ್ತಿಕ ಹೆಸರನ್ನು ಬಳಸದೆ, ಮುಕ್ತವಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆ.

ದೇಶದ ಪ್ರಜೆಯಾಗಿ ನಮ್ಮ ಜವಬ್ದಾರಿ ಏನು? ಎಂತಹವರಿಗೆ ಮತ ಚಲಾಯಿಸಬೇಕು, ಚಲಾಯಿಸಬಾರದು. ದುಡ್ಡಿಗಾಗಿ ಆಸೆ ಪಡದೆ, ಉಡುಗೊರೆ ಅಮಿಷಕ್ಕೆ ಒಳಗಾಗದೆ, ಜಾತಿಯ ಪ್ರೇಮಕ್ಕೆ ಬಲಿಯಾಗದೆ, ಪಾರದರ್ಶಕವಾಗಿ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಬೇಕು. ಜನಗಳು ಮನಸ್ಸು ಮಾಡಿದರೆ ಮಾತ್ರ ಪರಿಶುದ್ದ ರಾಜಕೀಯ ತರಬಹುದು ಎಂಬುದನ್ನು ಸಂದೇಶದೊಂದಿಗೆ ಹೇಳಲಾಗಿದೆ.

ತಾರಾಗಣದಲ್ಲಿ ನೊಣವಿನಕೆರೆ ರಾಮಕೃಷ್ಣಯ್ಯ, ಜಯರಾಂ, ಹನುಮಂತರಾಜು, ಕಮ್ತೂರು, ತ್ರಿವೇಣಿ, ರಾಜಲಕ್ಷೀ ಮುಂತಾದವರು ನಟಿಸಿದ್ದಾರೆ. ಸಂಗೀತ ವೇಣುಗೋಪಾಲ್, ಹಿನ್ನಲೆ ಶಬ್ದ ವೆಂಕಟೇಶ್, ಛಾಯಾಗ್ರಹಣ ಅಚ್ಚುಸುರೇಶ್, ಸಂಕಲನ ಗಂಗಾಧರ್, ನೃತ್ಯ ಸದಾರಾಘವ ಅವರದಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.

ಮುಂದಿನ ಪೀಳಿಗೆ, ಅದರಲ್ಲೂ ವಿದ್ಯಾರ್ಥಿ ಸಮುದಾಯದಲ್ಲಿ ಮತ ಚಲಾವಣೆ ಮಹತ್ವದ ಬಗ್ಗೆ ಅರಿವು ಮೂಡಿಸಲು ಕರ್ನಾಟಕದ ಎಲ್ಲಾ ಸ್ಥಳಗಳಾದ ಕಾಲೇಜು, ವಿಶ್ವವಿದ್ಯಾಲಯಗಳು ಹಾಗೂ ತಾಲ್ಲೋಕು ಮಟ್ಟದ ಚಿತ್ರಮಂದಿರದಲ್ಲಿ ಒಂದು ಪ್ರದರ್ಶನವನ್ನು ಸಾರ್ವಜನಿಕರಿಗೆ ಉಚಿತವಾಗಿ ತೋರಿಸಲು ಯೋಜನೆ ಹಾಕಿಕೊಂಡಿದ್ದು, ಈಗಾಗಲೇ ಚಾಲನೆ ಸಿಕ್ಕಿದೆ.

ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು ಚಿತ್ರ ನೋಡಲು ಬಯಸಿದಲ್ಲಿ ಅಂತಹವರಿಗೂಸಹ ಉಚಿತವಾಗಿ ತೋರಿಸಲು ಸಿದ್ದರಿದ್ದು, ತಮ್ಮನ್ನು ಸಂಪರ್ಕಿಸಬಹುದೆಂದು (ಸಂ.9449458392) ನಿರ್ಮಾಪಕರು ತಿಳಿಸಿದ್ದಾರೆ. ಸೆನ್ಸಾರ್‍ನಿಂದ ಪ್ರಶಂಸೆಗೆ ಒಳಪಟ್ಟಿದ್ದು ಯು ಪ್ರಮಾಣ ಪತ್ರ ಪಡೆದುಕೊಂಡಿರುವ ಚಿತ್ರವು ಮಾರ್ಚ್ ತಿಂಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು