LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಅಧಿವೇಶನದಲ್ಲಿ ಸುಳ್ಳು ಮಾಹಿತಿ

ಬೆಂಗಳೂರು: ಈ ಬಾರಿಯ ಅಧಿವೇಶನವನ್ನು ಸಿಎಂ ಸಿದ್ಧರಾಮಯ್ಯ ಹಾಗೂ ಸರ್ಕಾರ ಸುಳ್ಳು ಮಾಹಿತಿ ನೀಡಲು ಬಳಸಿಕೊಂಡಿದೆ ಎಂದು ಬಿಜೆಪಿ ಮುಖಂಡ ವಿಧಾನಪರಿಷತ್ ವಿಪಕ್ಷ ನಾಯಕ ಕೋಟಾಶ್ರೀನಿವಾಸ್ ಪೂಜಾರಿ ಆರೋಪಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ. ಅಲ್ಲೂ ಇಲ್ಲೋ ನಡೆಯುತ್ತಿದ್ದ ಘಟನೆ ವಿಧಾನಸೌಧದಲ್ಲಿ ನಡೆದಿರುವುದು ನೋವಿನ ಸಂಗತಿ ಅಂದರೆ, ಕೆಂಗಲ್ ಹನುಮಂತಯ್ಯ ಕಟ್ಟಿದ ವಿಧಾನಸೌಧದಲ್ಲಿ ಘೋಷಣೆ ಮೊಳಗಿದೆ.

ಘಟನೆ ನಡೆದು 60 ಘಂಟೆ ಕಳೆದಿದೆ. ಈವರೆಗೂ ಯಾರನ್ನು ಬಂಧಿಸಿಲ್ಲ. ಇಡೀ ಸಚಿವ ಸಂಪುಟ ಘೋಷಣೆ ಪರ ಕೂಗಿದವರ ಪರವಿದ್ದಾರೆ. ನೀವು ಶತ್ರು ರಾಷ್ಟ್ರ ಅನ್ನುವುದನ್ನು ಒಪ್ಪಿಕೊಳ್ಳಿ ಎಂದರೆ, ಅದು ನಮ್ಮ ನೆರೆ ರಾಷ್ಟ್ರ ಎನ್ನುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿನ್ನೆ ನಾವು ರಾಜ್ಯಪಾಲರನ್ನು ಭೇಟಿಯಾಗಿದ್ದೇವೆ. ಅವರು ನಮಗೆ ನ್ಯಾಯ ಕೊಡಿಸುವ ಭರವಸೆ ಕೊಡಿಸುತ್ತೇನೆ ಎಂದಿದ್ದಾರೆ. ಅದು ನಮಗೆ ತೃಪ್ತಿ ತಂದಿದೆ ಎಂದು ಕೋಟಾ ಶ್ರೀನಿವಾಸಪೂಜಾರಿ ತಿಳಿಸಿದ್ದಾರೆ.

ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ನಾಸೀರ್ ಹುಸೇನ್ ಎಂಬುವವರು ಇದನ್ನು ಖಂಡಿಸುವ ಕೆಲಸ ಮಾಡಿಲ್ಲ. ಸಿಎಂ ನಿನ್ನೆ ಅನ್ನಭಾಗ್ಯದ ಕಾರ್ಯಕ್ರಮವೊಂದು ಮಾಡಿದ್ದಾರೆ. ಕೇಂದ್ರ ಸರ್ಕಾರ ಪ್ರತಿ ತಿಂಗಳು 22 ಲಕ್ಷ ಕ್ವಿಂಟಾಲ್ ಅಕ್ಕಿ ಕಳುಹಿಸುತ್ತಿದೆ. ಕೇಂದ್ರ ಸರ್ಕಾರದ ವಿರುದ್ಧ ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಕೊಡುವ ಅಕ್ಕಿಯಿಂದ ಅನ್ನಭಾಗ್ಯ ಕಾರ್ಯಕ್ರಮ ಮಾಡಿದ್ದಾರೆ. ಬಿಜೆಪಿ ಸಂವಿಧಾನ ವಿರೋಧಿ ಅಂತಾರೆ.

ಮೊನ್ನೆ ಸುಮಾರು 20 ಕೋಟಿ ರೂಪಾಯಿ ವೆಚ್ಚದಲ್ಲಿ ಸಂವಿಧಾನದ ಸಭೆ ನಡೆಸಿದ್ದಾರೆ. ನಿತಾಶ ಕೌಲ್ ಎಂಬವರನ್ನು ವಿದೇಶದಿಂದ ಕರೆಸಿ ಭಾಷಣ ಮಾಡಿಸಲು ಮುಂದಾಗಿದ್ದರು. ಸಂವಿಧಾನಕ್ಕೆ ಮೋಸ ಮಾಡಿದವರು ಯಾರಾದ್ರೂ ಇದ್ದರೇ, ಅದು ಕಾಂಗ್ರೆಸ್‍ನವರು ಎಂದು ದೂರಿದರು.

ಕಾಶ್ಮೀರದಲ್ಲಿ 370 ರದ್ದು ಮಾಡುವವರೆಗೂ ಮೀಸಲಾತಿ ಇರಲಿಲ್ಲ. ಕಾಶ್ಮೀರದಲ್ಲಿ ಶಾಂತಿ ಸುವ್ಯವಸ್ಥೆ 370 ರದ್ದಾದ ಮೇಲಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ 500 ಮೀ ರಸ್ತೆ ಹಾಕಲು ದುಡ್ಡಿಲ್ಲ. ಶಾಸಕರು ಗೆದ್ದವರು ಬೇಸರದಲ್ಲಿದ್ದಾರೆ. ಒಂದೇ ಒಂದು ಅಭಿವೃದ್ಧಿ ಕೆಲಸಗಳು ಆಗಿಲ್ಲ. ಇಡೀ ಸದನದಲ್ಲಿ ಸುಳ್ಳು ಹೇಳಲು ಸರ್ಕಾರ ಬಳಕೆ ಮಾಡಿಕೊಂಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು